#Jackfruit | ಹಲಸಿನ ಹಣ್ಣಿನ ಕಾಲ ಇದು | ಸಿಕ್ಕರೆ ತಿನ್ನದೇ ಬಿಡಬೇಡಿ | ಇದರಲ್ಲಿದೆ ಆರೋಗ್ಯದ ಗುಟ್ಟು |

June 16, 2023
5:10 PM

ಹಲಸಿನ ಹಣ‍್ಣು  ವೈಜ್ಞಾನಿಕವಾಗಿ ಆರ್ಟೋಕಾರ್ಪಸ್ ಹೆಟಿರೋಫೈಲಸ್ ಎಂಬ ಹೆಸರುಳ್ಳ ಇಂಗ್ಲಿಷ್ನಲ್ಲಿ ಜಾಕ್ ಫ‍್ರೂಟ್ #jackfruit ಎಂದು ಕರೆಯಲಾಗುತ್ತದೆ. ಹಲಸು ಆಹಾರ ಮೌಲ್ಯಗಳನ್ನು ಮಾತ್ರವಲ್ಲ, ಔಷಧೀಯ ಅಂಶಗಳನ್ನೂ ಒಳ ಗೊಂಡಿದೆ. 

ಇದರ ಕಾಯಿ, ಹಣ್ಣು, ಬೀಜಗಳಲ್ಲಿ ವಿವಿಧ ಖಾದ್ಯ ಮಾಡಿ ತಿನ್ನುತ್ತೇವೆ. ಪಲ್ಯ, ಗೊಜ್ಜು, ಸಾಂಬಾರು,ಕಾಯಿರಸ, ಮಜ್ಜಿಗೆ ಹುಳಿ, ಬೋಂಡಾ, ಗೋಬಿ, ಹೋಳಿಗೆ, ಜಾಮ್, ಸುಟ್ಟೆವು, ಕಡುಬು, ಹಪ್ಪಳ, ಚಕ್ಕುಲಿ,…… ಒಂದೇ ಎರಡೇ. ಸಾಮಾನ್ಯವಾಗಿ ಮೇ ಜೂನ್ ಜುಲೈ ಹೆಚ್ಚಾಗಿ ಕಾಣಸಿಗುವ ಅಪರೂಪಕ್ಕೆ ಬೇರೆ ಸಮಯದಲ್ಲೂ ಸಿಗುವ ಹಣ್ಣು. ಇದರ ಹೊರತಾಗಿ ಹಲಸು ಔಷಧೀಯ ಗುಣವನ್ನು ಹೊಂದಿದೆ. ಇದರ ಎಲೆ, ಬೇರು, ಚಕ್ಕೆ, ಬೀಜ, ಹಣ್ಣು ಇವುಗಳು ಔಷಧಿಯಾಗಿ ಬಳಕೆಯಾಗುತ್ತದೆ.

1) ಬೆಲ್ಲದೊಂದಿಗೆ ಹಣ್ಣನ್ನು ಸೇವಿಸುವುದರಿಂದ ಅಲ್ಸರ್ ಗುಣವಾಗುತ್ತದೆ.
2) ಆಗಾಗ ಬೆಲ್ಲದ ಪಾಕದಲ್ಲಿ ಹಾಕಿದ ಹಣ್ಣನ್ನು ತಿನ್ನುವುದರಿಂದ ಪಿತ್ತ ಶಮನವಾಗುತ್ತದೆ.
3) ಹಣ್ಣಿನ ಜಾಮ್ ಮಾಡಿ ಪ್ರತಿದಿನ ತಿನ್ನುವುದರಿಂದ ಕಣ್ಣಿನ ಶಕ್ತಿ ಹೆಚ್ಚಿಸುತ್ತದೆ ಇರುಳುಗಣ್ಣು ಗುಣವಾಗುತ್ತದೆ.
4) ಬೇಸಿಗೆಯಲ್ಲಿ ಯಥೇಚ್ಛವಾಗಿ ಹಣ್ಣು ತಿನ್ನುವುದರಿಂದ ಶಕ್ತಿವರ್ಧಕವಾಗಿ ಕೆಲಸ ಮಾಡುತ್ತದೆ.
5) ಹಲಸಿನ ಹಣ್ಣನ್ನು ಹೆಚ್ಚಾಗಿ ಸೇವಿಸುವುದರಿಂದ ಮುಪ್ಪು ಮುಂದೂಡುತ್ತದೆ.
6) ಎಲೆಯನ್ನು ಕಷಾಯ ಮಾಡಿ ಸೇವಿಸುವುದರಿಂದ ಪಾರ್ಶ್ವ ವಾಯು ಬೇಗನೆ ಗುಣವಾಗುತ್ತದೆ.
7) ನೀಟಾಗಿ ಜೋಡಿಸಿಟ್ಟ ಎಲೆಯ ಕೊಟ್ಟೆಯಲ್ಲಿ ಕಡುಬು ಮಾಡಿ ವರ್ಷಕ್ಕೊಮ್ಮೆಯಾದರೂ ಸೇವಿಸಬೇಕು ಎಂದು ಹಿರಿಯರು ಹೇಳುತ್ತಾರೆ.
8) ಎಲೆಯ ಕಷಾಯ ಮಾಡಿ ಕುಡಿಯುವುದರಿಂದ ಜ್ವರ ಮತ್ತು ಭೇದಿ ಎರಡು ಗುಣವಾಗುತ್ತದೆ.
9) ಎಲೆಯ ಕಷಾಯವನ್ನು ಗಂಡುಷ ಅಂದರೆ ಬಾಯಿ ಮುಕ್ಕಳಿಸುವುದರಿಂದ ಬಾಯಿಯ ಹುಣ್ಣುಗಳು ಗುಣ ವಾಗುತ್ತದೆ.
10) ಹಲಸಿನ ಬೀಜ ದಿನನಿತ್ಯ ಸೇವನೆಯಿಂದ ವೀರ್ಯ ವೃದ್ಧಿ ಆಗುತ್ತದೆ.
11) ಹಲಸಿನ ಮರದಲ್ಲಿ ಇರುವ ಬಂಜಳಿಕೆ ಹೆಣ್ಣು ಮಕ್ಕಳ ಬಂಜೆತನವನ್ನು ನಿವಾರಿಸಲು ತುಂಬಾ ಉಪಯುಕ್ತ ಮೆಡಿಸಿನ್ ತಯಾರಿಸುವ ವಿಧಾನ ದಲ್ಲಿ ಒಂದು.
12) ಹಲಸು ಒಂದು ಘನ ಆಹಾರ ತಿಂದಿದ್ದು ಹೆಚ್ಚಾದರೆ ಅಜೀರ್ಣ. ಹಣ್ಣು ತಿಂದು ಕೊನೆಯ ತೊಳೆಯಲಿ ಎರಡು ಚಮಚ ಕೊಬ್ಬರಿ ಎಣ್ಣೆ ಹಾಕಿ ತಿನ್ನುವುದರಿಂದ ಈ ಅಜೀರ್ಣ ನಿವಾರಣೆ ಆಗುತ್ತದೆ.
12) ಹೊಟ್ಟೆ ಹಸಿದಾಗ ಹಲಸು ತಿನ್ನುವುದು ಒಳ್ಳೆಯದು.

(ಬರಹ ಕೃಪೆ : ಸುಮನಾ ಮಳಲಗದ್ದೆ)

(ಸಾಮಾಜಿಕ ಜಾಲತಾಣದಿಂದ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror