ಮಾಜಿ ಪಿಎಂ ಎಚ್.ಡಿ ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್ಗೆ ಕರೆದುಕೊಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನು ಮಾಡಬೇಕು ಅಂತ ನನ್ನ ಆಸೆ ಇದೆ. ನಾನು ಬದುಕಿರುವುದರೊಳಗೆ ಮಾಡಿ ತೋರಿಸ್ತೀನಿ. ಐದು ವರ್ಷಕ್ಕೆ ಮಾಡ್ತೀನೋ, ಹತ್ತು ವರ್ಷಕ್ಕೆ ಮಾಡ್ತೀನೋ. ಇಡೀ ರಾಜ್ಯದಲ್ಲಿ ಹಾಸನ ಜಿಲ್ಲೆಯನ್ನು ನಂಬರ್ ಒನ್ ಮಾಡಿ ತೋರಿಸ್ತೀನಿ. ಇಲ್ಲವಾದಲ್ಲಿ ಇನ್ನೊಂದು ಸಾರಿ ರಾಜಕೀಯಕ್ಕೆ ಬರಲ್ಲ ಎಂದು ಚಾಲೆಂಜ್ ಹಾಕಿದರು.
ಕಾಂಗ್ರೆಸ್ನವರು ಮಾಡಿ ಕೊಟ್ಟರೆ ಸಂತೋಷ. ಇಲ್ಲವಾದರೆ ನಮಗೂ ಟೈಂ ಬರುತ್ತೆ. ನನ್ನ ಗ್ರಹಗತಿಗಳು ಇನ್ನೂ ಚೆನ್ನಾಗಿವೆ. ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್ಗೆ ಕರ್ಕಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸ್ತೀವಿ. ಯಾವ ಕ್ಷೇತ್ರ ಅಂತ ಮುಂದೆ ನೋಡೋಣ ಎಂದರು.
ದೇವೇಗೌಡರಿಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಅವರು ನಿಲ್ಲಲ್ಲ ಅಂದ್ರು ನಾವು ಬಿಡಲ್ಲ. ಲೋಕಸಭೆ ಚುನಾವಣೆಗೆ ನಿಲ್ಲಿಸಿ, ಗೆಲ್ಲಿಸಿ ಲೋಕಸಭೆಗೆ ಕಳುಹಿಸುತ್ತೇವೆ. ಹಾಸನ ಜಿಲ್ಲೆಯಿಂದ ಲೋಕಸಭೆ ಚುನಾವಣೆಗೆ ಪ್ರಜ್ವಲ್ ರೇವಣ್ಣನೇ ಸ್ಪರ್ಧೆ ಮಾಡುತ್ತಾನೆ ಎಂದು ಹೇಳಿದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…