Advertisement
MIRROR FOCUS

ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Share
  • ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ವಿಭಿನ್ನ ಪ್ರಯತ್ನ
  • ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ

ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ(Aedes mosquito) ಖೆಡ್ಡ ತೋಡಲು ಆರೋಗ್ಯ ಇಲಾಖೆ(HEALTH Department) ಹಾಗೂ ಬಿಬಿಎಂಪಿ(BBMP) ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದೆ. ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್‌ ಸಾಧನಗಳನ್ನ(OV trap devices )ಬೆಂಗಳೂರಿನ(Bengaluru) ಗೋಪಾಲಪುರದಲ್ಲಿ ಅಳವಡಿಸಲಾಗಿದ್ದು, ಆರೋಗ್ಯ ಸಚಿವ(Health Minister) ದಿನೇಶ್ ಗುಂಡೂರಾವ್(Dinesh Gundu rao) ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನ ಮನೆ ಮನೆಗಳಿಗೆ ಅಳವಡಿಸಲಾಗಿದೆ. ಓವಿ ಟ್ರ್ಯಾಪ್ ಬಯೋ ಸಾಧನವಾಗಿದ್ದು, ಈಡಿಸ್ ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುತ್ತದೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಸೊಳ್ಳೆಗಳು ಹೆಚ್ಚಿರೋ ಕಡೆ ಈ ಸಾಧನ ಅಳವಡಿಸುವ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಿವೆ.

Advertisement

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಡಿಸ್ ಸೊಳ್ಳೆಗಳನ್ನ ನಾಶಪಡಿಸುವ ಬಯೋ ಸಾಧನಗಳನ್ನ ಪ್ರಾಯೋಗಿಕವಾಗಿ ಬಳಕೆ ಮಾಡುತ್ತಿದ್ದೇವೆ.. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣ ಚೆನ್ನಾಗಿ ಆದರೆ ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಂಮಿಕ ರೋಗಗಳನ್ನೂ ಕಂಟ್ರೋಲ್​ ಗೆ ತರಬಹುದು. ಮುಂಬೈನ ಧಾರವಿ ಕೊಳಗೇರಿ ಪ್ರದೇಶದಲ್ಲೂ ಈ ಪ್ರಯೋಗ ನಡೀತಿದೆ. ಅದೇ ರೀತಿ ಬೆಂಗಳೂರಿನಲ್ಲೂ ಪ್ರಯೋಗ ಆರಂಭಿಸಲಾಗಿದೆ. ಉತ್ತಮ ಫಲಿತಾಂಶ ದೊರೆತರೆ ರಾಜ್ಯದಾದ್ಯಂತ ಓವಿ ಟ್ರ್ಯಾಪ್ ಸಾಧನಗಳನ್ನ ಅಳವಡಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಏನಿದು ಬಯೋ ಟ್ರ್ಯಾಪ್ ಸಾಧನ: ಇದೊಂದು ಮಡಿಕೆ ಆಕಾರದ ಸಾಧನವಾಗಿದೆ. ಕುಂಡದಲ್ಲಿ ನೀರು ತುಂಬಿ ರಾಸಾಯನಿಕ ಬೆರಸಲಾಗುತ್ತದೆ. ರಾಸಾಯನಿಕ ಮಿಶ್ರಣ ಸೊಳ್ಳೆಗಳನ್ನ ಆಕರ್ಷಿಸಿ ಸಾಯಿಸುತ್ತೆ. ಈಡಿಸ್ ಸೊಳ್ಳೆಗಳು ಹಾಗೂ ಸೊಳ್ಳೆಗಳ ಮೊಟ್ಟೆಗಳನ್ನ ನಾಶಪಡಿಸುತ್ತದೆ. ಬಯೋ ಟ್ರ್ಯಾಪ್ ಬಳಕೆಯಿಂದ ಶೇ.60 ರಷ್ಟು ಸೊಳ್ಳೆಗಳ ನಿಯಂತ್ರಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

14 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

14 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

18 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

21 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

1 day ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

1 day ago