ಹಲಸಿನ ಹಣ್ಣು ವೈಜ್ಞಾನಿಕವಾಗಿ ಆರ್ಟೋಕಾರ್ಪಸ್ ಹೆಟಿರೋಫೈಲಸ್ ಎಂಬ ಹೆಸರುಳ್ಳ ಇಂಗ್ಲಿಷ್ನಲ್ಲಿ ಜಾಕ್ ಫ್ರೂಟ್ #jackfruit ಎಂದು ಕರೆಯಲಾಗುತ್ತದೆ. ಹಲಸು ಆಹಾರ ಮೌಲ್ಯಗಳನ್ನು ಮಾತ್ರವಲ್ಲ, ಔಷಧೀಯ ಅಂಶಗಳನ್ನೂ ಒಳ ಗೊಂಡಿದೆ.
ಇದರ ಕಾಯಿ, ಹಣ್ಣು, ಬೀಜಗಳಲ್ಲಿ ವಿವಿಧ ಖಾದ್ಯ ಮಾಡಿ ತಿನ್ನುತ್ತೇವೆ. ಪಲ್ಯ, ಗೊಜ್ಜು, ಸಾಂಬಾರು,ಕಾಯಿರಸ, ಮಜ್ಜಿಗೆ ಹುಳಿ, ಬೋಂಡಾ, ಗೋಬಿ, ಹೋಳಿಗೆ, ಜಾಮ್, ಸುಟ್ಟೆವು, ಕಡುಬು, ಹಪ್ಪಳ, ಚಕ್ಕುಲಿ,…… ಒಂದೇ ಎರಡೇ. ಸಾಮಾನ್ಯವಾಗಿ ಮೇ ಜೂನ್ ಜುಲೈ ಹೆಚ್ಚಾಗಿ ಕಾಣಸಿಗುವ ಅಪರೂಪಕ್ಕೆ ಬೇರೆ ಸಮಯದಲ್ಲೂ ಸಿಗುವ ಹಣ್ಣು. ಇದರ ಹೊರತಾಗಿ ಹಲಸು ಔಷಧೀಯ ಗುಣವನ್ನು ಹೊಂದಿದೆ. ಇದರ ಎಲೆ, ಬೇರು, ಚಕ್ಕೆ, ಬೀಜ, ಹಣ್ಣು ಇವುಗಳು ಔಷಧಿಯಾಗಿ ಬಳಕೆಯಾಗುತ್ತದೆ.
1) ಬೆಲ್ಲದೊಂದಿಗೆ ಹಣ್ಣನ್ನು ಸೇವಿಸುವುದರಿಂದ ಅಲ್ಸರ್ ಗುಣವಾಗುತ್ತದೆ.
2) ಆಗಾಗ ಬೆಲ್ಲದ ಪಾಕದಲ್ಲಿ ಹಾಕಿದ ಹಣ್ಣನ್ನು ತಿನ್ನುವುದರಿಂದ ಪಿತ್ತ ಶಮನವಾಗುತ್ತದೆ.
3) ಹಣ್ಣಿನ ಜಾಮ್ ಮಾಡಿ ಪ್ರತಿದಿನ ತಿನ್ನುವುದರಿಂದ ಕಣ್ಣಿನ ಶಕ್ತಿ ಹೆಚ್ಚಿಸುತ್ತದೆ ಇರುಳುಗಣ್ಣು ಗುಣವಾಗುತ್ತದೆ.
4) ಬೇಸಿಗೆಯಲ್ಲಿ ಯಥೇಚ್ಛವಾಗಿ ಹಣ್ಣು ತಿನ್ನುವುದರಿಂದ ಶಕ್ತಿವರ್ಧಕವಾಗಿ ಕೆಲಸ ಮಾಡುತ್ತದೆ.
5) ಹಲಸಿನ ಹಣ್ಣನ್ನು ಹೆಚ್ಚಾಗಿ ಸೇವಿಸುವುದರಿಂದ ಮುಪ್ಪು ಮುಂದೂಡುತ್ತದೆ.
6) ಎಲೆಯನ್ನು ಕಷಾಯ ಮಾಡಿ ಸೇವಿಸುವುದರಿಂದ ಪಾರ್ಶ್ವ ವಾಯು ಬೇಗನೆ ಗುಣವಾಗುತ್ತದೆ.
7) ನೀಟಾಗಿ ಜೋಡಿಸಿಟ್ಟ ಎಲೆಯ ಕೊಟ್ಟೆಯಲ್ಲಿ ಕಡುಬು ಮಾಡಿ ವರ್ಷಕ್ಕೊಮ್ಮೆಯಾದರೂ ಸೇವಿಸಬೇಕು ಎಂದು ಹಿರಿಯರು ಹೇಳುತ್ತಾರೆ.
8) ಎಲೆಯ ಕಷಾಯ ಮಾಡಿ ಕುಡಿಯುವುದರಿಂದ ಜ್ವರ ಮತ್ತು ಭೇದಿ ಎರಡು ಗುಣವಾಗುತ್ತದೆ.
9) ಎಲೆಯ ಕಷಾಯವನ್ನು ಗಂಡುಷ ಅಂದರೆ ಬಾಯಿ ಮುಕ್ಕಳಿಸುವುದರಿಂದ ಬಾಯಿಯ ಹುಣ್ಣುಗಳು ಗುಣ ವಾಗುತ್ತದೆ.
10) ಹಲಸಿನ ಬೀಜ ದಿನನಿತ್ಯ ಸೇವನೆಯಿಂದ ವೀರ್ಯ ವೃದ್ಧಿ ಆಗುತ್ತದೆ.
11) ಹಲಸಿನ ಮರದಲ್ಲಿ ಇರುವ ಬಂಜಳಿಕೆ ಹೆಣ್ಣು ಮಕ್ಕಳ ಬಂಜೆತನವನ್ನು ನಿವಾರಿಸಲು ತುಂಬಾ ಉಪಯುಕ್ತ ಮೆಡಿಸಿನ್ ತಯಾರಿಸುವ ವಿಧಾನ ದಲ್ಲಿ ಒಂದು.
12) ಹಲಸು ಒಂದು ಘನ ಆಹಾರ ತಿಂದಿದ್ದು ಹೆಚ್ಚಾದರೆ ಅಜೀರ್ಣ. ಹಣ್ಣು ತಿಂದು ಕೊನೆಯ ತೊಳೆಯಲಿ ಎರಡು ಚಮಚ ಕೊಬ್ಬರಿ ಎಣ್ಣೆ ಹಾಕಿ ತಿನ್ನುವುದರಿಂದ ಈ ಅಜೀರ್ಣ ನಿವಾರಣೆ ಆಗುತ್ತದೆ.
12) ಹೊಟ್ಟೆ ಹಸಿದಾಗ ಹಲಸು ತಿನ್ನುವುದು ಒಳ್ಳೆಯದು.
(ಬರಹ ಕೃಪೆ : ಸುಮನಾ ಮಳಲಗದ್ದೆ)
(ಸಾಮಾಜಿಕ ಜಾಲತಾಣದಿಂದ )
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…