Advertisement
MIRROR FOCUS

ದೇಶೀ ಆಹಾರ ಸೇವನೆಯಿಂದ  ಆರೋಗ್ಯ ವೃದ್ಧಿ | ಡಾ.ಖಾದರ್‌ ಅಭಿಪ್ರಾಯ |

Share

ದೇಶೀ ಆಹಾರ ಸಂಪೂರ್ಣವಾಗಿ ಆರೋಗ್ಯವನ್ನು ತಂದು ಕೊಡುತ್ತದೆ. ಸಂಪತ್ತನ್ನು ಗಳಿಸುವುದಕ್ಕಿಂತ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮೈಸೂರಿನ ಪದ್ಮಶ್ರೀ ಡಾ. ಖಾದರ್ ಯಾದಗಿರಿಯಲ್ಲಿ ತಿಳಿಸಿದ್ದಾರೆ.

ಯಾದಗಿರಿ ನಗರದ ಲಕ್ಷ್ಮಿ ದೇವಸ್ಥಾನದಲ್ಲಿ ಹಮ್ಮಿಕೊಂಡದ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸ್ವರ್ಣ ಜಯಂತಿ, ವಿಕಾಸ ಅಕಾಡೆಮಿ, ಭಾರತ ವಿಕಾಸ ಸಂಗಮ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೋಗ ಬಂದ ಮೇಲೆ ಆಹಾರ ಪದ್ಧತಿಯನ್ನು ಬದಲಾವಣೆ ಮಾಡುವ ಬದಲು ರೋಗ ಬರುವುದಕ್ಕೆ ಮೊದಲೇ ಆಹಾರ ಪದ್ದತಿಯನ್ನು ಬದಲಾಯಿಸಿ. ಅಕ್ಕಿ, ಗೋಧಿ, ಸಕ್ಕರೆಯಿಂದ ರೋಗಗಳು ಬರುತ್ತಿವೆ. ಪ್ಲಾಸ್ಟಿಕ್ ಕಣಗಳು ದೇಹವನ್ನು ಸೇರಿ ಲವಣಾಂಶಗಳು ಜೀವಸತ್ವಗಳನ್ನು ಹೀರುವ ಶಕ್ತಿಯನ್ನು ನಾಶಪಡಿಸಿ ಡಯಾಬಿಟಿಸ್, ಕ್ಯಾನ್ಸರ್ ನಂತಹ ಮಾರಕ ರೋಗಗಳು ಬಾಧಿಸುತ್ತಿವೆ ಎಂದರು. ನಮ್ಮ ಪೂರ್ವಜರು ನವಣೆ, ಸಾಬಿ, ಸಜ್ಜಿ, ಕೊರಲೇ, ಹುಚ್ಚೆಳ್ಳು, ಕೊಬ್ಬರಿಯಂತಹ ಸಿರಿಧಾನ್ಯಗಳನ್ನು ಆಹಾರ ಪದ್ದತಿಯಲ್ಲಿ ಬಳಸುತ್ತಿದ್ದರು. ಅವರ ಆರೋಗ್ಯವು ಸಧೃಡವಾಗಿ ಇರುತ್ತಿತ್ತು. ಹಿಂದಿನ ಪದ್ಧತಿ, ಜೀವನ ಶೈಲಿ ಮರೆಯಾಗಿದೆ. ವಿಷವರ್ತುಲದಿಂದ ಹೊರಬಂದು ಅಮೂಲಾಗ್ರವಾಗಿ ಆಹಾರ ಪದ್ಧತಿಯನ್ನ ಬದಲಾಯಿಸಿ. ಸಿರಿಧಾನ್ಯಗಳನ್ನು ಬೆಳೆಸುವುದು ಸರಳವಾಗಿದೆ. ಒಣಭೂಮಿ ಬೇಸಾಯದಲ್ಲಿ ಸಿರಿಧಾನ್ಯಗಳನ್ನು ಬೆಳೆಯಬಹುದು. ಇದರ ಸೇವೆಯಿಂದ ರೋಗಮುಕ್ತ ಜೀವನ ನಡೆಸಬಹುದು ಎಂದರು.

According to Dr. Khadar, diseases can be caused by rice, wheat, and sugar. He explained that plastic particles can enter the body, disrupt the absorption of vitamins, and potentially lead to serious illnesses such as diabetes and cancer. Khader also emphasized the negative impact of these substances on health.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

22 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago