MIRROR FOCUS

ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Share
  • ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ವಿಭಿನ್ನ ಪ್ರಯತ್ನ
  • ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ

ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ(Aedes mosquito) ಖೆಡ್ಡ ತೋಡಲು ಆರೋಗ್ಯ ಇಲಾಖೆ(HEALTH Department) ಹಾಗೂ ಬಿಬಿಎಂಪಿ(BBMP) ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದೆ. ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್‌ ಸಾಧನಗಳನ್ನ(OV trap devices )ಬೆಂಗಳೂರಿನ(Bengaluru) ಗೋಪಾಲಪುರದಲ್ಲಿ ಅಳವಡಿಸಲಾಗಿದ್ದು, ಆರೋಗ್ಯ ಸಚಿವ(Health Minister) ದಿನೇಶ್ ಗುಂಡೂರಾವ್(Dinesh Gundu rao) ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Advertisement

ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನ ಮನೆ ಮನೆಗಳಿಗೆ ಅಳವಡಿಸಲಾಗಿದೆ. ಓವಿ ಟ್ರ್ಯಾಪ್ ಬಯೋ ಸಾಧನವಾಗಿದ್ದು, ಈಡಿಸ್ ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುತ್ತದೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಸೊಳ್ಳೆಗಳು ಹೆಚ್ಚಿರೋ ಕಡೆ ಈ ಸಾಧನ ಅಳವಡಿಸುವ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಿವೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಡಿಸ್ ಸೊಳ್ಳೆಗಳನ್ನ ನಾಶಪಡಿಸುವ ಬಯೋ ಸಾಧನಗಳನ್ನ ಪ್ರಾಯೋಗಿಕವಾಗಿ ಬಳಕೆ ಮಾಡುತ್ತಿದ್ದೇವೆ.. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣ ಚೆನ್ನಾಗಿ ಆದರೆ ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಂಮಿಕ ರೋಗಗಳನ್ನೂ ಕಂಟ್ರೋಲ್​ ಗೆ ತರಬಹುದು. ಮುಂಬೈನ ಧಾರವಿ ಕೊಳಗೇರಿ ಪ್ರದೇಶದಲ್ಲೂ ಈ ಪ್ರಯೋಗ ನಡೀತಿದೆ. ಅದೇ ರೀತಿ ಬೆಂಗಳೂರಿನಲ್ಲೂ ಪ್ರಯೋಗ ಆರಂಭಿಸಲಾಗಿದೆ. ಉತ್ತಮ ಫಲಿತಾಂಶ ದೊರೆತರೆ ರಾಜ್ಯದಾದ್ಯಂತ ಓವಿ ಟ್ರ್ಯಾಪ್ ಸಾಧನಗಳನ್ನ ಅಳವಡಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಏನಿದು ಬಯೋ ಟ್ರ್ಯಾಪ್ ಸಾಧನ: ಇದೊಂದು ಮಡಿಕೆ ಆಕಾರದ ಸಾಧನವಾಗಿದೆ. ಕುಂಡದಲ್ಲಿ ನೀರು ತುಂಬಿ ರಾಸಾಯನಿಕ ಬೆರಸಲಾಗುತ್ತದೆ. ರಾಸಾಯನಿಕ ಮಿಶ್ರಣ ಸೊಳ್ಳೆಗಳನ್ನ ಆಕರ್ಷಿಸಿ ಸಾಯಿಸುತ್ತೆ. ಈಡಿಸ್ ಸೊಳ್ಳೆಗಳು ಹಾಗೂ ಸೊಳ್ಳೆಗಳ ಮೊಟ್ಟೆಗಳನ್ನ ನಾಶಪಡಿಸುತ್ತದೆ. ಬಯೋ ಟ್ರ್ಯಾಪ್ ಬಳಕೆಯಿಂದ ಶೇ.60 ರಷ್ಟು ಸೊಳ್ಳೆಗಳ ನಿಯಂತ್ರಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

1 hour ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

2 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

3 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

3 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಹವಾಮಾನ ವರದಿ | 10-04-2025 | ಎ.18 ರ ತನಕವೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆ

11.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

18 hours ago