ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

August 26, 2024
3:13 PM
  • ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ವಿಭಿನ್ನ ಪ್ರಯತ್ನ
  • ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ

ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ(Aedes mosquito) ಖೆಡ್ಡ ತೋಡಲು ಆರೋಗ್ಯ ಇಲಾಖೆ(HEALTH Department) ಹಾಗೂ ಬಿಬಿಎಂಪಿ(BBMP) ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದೆ. ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್‌ ಸಾಧನಗಳನ್ನ(OV trap devices )ಬೆಂಗಳೂರಿನ(Bengaluru) ಗೋಪಾಲಪುರದಲ್ಲಿ ಅಳವಡಿಸಲಾಗಿದ್ದು, ಆರೋಗ್ಯ ಸಚಿವ(Health Minister) ದಿನೇಶ್ ಗುಂಡೂರಾವ್(Dinesh Gundu rao) ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನ ಮನೆ ಮನೆಗಳಿಗೆ ಅಳವಡಿಸಲಾಗಿದೆ. ಓವಿ ಟ್ರ್ಯಾಪ್ ಬಯೋ ಸಾಧನವಾಗಿದ್ದು, ಈಡಿಸ್ ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುತ್ತದೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಸೊಳ್ಳೆಗಳು ಹೆಚ್ಚಿರೋ ಕಡೆ ಈ ಸಾಧನ ಅಳವಡಿಸುವ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಿವೆ.

Advertisement

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಡಿಸ್ ಸೊಳ್ಳೆಗಳನ್ನ ನಾಶಪಡಿಸುವ ಬಯೋ ಸಾಧನಗಳನ್ನ ಪ್ರಾಯೋಗಿಕವಾಗಿ ಬಳಕೆ ಮಾಡುತ್ತಿದ್ದೇವೆ.. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣ ಚೆನ್ನಾಗಿ ಆದರೆ ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಂಮಿಕ ರೋಗಗಳನ್ನೂ ಕಂಟ್ರೋಲ್​ ಗೆ ತರಬಹುದು. ಮುಂಬೈನ ಧಾರವಿ ಕೊಳಗೇರಿ ಪ್ರದೇಶದಲ್ಲೂ ಈ ಪ್ರಯೋಗ ನಡೀತಿದೆ. ಅದೇ ರೀತಿ ಬೆಂಗಳೂರಿನಲ್ಲೂ ಪ್ರಯೋಗ ಆರಂಭಿಸಲಾಗಿದೆ. ಉತ್ತಮ ಫಲಿತಾಂಶ ದೊರೆತರೆ ರಾಜ್ಯದಾದ್ಯಂತ ಓವಿ ಟ್ರ್ಯಾಪ್ ಸಾಧನಗಳನ್ನ ಅಳವಡಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಏನಿದು ಬಯೋ ಟ್ರ್ಯಾಪ್ ಸಾಧನ: ಇದೊಂದು ಮಡಿಕೆ ಆಕಾರದ ಸಾಧನವಾಗಿದೆ. ಕುಂಡದಲ್ಲಿ ನೀರು ತುಂಬಿ ರಾಸಾಯನಿಕ ಬೆರಸಲಾಗುತ್ತದೆ. ರಾಸಾಯನಿಕ ಮಿಶ್ರಣ ಸೊಳ್ಳೆಗಳನ್ನ ಆಕರ್ಷಿಸಿ ಸಾಯಿಸುತ್ತೆ. ಈಡಿಸ್ ಸೊಳ್ಳೆಗಳು ಹಾಗೂ ಸೊಳ್ಳೆಗಳ ಮೊಟ್ಟೆಗಳನ್ನ ನಾಶಪಡಿಸುತ್ತದೆ. ಬಯೋ ಟ್ರ್ಯಾಪ್ ಬಳಕೆಯಿಂದ ಶೇ.60 ರಷ್ಟು ಸೊಳ್ಳೆಗಳ ನಿಯಂತ್ರಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror