Advertisement
ವೈರಲ್ ಸುದ್ದಿ

ಮೀನು ಪ್ರಿಯರೇ ಗಮನಿಸಿ, ಎಲ್ಲಾ ಮೀನುಗಳು ಉತ್ತಮವಲ್ಲ…!

Share

ಮೀನು ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಆದರೆ, ಮೀನಿನಲ್ಲೂ ಅನೇಕ ರೀತಿಯ ವಿಧಗಳಿವೆ. ಅದರಲ್ಲೂ ಎಲ್ಲಾ ಥರದ ಮೀನಗಳನ್ನು ತಿನ್ನುವಂತಿಲ್ಲ. ಕೆಲವು ಬಗೆಯ ಮೀನುಗಳು ಆರೋಗ್ಯಕ್ಕೆ ಅತ್ಯುತ್ತಮ.  ಮಕ್ಕಳು, ಹಿರಿಯರು ಮತ್ತು ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಮೀನು ಹೇಳಿ ಮಾಡಿಸಿದ ಔಷಧಿ. ಮೀನಿನಲ್ಲಿ ವಿಟಮಿನ್ ಎ, ವಿಟಮಿನ್ ಡಿ, ರಂಜಕ, ಮೆಗ್ನೀಸಿಯಮ್, ಸೆಲೆನಿಯಮ್ ಮತ್ತು ಅಯೋಡಿಯನ್ ಇವೆ. ಮಾತ್ರವಲ್ಲ ಪ್ರೋಟೋನ್ ಕೂಡ ಹೇರಳವಾಗಿದೆ. ಇದು ದೇಹಕ್ಕೆ ಅಗತ್ಯ ಖನಿಜಗಳು ಮತ್ತು ಜೀವಸತ್ವಗಳ ಒಂದು ಗಣಿ.

ಮೀನು ಸೇವಿಸುವುದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭಗಳಿವೆ. ಮೀನಿನಲ್ಲಿರುವ ಒಮೆಗಾ 3 ಕೊಬ್ಬಿನಾಮ್ಲಗಳು ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ ಕೊಬ್ಬಿನಾಮ್ಲದಿಂದ ಕೂಡಿದ ಮೀನನ್ನು ಸೇವಿಸುವುದು ಒಳ್ಳೆಯದು. ಮೀನಿನಲ್ಲಿರುವ ಒಮೆಗಾ 3 ಕೊಬ್ಬಿನಾಮ್ಲಗಳು ಮತ್ತು ವಿಟಮಿನ್ ಇ ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ತಿಳಿದುಬಂದಿದೆ. ಮೀನನ್ನು ಹೆಚ್ಚು ಎಣ್ಣೆಯಲ್ಲಿ ಫ್ರೈ ಮಾಡಿ ಸೇವಿಸದಿರಿ. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ನೀವು ಮೀನಿನ ಸಾರು ಮಾಡಿ ಸೇವಿಸಿದರೆ ಬಹಳ ಒಳ್ಳೆಯದು. ಹೆಚ್ಚಿನ ಒಮೆಗಾ -3 ಕೊಬ್ಬಿನಾಮ್ಲದ ಅಂಶದಿಂದಾಗಿ ಕೊಬ್ಬಿನ ರೀತಿಯ ಮೀನುಗಳು ಹೃದಯದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಸಂಶೋಧಕರು ನಂಬಿದ್ದಾರೆ.

ಆದರೆ, ಸಣ್ಣ ಮೀನು ಅಥವಾ ಹುಲಿ ಮೀನುಗಳು ( ಫಾರ್ಮ್ ಮೀನು) ಹೆಚ್ಚು ಪೌಷ್ಠಿಕ ನೀಡುತ್ತದೆ ಎಂದು ಹೇಳುವುದು ತಪ್ಪು. ಯಾಕೆಂದರೆ ಫಾರ್ಮ್ ಚುಚ್ಚುಮದ್ದು ನೀಡಿ ಬೆಳೆಸುತ್ತಾರೆ. ಇದು ದೇಹಕ್ಕೆ ತುಂಬ ಹಾನಿಕಾರಕವಾಗಿದೆ. ಕೊಲೆಸ್ಟ್ರಾಲ್ ಮತ್ತು ಹೃದಯ ಕಾಯಿಲೆಗಳನ್ನು ಸಹ ಹೆಚ್ಚಿಸುತ್ತದೆ ಎಂದು ತಿಳಿದುಬಂದಿದೆ. ಟಿಲಾಪಿಯಾದಲ್ಲಿ ಹೆಚ್ಚು ಹಾನಿಕಾರಕ ಮತ್ತು ಕೊಬ್ಬು ಹೆಚ್ಚಾಗಿದೆ. ಇದು ಕೊಲೆಸ್ಟ್ರಾಲ್ ಮತ್ತು ಹೃದಯ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಇದು ಡೈಬ್ಯುಟಿಲೀನ್ ಎಂಬ ರಾಸಾಯನಿಕವನ್ನು ಸಂಗ್ರಹಿಸುತ್ತದೆ. ಇದರಿಂದ ಆಸ್ತಮಾ, ಬೊಜ್ಜು ಮತ್ತು ಅಲರ್ಜಿ ಬರಬಹುದು. ಇದಲ್ಲದೆ, ಡಯಾಕ್ಸಿನ್ ಎಂಬ ವಿಷಕಾರಿ ವಸ್ತುವೂ ಇದರಲ್ಲಿ ಕಾಣಿಸುತ್ತದೆ. ಇದು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಹುಲಿ ಮೀನುಗಳು ನೀರಿನಲ್ಲಿ ಬೀಳುವ ಕೈಗಾರಿಕಾ ಮತ್ತು ಕೃಷಿ ತ್ಯಾಜ್ಯವನ್ನು ತಿನ್ನುತ್ತವೆ. ಆದ್ದರಿಂದ ಇವು ಸಂಪೂರ್ಣ ಕಲುಷಿತ. ಇದರಲ್ಲಿರುವ ಪಾದರಸ (ಮರ್ಕ್ಯುರಿ) ಮಟ್ಟ ಮನುಷ್ಯನ ದೇಹಕ್ಕೆ ಸಹಿಸಲಾಗದ್ದು. ಪಾದರಸದಿಂದ ನರವ್ಯೂಹ ಸಮಸ್ಯೆಗಳು, ಮೆದುಳಿನ ಹಾನಿ ಬರಬಹುದು. ವಿಶೇಷವಾಗಿ ಗರ್ಭಿಣಿಯರು ಮತ್ತು ಮಕ್ಕಳು ಇಂತಹ ಮೀನನ್ನು ತಪ್ಪಿಸಬೇಕು ಎಂದು ವರದಿ ಇದೆ.

(ವಿವಿಧ ವರದಿಗಳಿಂದ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

16 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

21 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

1 day ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

1 day ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

1 day ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

2 days ago