ಮಾಜಿ ಪಿಎಂ ಎಚ್.ಡಿ ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್ಗೆ ಕರೆದುಕೊಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನು ಮಾಡಬೇಕು ಅಂತ ನನ್ನ ಆಸೆ ಇದೆ. ನಾನು ಬದುಕಿರುವುದರೊಳಗೆ ಮಾಡಿ ತೋರಿಸ್ತೀನಿ. ಐದು ವರ್ಷಕ್ಕೆ ಮಾಡ್ತೀನೋ, ಹತ್ತು ವರ್ಷಕ್ಕೆ ಮಾಡ್ತೀನೋ. ಇಡೀ ರಾಜ್ಯದಲ್ಲಿ ಹಾಸನ ಜಿಲ್ಲೆಯನ್ನು ನಂಬರ್ ಒನ್ ಮಾಡಿ ತೋರಿಸ್ತೀನಿ. ಇಲ್ಲವಾದಲ್ಲಿ ಇನ್ನೊಂದು ಸಾರಿ ರಾಜಕೀಯಕ್ಕೆ ಬರಲ್ಲ ಎಂದು ಚಾಲೆಂಜ್ ಹಾಕಿದರು.
ಕಾಂಗ್ರೆಸ್ನವರು ಮಾಡಿ ಕೊಟ್ಟರೆ ಸಂತೋಷ. ಇಲ್ಲವಾದರೆ ನಮಗೂ ಟೈಂ ಬರುತ್ತೆ. ನನ್ನ ಗ್ರಹಗತಿಗಳು ಇನ್ನೂ ಚೆನ್ನಾಗಿವೆ. ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್ಗೆ ಕರ್ಕಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸ್ತೀವಿ. ಯಾವ ಕ್ಷೇತ್ರ ಅಂತ ಮುಂದೆ ನೋಡೋಣ ಎಂದರು.
ದೇವೇಗೌಡರಿಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಅವರು ನಿಲ್ಲಲ್ಲ ಅಂದ್ರು ನಾವು ಬಿಡಲ್ಲ. ಲೋಕಸಭೆ ಚುನಾವಣೆಗೆ ನಿಲ್ಲಿಸಿ, ಗೆಲ್ಲಿಸಿ ಲೋಕಸಭೆಗೆ ಕಳುಹಿಸುತ್ತೇವೆ. ಹಾಸನ ಜಿಲ್ಲೆಯಿಂದ ಲೋಕಸಭೆ ಚುನಾವಣೆಗೆ ಪ್ರಜ್ವಲ್ ರೇವಣ್ಣನೇ ಸ್ಪರ್ಧೆ ಮಾಡುತ್ತಾನೆ ಎಂದು ಹೇಳಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…