Advertisement
MIRROR FOCUS

ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Share
  • ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ವಿಭಿನ್ನ ಪ್ರಯತ್ನ
  • ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ

ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ(Aedes mosquito) ಖೆಡ್ಡ ತೋಡಲು ಆರೋಗ್ಯ ಇಲಾಖೆ(HEALTH Department) ಹಾಗೂ ಬಿಬಿಎಂಪಿ(BBMP) ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದೆ. ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್‌ ಸಾಧನಗಳನ್ನ(OV trap devices )ಬೆಂಗಳೂರಿನ(Bengaluru) ಗೋಪಾಲಪುರದಲ್ಲಿ ಅಳವಡಿಸಲಾಗಿದ್ದು, ಆರೋಗ್ಯ ಸಚಿವ(Health Minister) ದಿನೇಶ್ ಗುಂಡೂರಾವ್(Dinesh Gundu rao) ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನ ಮನೆ ಮನೆಗಳಿಗೆ ಅಳವಡಿಸಲಾಗಿದೆ. ಓವಿ ಟ್ರ್ಯಾಪ್ ಬಯೋ ಸಾಧನವಾಗಿದ್ದು, ಈಡಿಸ್ ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುತ್ತದೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಸೊಳ್ಳೆಗಳು ಹೆಚ್ಚಿರೋ ಕಡೆ ಈ ಸಾಧನ ಅಳವಡಿಸುವ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಿವೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಡಿಸ್ ಸೊಳ್ಳೆಗಳನ್ನ ನಾಶಪಡಿಸುವ ಬಯೋ ಸಾಧನಗಳನ್ನ ಪ್ರಾಯೋಗಿಕವಾಗಿ ಬಳಕೆ ಮಾಡುತ್ತಿದ್ದೇವೆ.. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣ ಚೆನ್ನಾಗಿ ಆದರೆ ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಂಮಿಕ ರೋಗಗಳನ್ನೂ ಕಂಟ್ರೋಲ್​ ಗೆ ತರಬಹುದು. ಮುಂಬೈನ ಧಾರವಿ ಕೊಳಗೇರಿ ಪ್ರದೇಶದಲ್ಲೂ ಈ ಪ್ರಯೋಗ ನಡೀತಿದೆ. ಅದೇ ರೀತಿ ಬೆಂಗಳೂರಿನಲ್ಲೂ ಪ್ರಯೋಗ ಆರಂಭಿಸಲಾಗಿದೆ. ಉತ್ತಮ ಫಲಿತಾಂಶ ದೊರೆತರೆ ರಾಜ್ಯದಾದ್ಯಂತ ಓವಿ ಟ್ರ್ಯಾಪ್ ಸಾಧನಗಳನ್ನ ಅಳವಡಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಏನಿದು ಬಯೋ ಟ್ರ್ಯಾಪ್ ಸಾಧನ: ಇದೊಂದು ಮಡಿಕೆ ಆಕಾರದ ಸಾಧನವಾಗಿದೆ. ಕುಂಡದಲ್ಲಿ ನೀರು ತುಂಬಿ ರಾಸಾಯನಿಕ ಬೆರಸಲಾಗುತ್ತದೆ. ರಾಸಾಯನಿಕ ಮಿಶ್ರಣ ಸೊಳ್ಳೆಗಳನ್ನ ಆಕರ್ಷಿಸಿ ಸಾಯಿಸುತ್ತೆ. ಈಡಿಸ್ ಸೊಳ್ಳೆಗಳು ಹಾಗೂ ಸೊಳ್ಳೆಗಳ ಮೊಟ್ಟೆಗಳನ್ನ ನಾಶಪಡಿಸುತ್ತದೆ. ಬಯೋ ಟ್ರ್ಯಾಪ್ ಬಳಕೆಯಿಂದ ಶೇ.60 ರಷ್ಟು ಸೊಳ್ಳೆಗಳ ನಿಯಂತ್ರಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

10 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago