Advertisement
ಸುದ್ದಿಗಳು

ಮುನಿಸು ಮರೆತ ಎಚ್‌ಡಿ ರೇವಣ್ಣ; ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪರ ಪ್ರಚಾರಕ್ಕಿಳಿಯಲು ರೆಡಿ

Share

ಕರ್ನಾಟಕ ವಿಧಾನಸಭಾ ಚುನಾವಣೆಯ ರಣಕಣ ದಿನಕಳೆಯುತ್ತಿದ್ದಂತೆ ರಂಗೇರುತ್ತಿದೆ. ಹಾಸನದಲ್ಲಿ ಜೆಡಿಎಸ್‌ ಟಿಕೆಟ್ ವಿಚಾರವಾಗಿ ಎಚ್‌ಡಿ ರೇವಣ್ಣ  ಮತ್ತು ಎಚ್‌ಡಿ ಕುಮಾರಸ್ವಾಮಿ ಕುಟುಂಬದ ಮಧ್ಯೆ ಉಂಟಾದ ವೈಮನಸ್ಸಿನಿಂದ ಎಚ್‌ಡಿ ದೇವೇಗೌಡರ  ಕುಟುಂಬ ಒಡೆಯಿತು ಎಂದು ಎಲ್ಲರೂ ಅಂದುಕೊಳ್ಳುತ್ತಿದ್ದಾಗಲೇ ಇದೀಗ ಎಲ್ಲವೂ ಸರಿ ಹೋಗುವತ್ತ ಜೆಡಿಎಸ್‌ ಮುಖ ಮಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಅವರು ಎಚ್‌ಡಿ ರೇವಣ್ಣರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು.. ಆರಂಭದಲ್ಲಿ ಎಚ್‌ಡಿ ರೇವಣ್ಣ, ಭವಾನಿ ರೇವಣ್ಣ ಸೇರಿದಂತೆ ಅವರ ಕುಟುಂಬ ಭವಾನಿ ರೇವಣ್ಣ ಅಥವಾ ಎಚ್‌ಡಿ ರೇವಣ್ಣಗೆ ಟಿಕೆಟ್‌ ನೀಡಬೇಕು. ಆ ಮೂಲಕ ಹಾಲಿ ಶಾಸಕ ಪ್ರೀತಂ ಗೌಡರನ್ನು ಸೋಲಿಸಬೇಕು ಎಂದು ಪಣ ತೊಟ್ಟು ಟಿಕೆಟ್‌ಗೆ ಆಗ್ರಹಿಸಿತ್ತು. ಆದರೆ ಎಚ್‌ಡಿ ಕುಮಾರಸ್ವಾಮಿ ಮಾತ್ರ ಸ್ವರೂಪ್‌ಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಲ್ಲದೇ, ಸ್ವರೂಪ್‌ಗೆ ಟಿಕೆಟ್ ನೀಡುವಲ್ಲಿ ಯಶಸ್ವಿಯಾಗಿದ್ದರು.

ಮುನಿಸು ಮರೆತು ಒಂದಾದ ದಳಪತಿಗಳು : ಇದೀಗ ಈ ಜಿದ್ದಾಟವೆಲ್ಲವನ್ನೂ ಮರೆತು ಪಕ್ಷದ ಗೆಲುವೇ ಮುಖ್ಯ ಎಂದು ಅರಿತಿರುವ ಎಚ್‌ಡಿ ರೇವಣ್ಣ ಹಾಸನ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪರ ಪ್ರಚಾರಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ. ಎಚ್‌ಡಿ ರೇವಣ್ಣ ಅವರ ಮನವೊಲಿಸುವಲ್ಲಿ ಹಾಸನ ಜೆಡಿಎಸ್‌ ಅಭ್ಯರ್ಥಿ ಸ್ವರೂಪ್ ಯಶಸ್ವಿಯಾಗಿದ್ದು, ಇದೀಗ ಎಚ್‌ಪಿ ಸ್ವರೂಪ್ ಪರ ಪ್ರಚಾರಕ್ಕೆ ಇಳಿಯಲು ಎಚ್‌ಡಿ ರೇವಣ್ಣ‌ ಮತ್ತು ಫ್ಯಾಮಿಲಿ ರೆಡಿಯಾಗಿದೆ.

ಈ ಹಿನ್ನೆಲೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರು ಇಂದು ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಹಿರಿಯರ ಸಭೆ ಕರೆದಿದ್ದು, ಈ ಸಭೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ, ಎಚ್‌ಡಿ ರೇವಣ್ಣ, ಭವಾನಿ ರೇವಣ್ಣ, ಹಾಗೂ ಎಂಎಲ್‌ಸಿ ಸೂರಜ್‌ ರೇವಣ್ಣ ಭಾಗಿಯಾಗಲಿದ್ದಾರೆ. ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಎಚ್‌ಡಿ ರೇವಣ್ಣ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಇನ್ನು ಜೆಡಿಎಸ್ ಅಭ್ಯರ್ಥಿ ಎಚ್‌ಪಿ ಸ್ವರೂಪ್‌ ಅವರು ನಾಳೆ ಹಾಸನದಲ್ಲಿ ಬೃಹತ್ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಲಿದ್ದು, ಈ ಬೃಹತ್ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಮಾಜಿ ಸಿಎಂ ಎಚ್‌ಡಿ‌ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಭಾಗಿಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

16 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

22 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago