ಸುದ್ದಿಗಳು

#Jackfruit | ಹಲಸಿನ ಹಣ್ಣಿನ ಕಾಲ ಇದು | ಸಿಕ್ಕರೆ ತಿನ್ನದೇ ಬಿಡಬೇಡಿ | ಇದರಲ್ಲಿದೆ ಆರೋಗ್ಯದ ಗುಟ್ಟು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಲಸಿನ ಹಣ‍್ಣು  ವೈಜ್ಞಾನಿಕವಾಗಿ ಆರ್ಟೋಕಾರ್ಪಸ್ ಹೆಟಿರೋಫೈಲಸ್ ಎಂಬ ಹೆಸರುಳ್ಳ ಇಂಗ್ಲಿಷ್ನಲ್ಲಿ ಜಾಕ್ ಫ‍್ರೂಟ್ #jackfruit ಎಂದು ಕರೆಯಲಾಗುತ್ತದೆ. ಹಲಸು ಆಹಾರ ಮೌಲ್ಯಗಳನ್ನು ಮಾತ್ರವಲ್ಲ, ಔಷಧೀಯ ಅಂಶಗಳನ್ನೂ ಒಳ ಗೊಂಡಿದೆ. 

Advertisement

ಇದರ ಕಾಯಿ, ಹಣ್ಣು, ಬೀಜಗಳಲ್ಲಿ ವಿವಿಧ ಖಾದ್ಯ ಮಾಡಿ ತಿನ್ನುತ್ತೇವೆ. ಪಲ್ಯ, ಗೊಜ್ಜು, ಸಾಂಬಾರು,ಕಾಯಿರಸ, ಮಜ್ಜಿಗೆ ಹುಳಿ, ಬೋಂಡಾ, ಗೋಬಿ, ಹೋಳಿಗೆ, ಜಾಮ್, ಸುಟ್ಟೆವು, ಕಡುಬು, ಹಪ್ಪಳ, ಚಕ್ಕುಲಿ,…… ಒಂದೇ ಎರಡೇ. ಸಾಮಾನ್ಯವಾಗಿ ಮೇ ಜೂನ್ ಜುಲೈ ಹೆಚ್ಚಾಗಿ ಕಾಣಸಿಗುವ ಅಪರೂಪಕ್ಕೆ ಬೇರೆ ಸಮಯದಲ್ಲೂ ಸಿಗುವ ಹಣ್ಣು. ಇದರ ಹೊರತಾಗಿ ಹಲಸು ಔಷಧೀಯ ಗುಣವನ್ನು ಹೊಂದಿದೆ. ಇದರ ಎಲೆ, ಬೇರು, ಚಕ್ಕೆ, ಬೀಜ, ಹಣ್ಣು ಇವುಗಳು ಔಷಧಿಯಾಗಿ ಬಳಕೆಯಾಗುತ್ತದೆ.

1) ಬೆಲ್ಲದೊಂದಿಗೆ ಹಣ್ಣನ್ನು ಸೇವಿಸುವುದರಿಂದ ಅಲ್ಸರ್ ಗುಣವಾಗುತ್ತದೆ.
2) ಆಗಾಗ ಬೆಲ್ಲದ ಪಾಕದಲ್ಲಿ ಹಾಕಿದ ಹಣ್ಣನ್ನು ತಿನ್ನುವುದರಿಂದ ಪಿತ್ತ ಶಮನವಾಗುತ್ತದೆ.
3) ಹಣ್ಣಿನ ಜಾಮ್ ಮಾಡಿ ಪ್ರತಿದಿನ ತಿನ್ನುವುದರಿಂದ ಕಣ್ಣಿನ ಶಕ್ತಿ ಹೆಚ್ಚಿಸುತ್ತದೆ ಇರುಳುಗಣ್ಣು ಗುಣವಾಗುತ್ತದೆ.
4) ಬೇಸಿಗೆಯಲ್ಲಿ ಯಥೇಚ್ಛವಾಗಿ ಹಣ್ಣು ತಿನ್ನುವುದರಿಂದ ಶಕ್ತಿವರ್ಧಕವಾಗಿ ಕೆಲಸ ಮಾಡುತ್ತದೆ.
5) ಹಲಸಿನ ಹಣ್ಣನ್ನು ಹೆಚ್ಚಾಗಿ ಸೇವಿಸುವುದರಿಂದ ಮುಪ್ಪು ಮುಂದೂಡುತ್ತದೆ.
6) ಎಲೆಯನ್ನು ಕಷಾಯ ಮಾಡಿ ಸೇವಿಸುವುದರಿಂದ ಪಾರ್ಶ್ವ ವಾಯು ಬೇಗನೆ ಗುಣವಾಗುತ್ತದೆ.
7) ನೀಟಾಗಿ ಜೋಡಿಸಿಟ್ಟ ಎಲೆಯ ಕೊಟ್ಟೆಯಲ್ಲಿ ಕಡುಬು ಮಾಡಿ ವರ್ಷಕ್ಕೊಮ್ಮೆಯಾದರೂ ಸೇವಿಸಬೇಕು ಎಂದು ಹಿರಿಯರು ಹೇಳುತ್ತಾರೆ.
8) ಎಲೆಯ ಕಷಾಯ ಮಾಡಿ ಕುಡಿಯುವುದರಿಂದ ಜ್ವರ ಮತ್ತು ಭೇದಿ ಎರಡು ಗುಣವಾಗುತ್ತದೆ.
9) ಎಲೆಯ ಕಷಾಯವನ್ನು ಗಂಡುಷ ಅಂದರೆ ಬಾಯಿ ಮುಕ್ಕಳಿಸುವುದರಿಂದ ಬಾಯಿಯ ಹುಣ್ಣುಗಳು ಗುಣ ವಾಗುತ್ತದೆ.
10) ಹಲಸಿನ ಬೀಜ ದಿನನಿತ್ಯ ಸೇವನೆಯಿಂದ ವೀರ್ಯ ವೃದ್ಧಿ ಆಗುತ್ತದೆ.
11) ಹಲಸಿನ ಮರದಲ್ಲಿ ಇರುವ ಬಂಜಳಿಕೆ ಹೆಣ್ಣು ಮಕ್ಕಳ ಬಂಜೆತನವನ್ನು ನಿವಾರಿಸಲು ತುಂಬಾ ಉಪಯುಕ್ತ ಮೆಡಿಸಿನ್ ತಯಾರಿಸುವ ವಿಧಾನ ದಲ್ಲಿ ಒಂದು.
12) ಹಲಸು ಒಂದು ಘನ ಆಹಾರ ತಿಂದಿದ್ದು ಹೆಚ್ಚಾದರೆ ಅಜೀರ್ಣ. ಹಣ್ಣು ತಿಂದು ಕೊನೆಯ ತೊಳೆಯಲಿ ಎರಡು ಚಮಚ ಕೊಬ್ಬರಿ ಎಣ್ಣೆ ಹಾಕಿ ತಿನ್ನುವುದರಿಂದ ಈ ಅಜೀರ್ಣ ನಿವಾರಣೆ ಆಗುತ್ತದೆ.
12) ಹೊಟ್ಟೆ ಹಸಿದಾಗ ಹಲಸು ತಿನ್ನುವುದು ಒಳ್ಳೆಯದು.

(ಬರಹ ಕೃಪೆ : ಸುಮನಾ ಮಳಲಗದ್ದೆ)

(ಸಾಮಾಜಿಕ ಜಾಲತಾಣದಿಂದ )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

9 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

9 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

10 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

10 hours ago

ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

10 hours ago

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…

10 hours ago