Advertisement
ವೈರಲ್ ಸುದ್ದಿ

ಮೀನು ಪ್ರಿಯರೇ ಗಮನಿಸಿ, ಎಲ್ಲಾ ಮೀನುಗಳು ಉತ್ತಮವಲ್ಲ…!

Share

ಮೀನು ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಆದರೆ, ಮೀನಿನಲ್ಲೂ ಅನೇಕ ರೀತಿಯ ವಿಧಗಳಿವೆ. ಅದರಲ್ಲೂ ಎಲ್ಲಾ ಥರದ ಮೀನಗಳನ್ನು ತಿನ್ನುವಂತಿಲ್ಲ. ಕೆಲವು ಬಗೆಯ ಮೀನುಗಳು ಆರೋಗ್ಯಕ್ಕೆ ಅತ್ಯುತ್ತಮ.  ಮಕ್ಕಳು, ಹಿರಿಯರು ಮತ್ತು ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಮೀನು ಹೇಳಿ ಮಾಡಿಸಿದ ಔಷಧಿ. ಮೀನಿನಲ್ಲಿ ವಿಟಮಿನ್ ಎ, ವಿಟಮಿನ್ ಡಿ, ರಂಜಕ, ಮೆಗ್ನೀಸಿಯಮ್, ಸೆಲೆನಿಯಮ್ ಮತ್ತು ಅಯೋಡಿಯನ್ ಇವೆ. ಮಾತ್ರವಲ್ಲ ಪ್ರೋಟೋನ್ ಕೂಡ ಹೇರಳವಾಗಿದೆ. ಇದು ದೇಹಕ್ಕೆ ಅಗತ್ಯ ಖನಿಜಗಳು ಮತ್ತು ಜೀವಸತ್ವಗಳ ಒಂದು ಗಣಿ.

Advertisement
Advertisement

ಮೀನು ಸೇವಿಸುವುದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭಗಳಿವೆ. ಮೀನಿನಲ್ಲಿರುವ ಒಮೆಗಾ 3 ಕೊಬ್ಬಿನಾಮ್ಲಗಳು ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ ಕೊಬ್ಬಿನಾಮ್ಲದಿಂದ ಕೂಡಿದ ಮೀನನ್ನು ಸೇವಿಸುವುದು ಒಳ್ಳೆಯದು. ಮೀನಿನಲ್ಲಿರುವ ಒಮೆಗಾ 3 ಕೊಬ್ಬಿನಾಮ್ಲಗಳು ಮತ್ತು ವಿಟಮಿನ್ ಇ ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ತಿಳಿದುಬಂದಿದೆ. ಮೀನನ್ನು ಹೆಚ್ಚು ಎಣ್ಣೆಯಲ್ಲಿ ಫ್ರೈ ಮಾಡಿ ಸೇವಿಸದಿರಿ. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ನೀವು ಮೀನಿನ ಸಾರು ಮಾಡಿ ಸೇವಿಸಿದರೆ ಬಹಳ ಒಳ್ಳೆಯದು. ಹೆಚ್ಚಿನ ಒಮೆಗಾ -3 ಕೊಬ್ಬಿನಾಮ್ಲದ ಅಂಶದಿಂದಾಗಿ ಕೊಬ್ಬಿನ ರೀತಿಯ ಮೀನುಗಳು ಹೃದಯದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಸಂಶೋಧಕರು ನಂಬಿದ್ದಾರೆ.

ಆದರೆ, ಸಣ್ಣ ಮೀನು ಅಥವಾ ಹುಲಿ ಮೀನುಗಳು ( ಫಾರ್ಮ್ ಮೀನು) ಹೆಚ್ಚು ಪೌಷ್ಠಿಕ ನೀಡುತ್ತದೆ ಎಂದು ಹೇಳುವುದು ತಪ್ಪು. ಯಾಕೆಂದರೆ ಫಾರ್ಮ್ ಚುಚ್ಚುಮದ್ದು ನೀಡಿ ಬೆಳೆಸುತ್ತಾರೆ. ಇದು ದೇಹಕ್ಕೆ ತುಂಬ ಹಾನಿಕಾರಕವಾಗಿದೆ. ಕೊಲೆಸ್ಟ್ರಾಲ್ ಮತ್ತು ಹೃದಯ ಕಾಯಿಲೆಗಳನ್ನು ಸಹ ಹೆಚ್ಚಿಸುತ್ತದೆ ಎಂದು ತಿಳಿದುಬಂದಿದೆ. ಟಿಲಾಪಿಯಾದಲ್ಲಿ ಹೆಚ್ಚು ಹಾನಿಕಾರಕ ಮತ್ತು ಕೊಬ್ಬು ಹೆಚ್ಚಾಗಿದೆ. ಇದು ಕೊಲೆಸ್ಟ್ರಾಲ್ ಮತ್ತು ಹೃದಯ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಇದು ಡೈಬ್ಯುಟಿಲೀನ್ ಎಂಬ ರಾಸಾಯನಿಕವನ್ನು ಸಂಗ್ರಹಿಸುತ್ತದೆ. ಇದರಿಂದ ಆಸ್ತಮಾ, ಬೊಜ್ಜು ಮತ್ತು ಅಲರ್ಜಿ ಬರಬಹುದು. ಇದಲ್ಲದೆ, ಡಯಾಕ್ಸಿನ್ ಎಂಬ ವಿಷಕಾರಿ ವಸ್ತುವೂ ಇದರಲ್ಲಿ ಕಾಣಿಸುತ್ತದೆ. ಇದು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಹುಲಿ ಮೀನುಗಳು ನೀರಿನಲ್ಲಿ ಬೀಳುವ ಕೈಗಾರಿಕಾ ಮತ್ತು ಕೃಷಿ ತ್ಯಾಜ್ಯವನ್ನು ತಿನ್ನುತ್ತವೆ. ಆದ್ದರಿಂದ ಇವು ಸಂಪೂರ್ಣ ಕಲುಷಿತ. ಇದರಲ್ಲಿರುವ ಪಾದರಸ (ಮರ್ಕ್ಯುರಿ) ಮಟ್ಟ ಮನುಷ್ಯನ ದೇಹಕ್ಕೆ ಸಹಿಸಲಾಗದ್ದು. ಪಾದರಸದಿಂದ ನರವ್ಯೂಹ ಸಮಸ್ಯೆಗಳು, ಮೆದುಳಿನ ಹಾನಿ ಬರಬಹುದು. ವಿಶೇಷವಾಗಿ ಗರ್ಭಿಣಿಯರು ಮತ್ತು ಮಕ್ಕಳು ಇಂತಹ ಮೀನನ್ನು ತಪ್ಪಿಸಬೇಕು ಎಂದು ವರದಿ ಇದೆ.

(ವಿವಿಧ ವರದಿಗಳಿಂದ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

3 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

3 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

3 hours ago