Advertisement
MIRROR FOCUS

ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Share
  • ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ವಿಭಿನ್ನ ಪ್ರಯತ್ನ
  • ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ

ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ(Aedes mosquito) ಖೆಡ್ಡ ತೋಡಲು ಆರೋಗ್ಯ ಇಲಾಖೆ(HEALTH Department) ಹಾಗೂ ಬಿಬಿಎಂಪಿ(BBMP) ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದೆ. ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್‌ ಸಾಧನಗಳನ್ನ(OV trap devices )ಬೆಂಗಳೂರಿನ(Bengaluru) ಗೋಪಾಲಪುರದಲ್ಲಿ ಅಳವಡಿಸಲಾಗಿದ್ದು, ಆರೋಗ್ಯ ಸಚಿವ(Health Minister) ದಿನೇಶ್ ಗುಂಡೂರಾವ್(Dinesh Gundu rao) ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನ ಮನೆ ಮನೆಗಳಿಗೆ ಅಳವಡಿಸಲಾಗಿದೆ. ಓವಿ ಟ್ರ್ಯಾಪ್ ಬಯೋ ಸಾಧನವಾಗಿದ್ದು, ಈಡಿಸ್ ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುತ್ತದೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಸೊಳ್ಳೆಗಳು ಹೆಚ್ಚಿರೋ ಕಡೆ ಈ ಸಾಧನ ಅಳವಡಿಸುವ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಿವೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಡಿಸ್ ಸೊಳ್ಳೆಗಳನ್ನ ನಾಶಪಡಿಸುವ ಬಯೋ ಸಾಧನಗಳನ್ನ ಪ್ರಾಯೋಗಿಕವಾಗಿ ಬಳಕೆ ಮಾಡುತ್ತಿದ್ದೇವೆ.. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣ ಚೆನ್ನಾಗಿ ಆದರೆ ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಂಮಿಕ ರೋಗಗಳನ್ನೂ ಕಂಟ್ರೋಲ್​ ಗೆ ತರಬಹುದು. ಮುಂಬೈನ ಧಾರವಿ ಕೊಳಗೇರಿ ಪ್ರದೇಶದಲ್ಲೂ ಈ ಪ್ರಯೋಗ ನಡೀತಿದೆ. ಅದೇ ರೀತಿ ಬೆಂಗಳೂರಿನಲ್ಲೂ ಪ್ರಯೋಗ ಆರಂಭಿಸಲಾಗಿದೆ. ಉತ್ತಮ ಫಲಿತಾಂಶ ದೊರೆತರೆ ರಾಜ್ಯದಾದ್ಯಂತ ಓವಿ ಟ್ರ್ಯಾಪ್ ಸಾಧನಗಳನ್ನ ಅಳವಡಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಏನಿದು ಬಯೋ ಟ್ರ್ಯಾಪ್ ಸಾಧನ: ಇದೊಂದು ಮಡಿಕೆ ಆಕಾರದ ಸಾಧನವಾಗಿದೆ. ಕುಂಡದಲ್ಲಿ ನೀರು ತುಂಬಿ ರಾಸಾಯನಿಕ ಬೆರಸಲಾಗುತ್ತದೆ. ರಾಸಾಯನಿಕ ಮಿಶ್ರಣ ಸೊಳ್ಳೆಗಳನ್ನ ಆಕರ್ಷಿಸಿ ಸಾಯಿಸುತ್ತೆ. ಈಡಿಸ್ ಸೊಳ್ಳೆಗಳು ಹಾಗೂ ಸೊಳ್ಳೆಗಳ ಮೊಟ್ಟೆಗಳನ್ನ ನಾಶಪಡಿಸುತ್ತದೆ. ಬಯೋ ಟ್ರ್ಯಾಪ್ ಬಳಕೆಯಿಂದ ಶೇ.60 ರಷ್ಟು ಸೊಳ್ಳೆಗಳ ನಿಯಂತ್ರಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

17 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

23 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago