Advertisement
ಸುದ್ದಿಗಳು

#Jackfruit | ಹಲಸಿನ ಹಣ್ಣಿನ ಕಾಲ ಇದು | ಸಿಕ್ಕರೆ ತಿನ್ನದೇ ಬಿಡಬೇಡಿ | ಇದರಲ್ಲಿದೆ ಆರೋಗ್ಯದ ಗುಟ್ಟು |

Share

ಹಲಸಿನ ಹಣ‍್ಣು  ವೈಜ್ಞಾನಿಕವಾಗಿ ಆರ್ಟೋಕಾರ್ಪಸ್ ಹೆಟಿರೋಫೈಲಸ್ ಎಂಬ ಹೆಸರುಳ್ಳ ಇಂಗ್ಲಿಷ್ನಲ್ಲಿ ಜಾಕ್ ಫ‍್ರೂಟ್ #jackfruit ಎಂದು ಕರೆಯಲಾಗುತ್ತದೆ. ಹಲಸು ಆಹಾರ ಮೌಲ್ಯಗಳನ್ನು ಮಾತ್ರವಲ್ಲ, ಔಷಧೀಯ ಅಂಶಗಳನ್ನೂ ಒಳ ಗೊಂಡಿದೆ. 

ಇದರ ಕಾಯಿ, ಹಣ್ಣು, ಬೀಜಗಳಲ್ಲಿ ವಿವಿಧ ಖಾದ್ಯ ಮಾಡಿ ತಿನ್ನುತ್ತೇವೆ. ಪಲ್ಯ, ಗೊಜ್ಜು, ಸಾಂಬಾರು,ಕಾಯಿರಸ, ಮಜ್ಜಿಗೆ ಹುಳಿ, ಬೋಂಡಾ, ಗೋಬಿ, ಹೋಳಿಗೆ, ಜಾಮ್, ಸುಟ್ಟೆವು, ಕಡುಬು, ಹಪ್ಪಳ, ಚಕ್ಕುಲಿ,…… ಒಂದೇ ಎರಡೇ. ಸಾಮಾನ್ಯವಾಗಿ ಮೇ ಜೂನ್ ಜುಲೈ ಹೆಚ್ಚಾಗಿ ಕಾಣಸಿಗುವ ಅಪರೂಪಕ್ಕೆ ಬೇರೆ ಸಮಯದಲ್ಲೂ ಸಿಗುವ ಹಣ್ಣು. ಇದರ ಹೊರತಾಗಿ ಹಲಸು ಔಷಧೀಯ ಗುಣವನ್ನು ಹೊಂದಿದೆ. ಇದರ ಎಲೆ, ಬೇರು, ಚಕ್ಕೆ, ಬೀಜ, ಹಣ್ಣು ಇವುಗಳು ಔಷಧಿಯಾಗಿ ಬಳಕೆಯಾಗುತ್ತದೆ.

1) ಬೆಲ್ಲದೊಂದಿಗೆ ಹಣ್ಣನ್ನು ಸೇವಿಸುವುದರಿಂದ ಅಲ್ಸರ್ ಗುಣವಾಗುತ್ತದೆ.
2) ಆಗಾಗ ಬೆಲ್ಲದ ಪಾಕದಲ್ಲಿ ಹಾಕಿದ ಹಣ್ಣನ್ನು ತಿನ್ನುವುದರಿಂದ ಪಿತ್ತ ಶಮನವಾಗುತ್ತದೆ.
3) ಹಣ್ಣಿನ ಜಾಮ್ ಮಾಡಿ ಪ್ರತಿದಿನ ತಿನ್ನುವುದರಿಂದ ಕಣ್ಣಿನ ಶಕ್ತಿ ಹೆಚ್ಚಿಸುತ್ತದೆ ಇರುಳುಗಣ್ಣು ಗುಣವಾಗುತ್ತದೆ.
4) ಬೇಸಿಗೆಯಲ್ಲಿ ಯಥೇಚ್ಛವಾಗಿ ಹಣ್ಣು ತಿನ್ನುವುದರಿಂದ ಶಕ್ತಿವರ್ಧಕವಾಗಿ ಕೆಲಸ ಮಾಡುತ್ತದೆ.
5) ಹಲಸಿನ ಹಣ್ಣನ್ನು ಹೆಚ್ಚಾಗಿ ಸೇವಿಸುವುದರಿಂದ ಮುಪ್ಪು ಮುಂದೂಡುತ್ತದೆ.
6) ಎಲೆಯನ್ನು ಕಷಾಯ ಮಾಡಿ ಸೇವಿಸುವುದರಿಂದ ಪಾರ್ಶ್ವ ವಾಯು ಬೇಗನೆ ಗುಣವಾಗುತ್ತದೆ.
7) ನೀಟಾಗಿ ಜೋಡಿಸಿಟ್ಟ ಎಲೆಯ ಕೊಟ್ಟೆಯಲ್ಲಿ ಕಡುಬು ಮಾಡಿ ವರ್ಷಕ್ಕೊಮ್ಮೆಯಾದರೂ ಸೇವಿಸಬೇಕು ಎಂದು ಹಿರಿಯರು ಹೇಳುತ್ತಾರೆ.
8) ಎಲೆಯ ಕಷಾಯ ಮಾಡಿ ಕುಡಿಯುವುದರಿಂದ ಜ್ವರ ಮತ್ತು ಭೇದಿ ಎರಡು ಗುಣವಾಗುತ್ತದೆ.
9) ಎಲೆಯ ಕಷಾಯವನ್ನು ಗಂಡುಷ ಅಂದರೆ ಬಾಯಿ ಮುಕ್ಕಳಿಸುವುದರಿಂದ ಬಾಯಿಯ ಹುಣ್ಣುಗಳು ಗುಣ ವಾಗುತ್ತದೆ.
10) ಹಲಸಿನ ಬೀಜ ದಿನನಿತ್ಯ ಸೇವನೆಯಿಂದ ವೀರ್ಯ ವೃದ್ಧಿ ಆಗುತ್ತದೆ.
11) ಹಲಸಿನ ಮರದಲ್ಲಿ ಇರುವ ಬಂಜಳಿಕೆ ಹೆಣ್ಣು ಮಕ್ಕಳ ಬಂಜೆತನವನ್ನು ನಿವಾರಿಸಲು ತುಂಬಾ ಉಪಯುಕ್ತ ಮೆಡಿಸಿನ್ ತಯಾರಿಸುವ ವಿಧಾನ ದಲ್ಲಿ ಒಂದು.
12) ಹಲಸು ಒಂದು ಘನ ಆಹಾರ ತಿಂದಿದ್ದು ಹೆಚ್ಚಾದರೆ ಅಜೀರ್ಣ. ಹಣ್ಣು ತಿಂದು ಕೊನೆಯ ತೊಳೆಯಲಿ ಎರಡು ಚಮಚ ಕೊಬ್ಬರಿ ಎಣ್ಣೆ ಹಾಕಿ ತಿನ್ನುವುದರಿಂದ ಈ ಅಜೀರ್ಣ ನಿವಾರಣೆ ಆಗುತ್ತದೆ.
12) ಹೊಟ್ಟೆ ಹಸಿದಾಗ ಹಲಸು ತಿನ್ನುವುದು ಒಳ್ಳೆಯದು.

(ಬರಹ ಕೃಪೆ : ಸುಮನಾ ಮಳಲಗದ್ದೆ)

(ಸಾಮಾಜಿಕ ಜಾಲತಾಣದಿಂದ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 minutes ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

2 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

13 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

24 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

1 day ago