Advertisement
ಸುದ್ದಿಗಳು

ಆರೋಗ್ಯ ಹೆಚ್ಚಿಸುವ ಬಸಳೆ ಸೊಪ್ಪು

Share

ತುಳುನಾಡಿನಲ್ಲಿ ಬಸಳೆ ಸೊಪ್ಪು ಪೇಮಸ್ ತರಕಾರಿ. ಈ ಬಸಳೆ ಸೊಪ್ಪಿನಿಂದ ಆರೋಗ್ಯದ ಮೇಲಾಗುವ ಪ್ರಯೋಜನವನ್ನು ತಿಳಿದುಕೊಂಡರೆ ಆರೋಗ್ಯವೂ ಸುಧಾರಣೆಯಾಗುತ್ತದೆ, ಗ್ರಾಮೀಣ ಭಾಗದಲ್ಲಿ ಉತ್ತಮ ವ್ಯವಹಾರ, ಆದಾಯವೂ ಆಗುತ್ತದೆ..

  • ಮೂಳೆಗಳ ಶಕ್ತಿ: ಬಸಳೆ ಸೊಪ್ಪಿನಲ್ಲಿ ವಿಟಮಿನ್ ಏ ಪ್ರಮಾಣ ಅಧಿಕವಾಗಿದೆ. ವಿಟಮಿನ್ , ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳಲು ಸಹಾಯ ಮಾಡುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ ಮತ್ತು ಮುರಿತದ ಅಪಾಯ ಕಡಿಮೆಯಾಗುತ್ತದೆ. ಬಸಳೆ ಸೊಪ್ಪು ಅಧಿಕ ಕಬ್ಬಿಣಾಂಶವನ್ನು ಹೊಂದಿದೆ. ಜೊತೆಗೆ ಇದರಲ್ಲಿ ವಿಟಮಿನ್ ಸಿ ಯೂ ಹೇರಳವಾಗಿದೆ. ವಿಟಮಿನ್ ಸಿ ಇರುವ ಕಾರಣ ದೇಹವು ಕಬ್ಬಿಣಾಂಶವನ್ನು ಸುಲಭವಾಗಿ ಹೀರಿಕೊಂಡು ರಕ್ತಹೀನತೆಯನ್ನು ತಡೆಯುತ್ತದೆ.
  • ದೃಷ್ಟಿ ದೋಷ: ಬಸಳೆಯಲ್ಲಿ ವಿಟಮಿನ್ ಎ ಜೊತೆಗೆ ಲುಟೀನ್ ಮತ್ತು ಝೀಕ್ಸಾಂಧಿನ್ ಎಂಬ ಪ್ರಬಲ ಕ್ಯಾರೋಟಿನಾಯ್ಡ್ ಗಳಿವೆ. ಇವು ನೇರಳಾತೀತ ಕಿರಣಗಳಿಂದ ಕಣ್ಣುಗಳನ್ನು ರಕ್ಷಿಸಿ ವಯಸ್ಸಾದಂತೆ ಬರುವ ದೃಷ್ಟಿ ದೋಷಗಳನ್ನು ತಡೆಯುತ್ತದೆ.
  • ಉತ್ತಮ ನಿದ್ರೆ: ಬಸಳೆಯಲ್ಲಿರುವ ಮೆಗ್ನಿಷೀಯಮ್ ಮತ್ತು ಇತರ ಖನಿಜಗಳು ನರಮಂಡಲವನ್ನು ಶಾಂತಗೊಳಿಸಿ ಉತ್ತಮ ನಿದ್ರೆಗೆ ಸಹಕರಿಸುತ್ತದೆ.
  • ಕಾಂತಿಯುತ ಚರ್ಮ: ಬಸಳೆ ಸೊಪ್ಪಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮದ ಜೀವಕೋಶಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ.
  • ತೂಕ ಇಳಿಕೆ ಸಹಕಾರಿ: ಕಡಿಮೆ ಕ್ಯಾಲೋರಿ ಗಳನ್ನು ಮತ್ತು ಹೆಚ್ಚಿನ ನೀರಿನಾಂಶವನ್ನು ಹೊಂದಿದೆ. ಇದರಲ್ಲಿರುವ ಅಧಿಕ ಪೈಬರ್ ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ.
  • ಕರುಳಿನ ಆರೋಗ್ಯ: ಬಸಳೆ ಸೊಪ್ಪಿನಲ್ಲಿ ಕೇವಲ ಪೈಬರ್ ಮಾತ್ರವಲ್ಲ, ಇದು ಪ್ರಿಬಯಾಟಿಕ್ ಗುಣಗಳನ್ನು ಹೊಂದಿದೆ. ಇದು ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಸಹಾಯ ಮಾಡ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

23 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

2 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

2 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

4 days ago