Advertisement
ಸುದ್ದಿಗಳು

ಎಲೆ ಅಡಿಕೆ ಸೇವನೆಯಿಂದ ಆರೋಗ್ಯಕ್ಕೆ ಲಾಭ | ಮಲೆನಾಡಿನ ಮನೆಯ ಸಂಪ್ರದಾಯ

Share

ಹಳ್ಳಿಯ ಜನರು ಎಲೆ ಅಡಿಕೆ ಸವಿಯುವುದು ಸಾಮಾನ್ಯ. ಅದರಲ್ಲಿ ಮುಖ್ಯವಾಗಿ ಭಾರತದಲ್ಲಿ ಶುಭ ಸಮಾರಂಭಗಳಲ್ಲಿ ಊಟದ ನಂತರ ಎಲೆ ಅಡಿಕೆ ನೀಡುತ್ತಾರೆ. ಅದಾಗ್ಯೂ ಈ ಎಲೆ ಅಡಿಕೆ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ? ದೌರ್ಬಲ್ಯ, ಅಜೀರ್ಣ ಮತ್ತು ಮಲಬದ್ಧತೆ ಸಮಸ್ಯೆ ನಿವಾರಣೆಗೆ ಎಲೆ ಅಡಿಕೆ ಸೇವನೆ ತುಂಬಾ ಪ್ರಯೋಜಕಾರಿ.

ಅಡಿಕೆಯಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು ಮತ್ತು ಗುಣಪಡಿಸಬಹುದು ಎಂದು ಸಾಬೀತಾಗಿದೆ.ಗಾಯ ಗುಣ ಮಾಡಲು ಹಲ್ಲು ಗಟ್ಟಿ ಮಾಡಲು ಜೀರ್ಣಶಕ್ತಿ ಹೆಚ್ಚಿಸಲು ಅದೇ ಏಕೆ ಕ್ಯಾನ್ಸರ್ ರೋಗ ನಿರೋಧಕಕ್ಕೆ ಮತ್ತು ಕ್ಯಾನ್ಸರ್ ಗುಣ ಮಾಡಲು ಸಹ ಹೊರಗೆ ಹಚ್ಚಲು ಮತ್ತೆ ಹೊಟ್ಟೆಗೆ ತೆಗೆದುಕೊಳ್ಳಲು, ಉಪಯೋಗಿಸುವುದಕ್ಕೆ ಬರುತ್ತದೆ. ಎಲೆ ಕ್ಯಾಲ್ಸಿಯಂ ದೇಹಕ್ಕೆ ಬೇಕಾಗುವಷ್ಟು ಒದಗಿಸುತ್ತದೆ ಜೊತೆಯಲ್ಲಿ ಕಫ ನೀರಾಗುತ್ತದೆ. ವೀಳ್ಯದೆಲೆ ಜೀರ್ಣಕಾರಿ. ನಮ್ಮಲ್ಲಿ ದೃಷ್ಟಿ ತೆಗೆಯಲು ಕಫನಿರಾಗಿಸಲು ಅರಿಶಿಣ ಕುಂಕುಮದ ಜೊತೆಯಲ್ಲಿ ಹೀಗೆ ಹತ್ತು ಹಲವರು ಶುಭಕಾರ್ಯಗಳಲ್ಲಿ ಎಲೆ ಅಡಿಕೆ ಸಂಪ್ರದಾಯ ಇದ್ದೇ ಇರುತ್ತದೆ. ಹಿಂದಿನ ನಾರನ್ನು ತೆಗೆದು ಉಪಯೋಗಿಸುವುದು ಒಳ್ಳೆಯದು ತೊಟ್ಟು ಅಥವಾ ಡೇಟು ಮತ್ತು ಎಲೆಯ ತುದಿಯ ಭಾಗವನ್ನು ತೆಗೆದು ಸಾಧಾರಣವಾಗಿ ಉಪಯೋಗಿಸುತ್ತಾರೆ.

