Advertisement
ಸುದ್ದಿಗಳು

ಮುನಿಸು ಮರೆತ ಎಚ್‌ಡಿ ರೇವಣ್ಣ; ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪರ ಪ್ರಚಾರಕ್ಕಿಳಿಯಲು ರೆಡಿ

Share

ಕರ್ನಾಟಕ ವಿಧಾನಸಭಾ ಚುನಾವಣೆಯ ರಣಕಣ ದಿನಕಳೆಯುತ್ತಿದ್ದಂತೆ ರಂಗೇರುತ್ತಿದೆ. ಹಾಸನದಲ್ಲಿ ಜೆಡಿಎಸ್‌ ಟಿಕೆಟ್ ವಿಚಾರವಾಗಿ ಎಚ್‌ಡಿ ರೇವಣ್ಣ  ಮತ್ತು ಎಚ್‌ಡಿ ಕುಮಾರಸ್ವಾಮಿ ಕುಟುಂಬದ ಮಧ್ಯೆ ಉಂಟಾದ ವೈಮನಸ್ಸಿನಿಂದ ಎಚ್‌ಡಿ ದೇವೇಗೌಡರ  ಕುಟುಂಬ ಒಡೆಯಿತು ಎಂದು ಎಲ್ಲರೂ ಅಂದುಕೊಳ್ಳುತ್ತಿದ್ದಾಗಲೇ ಇದೀಗ ಎಲ್ಲವೂ ಸರಿ ಹೋಗುವತ್ತ ಜೆಡಿಎಸ್‌ ಮುಖ ಮಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಅವರು ಎಚ್‌ಡಿ ರೇವಣ್ಣರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು.. ಆರಂಭದಲ್ಲಿ ಎಚ್‌ಡಿ ರೇವಣ್ಣ, ಭವಾನಿ ರೇವಣ್ಣ ಸೇರಿದಂತೆ ಅವರ ಕುಟುಂಬ ಭವಾನಿ ರೇವಣ್ಣ ಅಥವಾ ಎಚ್‌ಡಿ ರೇವಣ್ಣಗೆ ಟಿಕೆಟ್‌ ನೀಡಬೇಕು. ಆ ಮೂಲಕ ಹಾಲಿ ಶಾಸಕ ಪ್ರೀತಂ ಗೌಡರನ್ನು ಸೋಲಿಸಬೇಕು ಎಂದು ಪಣ ತೊಟ್ಟು ಟಿಕೆಟ್‌ಗೆ ಆಗ್ರಹಿಸಿತ್ತು. ಆದರೆ ಎಚ್‌ಡಿ ಕುಮಾರಸ್ವಾಮಿ ಮಾತ್ರ ಸ್ವರೂಪ್‌ಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಲ್ಲದೇ, ಸ್ವರೂಪ್‌ಗೆ ಟಿಕೆಟ್ ನೀಡುವಲ್ಲಿ ಯಶಸ್ವಿಯಾಗಿದ್ದರು.

ಮುನಿಸು ಮರೆತು ಒಂದಾದ ದಳಪತಿಗಳು : ಇದೀಗ ಈ ಜಿದ್ದಾಟವೆಲ್ಲವನ್ನೂ ಮರೆತು ಪಕ್ಷದ ಗೆಲುವೇ ಮುಖ್ಯ ಎಂದು ಅರಿತಿರುವ ಎಚ್‌ಡಿ ರೇವಣ್ಣ ಹಾಸನ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪರ ಪ್ರಚಾರಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ. ಎಚ್‌ಡಿ ರೇವಣ್ಣ ಅವರ ಮನವೊಲಿಸುವಲ್ಲಿ ಹಾಸನ ಜೆಡಿಎಸ್‌ ಅಭ್ಯರ್ಥಿ ಸ್ವರೂಪ್ ಯಶಸ್ವಿಯಾಗಿದ್ದು, ಇದೀಗ ಎಚ್‌ಪಿ ಸ್ವರೂಪ್ ಪರ ಪ್ರಚಾರಕ್ಕೆ ಇಳಿಯಲು ಎಚ್‌ಡಿ ರೇವಣ್ಣ‌ ಮತ್ತು ಫ್ಯಾಮಿಲಿ ರೆಡಿಯಾಗಿದೆ.

ಈ ಹಿನ್ನೆಲೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರು ಇಂದು ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಹಿರಿಯರ ಸಭೆ ಕರೆದಿದ್ದು, ಈ ಸಭೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ, ಎಚ್‌ಡಿ ರೇವಣ್ಣ, ಭವಾನಿ ರೇವಣ್ಣ, ಹಾಗೂ ಎಂಎಲ್‌ಸಿ ಸೂರಜ್‌ ರೇವಣ್ಣ ಭಾಗಿಯಾಗಲಿದ್ದಾರೆ. ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಎಚ್‌ಡಿ ರೇವಣ್ಣ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಇನ್ನು ಜೆಡಿಎಸ್ ಅಭ್ಯರ್ಥಿ ಎಚ್‌ಪಿ ಸ್ವರೂಪ್‌ ಅವರು ನಾಳೆ ಹಾಸನದಲ್ಲಿ ಬೃಹತ್ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಲಿದ್ದು, ಈ ಬೃಹತ್ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಮಾಜಿ ಸಿಎಂ ಎಚ್‌ಡಿ‌ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಭಾಗಿಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

9 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

14 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

23 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago