Advertisement
ಸುದ್ದಿಗಳು

ಸರ್ಕಾರಿ ಶಾಲೆಯ ಹಾಲಿನ ಪುಡಿ ಮನೆಗೆ ಸಾಗಿಸಿದ ಮುಖ್ಯ ಶಿಕ್ಷಕ | ಮೈಸೂರಿನಲ್ಲಿ ಸಿಕ್ಕಿಬಿದ್ದ ಶಿಕ್ಷಕ |

Share
ಶಾಲೆಗೆ ಬರುವ ಮಕ್ಕಳು(Children) ಆರೋಗ್ಯಯುತವಾಗಿರಲಿ. ಮಕ್ಕಳಿಗೆ ಕುಪೋಷಣೆ ಕಾಡದಿರಲಿ ಎಂದು ಸರ್ಕಾರ ವಿವಿಧ ಆರೋಗ್ಯ ಯೋಜನೆಗಳನ್ನು(Health Scheme) ಜಾರಿಗೆ ತಂದಿದೆ. ಆದರೆ ಅದು ಮಕ್ಕಳನ್ನು ತಲುಪುವ ಬದಲು ಇನ್ಯಾರದ್ದೋ ಹೊಟ್ಟೆಗೆ ಹೋಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಆ ಶಾಲೆಯ ಶಿಕ್ಷಕರು. ಇದೀಗ ಮಕ್ಕಳ ಅಪೌಷ್ಠಿಕತೆ ಹೊಗಲಾಡಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ನೀಡುತ್ತಿದ್ದ ಹಾಲಿನ ಪುಡಿ ಪ್ಯಾಕೆಟ್‌ಗಳನ್ನು ಮನೆಗೆ ಕೊಂಡೊಯ್ಯುತ್ತಿದ್ದ ಮುಖ್ಯ ಶಿಕ್ಷಕ ರೆಡ್ ಹ್ಯಾಂಡ್ ಆಗಿ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಜಿಲ್ಲೆಯ ಹೆಚ್.ಡಿ. ಕೋಟೆ (Heggadadevankote) ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆಯ ಗಣೇಶ್ ಸಿಕ್ಕಿಬಿದ್ದ ಮುಖ್ಯ ಶಿಕ್ಷಕ(HeadTeacher).

ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಉಚಿತವಾಗಿ ನೀಡುವ ಒಟ್ಟು 10 ಹಾಲಿನ ಪುಡಿಗಳು ಶಿಕ್ಷಕ ದ್ವಿಚಕ್ರ ವಾಹನದಲ್ಲಿ ಕೊಂಡೊಯ್ಯುತ್ತಿರುವಾಗ ಸಿಕ್ಕಿಬಿದ್ದಿದ್ದಾನೆ. ಹಾಲಿನ ಪ್ಯಾಕೆಟ್‌ಗಳ ಅವಧಿ ಮೀರಿದ್ದರಿಂದ ಮನೆಗೆ ಕೊಂಡೊಯ್ಯುತ್ತಿದ್ದೆ ಎಂದು ಶಿಕ್ಷಕ ಸ್ಪಷ್ಟೀಕರಣ ಕೊಡಲು ಮುಂದಾಗಿದ್ದರು. ಆದರೆ ಹಾಲಿನ ಪ್ಯಾಕೆಟ್‌ಗಳ ಪರಿಶೀಲನೆ ಮಾಡಿದಾಗ ಬರುವ ಡಿಸೆಂಬರ್ ವರೆಗೂ ಹಾಲಿನ ಪುಡಿ ಬಳಕೆ ಮಾಡಲು ಅವಧಿ ಇರುವುದು ಖಾತರಿಯಾಗಿದೆ. ಹಾಲಿನ ಪುಡಿಗಳ ಸಮೇತ ದ್ವಿಚಕ್ರ ವಾಹನವನ್ನು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

– ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

14 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago