ಮಾಜಿ ಪಿಎಂ ಎಚ್.ಡಿ ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್ಗೆ ಕರೆದುಕೊಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನು ಮಾಡಬೇಕು ಅಂತ ನನ್ನ ಆಸೆ ಇದೆ. ನಾನು ಬದುಕಿರುವುದರೊಳಗೆ ಮಾಡಿ ತೋರಿಸ್ತೀನಿ. ಐದು ವರ್ಷಕ್ಕೆ ಮಾಡ್ತೀನೋ, ಹತ್ತು ವರ್ಷಕ್ಕೆ ಮಾಡ್ತೀನೋ. ಇಡೀ ರಾಜ್ಯದಲ್ಲಿ ಹಾಸನ ಜಿಲ್ಲೆಯನ್ನು ನಂಬರ್ ಒನ್ ಮಾಡಿ ತೋರಿಸ್ತೀನಿ. ಇಲ್ಲವಾದಲ್ಲಿ ಇನ್ನೊಂದು ಸಾರಿ ರಾಜಕೀಯಕ್ಕೆ ಬರಲ್ಲ ಎಂದು ಚಾಲೆಂಜ್ ಹಾಕಿದರು.
ಕಾಂಗ್ರೆಸ್ನವರು ಮಾಡಿ ಕೊಟ್ಟರೆ ಸಂತೋಷ. ಇಲ್ಲವಾದರೆ ನಮಗೂ ಟೈಂ ಬರುತ್ತೆ. ನನ್ನ ಗ್ರಹಗತಿಗಳು ಇನ್ನೂ ಚೆನ್ನಾಗಿವೆ. ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್ಗೆ ಕರ್ಕಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸ್ತೀವಿ. ಯಾವ ಕ್ಷೇತ್ರ ಅಂತ ಮುಂದೆ ನೋಡೋಣ ಎಂದರು.
ದೇವೇಗೌಡರಿಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಅವರು ನಿಲ್ಲಲ್ಲ ಅಂದ್ರು ನಾವು ಬಿಡಲ್ಲ. ಲೋಕಸಭೆ ಚುನಾವಣೆಗೆ ನಿಲ್ಲಿಸಿ, ಗೆಲ್ಲಿಸಿ ಲೋಕಸಭೆಗೆ ಕಳುಹಿಸುತ್ತೇವೆ. ಹಾಸನ ಜಿಲ್ಲೆಯಿಂದ ಲೋಕಸಭೆ ಚುನಾವಣೆಗೆ ಪ್ರಜ್ವಲ್ ರೇವಣ್ಣನೇ ಸ್ಪರ್ಧೆ ಮಾಡುತ್ತಾನೆ ಎಂದು ಹೇಳಿದರು.
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…