Advertisement
ಸುದ್ದಿಗಳು

ಆರೋಗ್ಯ ಹೆಚ್ಚಿಸುವ ಬಸಳೆ ಸೊಪ್ಪು

Share

ತುಳುನಾಡಿನಲ್ಲಿ ಬಸಳೆ ಸೊಪ್ಪು ಪೇಮಸ್ ತರಕಾರಿ. ಈ ಬಸಳೆ ಸೊಪ್ಪಿನಿಂದ ಆರೋಗ್ಯದ ಮೇಲಾಗುವ ಪ್ರಯೋಜನವನ್ನು ತಿಳಿದುಕೊಂಡರೆ ಆರೋಗ್ಯವೂ ಸುಧಾರಣೆಯಾಗುತ್ತದೆ, ಗ್ರಾಮೀಣ ಭಾಗದಲ್ಲಿ ಉತ್ತಮ ವ್ಯವಹಾರ, ಆದಾಯವೂ ಆಗುತ್ತದೆ..

  • ಮೂಳೆಗಳ ಶಕ್ತಿ: ಬಸಳೆ ಸೊಪ್ಪಿನಲ್ಲಿ ವಿಟಮಿನ್ ಏ ಪ್ರಮಾಣ ಅಧಿಕವಾಗಿದೆ. ವಿಟಮಿನ್ , ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳಲು ಸಹಾಯ ಮಾಡುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ ಮತ್ತು ಮುರಿತದ ಅಪಾಯ ಕಡಿಮೆಯಾಗುತ್ತದೆ. ಬಸಳೆ ಸೊಪ್ಪು ಅಧಿಕ ಕಬ್ಬಿಣಾಂಶವನ್ನು ಹೊಂದಿದೆ. ಜೊತೆಗೆ ಇದರಲ್ಲಿ ವಿಟಮಿನ್ ಸಿ ಯೂ ಹೇರಳವಾಗಿದೆ. ವಿಟಮಿನ್ ಸಿ ಇರುವ ಕಾರಣ ದೇಹವು ಕಬ್ಬಿಣಾಂಶವನ್ನು ಸುಲಭವಾಗಿ ಹೀರಿಕೊಂಡು ರಕ್ತಹೀನತೆಯನ್ನು ತಡೆಯುತ್ತದೆ.
  • ದೃಷ್ಟಿ ದೋಷ: ಬಸಳೆಯಲ್ಲಿ ವಿಟಮಿನ್ ಎ ಜೊತೆಗೆ ಲುಟೀನ್ ಮತ್ತು ಝೀಕ್ಸಾಂಧಿನ್ ಎಂಬ ಪ್ರಬಲ ಕ್ಯಾರೋಟಿನಾಯ್ಡ್ ಗಳಿವೆ. ಇವು ನೇರಳಾತೀತ ಕಿರಣಗಳಿಂದ ಕಣ್ಣುಗಳನ್ನು ರಕ್ಷಿಸಿ ವಯಸ್ಸಾದಂತೆ ಬರುವ ದೃಷ್ಟಿ ದೋಷಗಳನ್ನು ತಡೆಯುತ್ತದೆ.
  • ಉತ್ತಮ ನಿದ್ರೆ: ಬಸಳೆಯಲ್ಲಿರುವ ಮೆಗ್ನಿಷೀಯಮ್ ಮತ್ತು ಇತರ ಖನಿಜಗಳು ನರಮಂಡಲವನ್ನು ಶಾಂತಗೊಳಿಸಿ ಉತ್ತಮ ನಿದ್ರೆಗೆ ಸಹಕರಿಸುತ್ತದೆ.
  • ಕಾಂತಿಯುತ ಚರ್ಮ: ಬಸಳೆ ಸೊಪ್ಪಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮದ ಜೀವಕೋಶಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ.
  • ತೂಕ ಇಳಿಕೆ ಸಹಕಾರಿ: ಕಡಿಮೆ ಕ್ಯಾಲೋರಿ ಗಳನ್ನು ಮತ್ತು ಹೆಚ್ಚಿನ ನೀರಿನಾಂಶವನ್ನು ಹೊಂದಿದೆ. ಇದರಲ್ಲಿರುವ ಅಧಿಕ ಪೈಬರ್ ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ.
  • ಕರುಳಿನ ಆರೋಗ್ಯ: ಬಸಳೆ ಸೊಪ್ಪಿನಲ್ಲಿ ಕೇವಲ ಪೈಬರ್ ಮಾತ್ರವಲ್ಲ, ಇದು ಪ್ರಿಬಯಾಟಿಕ್ ಗುಣಗಳನ್ನು ಹೊಂದಿದೆ. ಇದು ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಸಹಾಯ ಮಾಡ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

5 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

13 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

1 day ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 day ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

2 days ago