ಹೊಟ್ಟೆ ಸಂಬಂಧಿತ ಸಮಸ್ಯೆ ನಿವಾರಣೆಗೆ ಎಲೆ, ಅಡಿಕೆ ಸೇವನೆ ತುಂಬಾ ಪ್ರಯೋಜನಕಾರಿ. ವೀಳ್ಯದೆಲೆ ಜತೆಗೆ ಅಡಿಕೆ ಸೇವಿನೆಯಿಂದ ಕರುಳು ಸಂಬಂಧಿತ ರೋಗಗಳನ್ನು ತಡೆಗಟ್ಟಬಹುದು. ಹಾಗೆಯೇ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿದ್ದರೆ, ವೀಳ್ಯದೆಲೆಯನ್ನು ರಾತ್ರಿ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಅರ್ಧ ಗಂಟೆ ಕುದಿಸಿ. ನಂತರ ಆ ನೀರನ್ನು ಕುಡಿಯಿರಿ. ಕೆಲವೇ ಗಂಟೆಗಳಲ್ಲಿ ಇದು ನಿಮ್ಮ ಹೊಟ್ಟೆ ನೋವಿನ ಸಮಸ್ಯೆಯನ್ನು ನಿವಾರಿಸುತ್ತದೆ.

ನಿಮಗೆ ಮಲಬದ್ಧತೆಯ ಸಮಸ್ಯೆ ಇದ್ದರೆ, ನೀವು ವೀಳ್ಯದೆಲೆಯನ್ನು ಸೇವಿಸಬೇಕು. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಅನೇಕ ಜನರಿಗೆ ಅಲ್ಸರ್ ಸಮಸ್ಯೆ ಬಹಳ ಕಾಡುತ್ತಿರುತ್ತದೆ. ಹಾಗಿರುವಾಗ ವೀಳ್ಯದೆಲೆ ಸೇವನೆಯಿಂದ ಹುಣ್ಣುಗಳ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.

ವೀಳ್ಯದೆಲೆ ಹಲ್ಲುಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ವೀಳ್ಯದೆಲೆಯಿಂದ ಪುಡಿ ತಯಾರಿಸಿ ಅದರಿಂದ ಹಲ್ಲುಗಳಿಗೆ ಮಸಾಜ್ ಮಾಡಿ ಇದರಿಂದ ನಿಮ್ಮ ಹಲ್ಲುನೋವು ಸಮಸ್ಯೆ ನಿವಾರಣೆಯಾಗುತ್ತದೆ. ಜತೆಗೆ ವೀಳ್ಯದೆಲೆ ನಿಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಚರ್ಮದ ಮೇಲೆ ಯಾವುದೇ ಗಾಯವಾಗಿದ್ದರೆ, ಗಾಯವನ್ನು ಗುಣಪಡಿಸಲು ವೀಳ್ಯದೆಲೆ ಸಹಾಯಕ.

ನೀವು ಬೆನ್ನು ನೋವು, ತಲೆ ನೋವು, ಕೀಲು ನೋವಿನಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ವೀಳ್ಯದೆಲೆ ಸೇವಿಸಬಹುದು. ವೀಳ್ಯದೆಲೆ ಔಷಧೀಯ ಗುಣಗಳನ್ನು ಹೊಂದಿದೆ. ಇದು ನಿಮ್ಮ ಸ್ನಾಯುವಿನ ಬಲವನ್ನು ಹೆಚ್ಚಿಸುತ್ತದೆ.

ಮಲೆನಾಡಿನ ಮನೆಗಳಲ್ಲಿ ಕವಳದ ಬಟ್ಟಲು ಇರಲೇಬೇಕು. ಇದು ಸಾಮರಸ್ಯದ ಸಂಕೇತ. ಕವಳ ಮೆಲ್ಲುತ್ತಾ ಮಾತನಾಡುವುದು ಮಲೆನಾಡಿನ ಸಂಪ್ರದಾಯ. ಆದರೆ ಇದರ ಜೊತೆಯಲ್ಲಿ ಸ್ವಲ್ಪ ಸುಣ್ಣವನ್ನು ಉಪಯೋಗಿಸಬೇಕು. ಸುಣ್ಣವಿಲ್ಲದೆ ಎಲೆ ಅಡಿಕೆ ಹಾಕುವುದರಿಂದ ಬಾಯಿ ಮತ್ತು ತುಟಿ ಬಿಳಿಚಿ ಹೋಗುತ್ತದೆ. ಹೆಚ್ಚಾದರೆ ಕಾಮಾಲೆ ಬರುತ್ತದೆ. ಸುಣ್ಣವಿಲ್ಲದ ವೀಳ್ಯ ಬಣ್ಣವಿಲ್ಲದ ಮದುವೆ ಹೆಣ್ಣಿಲ್ಲದವನ ಮನೆವಾರ್ತೆ, ಮರಳೊಳಗೆ ಎಣ್ಣೆ ಹೊಯ್ದಂತಕ್ಕೂ ಸರ್ವಜ್ಞ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago