Advertisement
ಆರೋಗ್ಯ

ಪುನರ್ಪುಳಿ ಕೃಷಿ ಸಾಧ್ಯ ಏಕೆ ? | ಆರೋಗ್ಯಕ್ಕೆ ಎಷ್ಟು ಅಗತ್ಯ ಪುನರ್ಪುಳಿ ? |

Share

ಪುನರ್ಪುಳಿ ಅಂದರೆ ಗ್ರಾಮೀಣ ಭಾಗದ ಎಲ್ಲರಿಗೂ ತಿಳಿದಿರುವ ಹಣ್ಣು. ಜ್ಯೂಸ್‌, ಸಾರು ಸೇರಿದಂತೆ ದಿನಬಳಕೆಯ ವಸ್ತು ಪುನರ್ಪುಳಿ. ಈ ಹಣ್ಣು ಆರೋಗ್ಯ ವರ್ಧಕವೂ ಹೌದು. ಇದರಲ್ಲಿ ಅದ್ಭುತವಾದ ಔಷಧೀಯ ಗುಣಗಳಿವೆ. ಇದು ಜೀರ್ಣಕ್ರಿಯೆ ಮತ್ತು ಚರ್ಮದ ಆರೋಗ್ಯಕ್ಕೆ ಸಹಾಯ ಮಾಡುವುದಲ್ಲದೆ, ದೇಹವನ್ನು ತಂಪಾಗಿಸುತ್ತದೆ.ಇಂತಹ ಹಣ್ಣಿನ ಕೃಷಿಯ ಕಡೆಗೆ ಕೃಷಿಕರು ಗಮನಹರಿಸಬೇಕು. ಕೃಷಿಯ ಜೊತೆಗೆ ಉಪ ಆದಾಯವಾಗಿಯೂ  ಪುನರ್ಪುಳಿ ನೆರವಾಗಬಲ್ಲುದು.

ಪುನರ್ಪುಳಿ ಬೇಸಿಗೆಯ ಹಣ್ಣು ಮತ್ತು ಇದರ ಶರಬತ್ತು ನಿರ್ಜಲೀಕರಣ ಮತ್ತು ಶಾಖದ ಹೊಡೆತದ ಸಂಭವನೀಯತೆಯನ್ನು ತಪ್ಪಿಸಲು ನಮಗೆ ಸಹಾಯ ಮಾಡುತ್ತದೆ. ಅಲ್ಲದೆ ಈ ಪಾನೀಯ ನಮ್ಮ ದೇಹವನ್ನು ತಂಪಾಗಿರಿಸುತ್ತದೆ ಮತ್ತು ರಿಫ್ರೆಶ್ ಆಗಿರಿಸುತ್ತದೆ.

ಸಿಹಿಯಾದ, ಕಟುವಾದ ಮತ್ತು ಹೆಚ್ಚು ಉಲ್ಲಾಸಕರವಾದ ಪುನರ್ಪುಳಿ ಶರಬತ್ತು ಕರುಳಿನ ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆಮ್ಲೀಯತೆ ಮತ್ತು ಅಜೀರ್ಣದಿಂದ ಬಳಲುತ್ತಿರುವ ರೋಗಿಗಳು ಈ ಪಾನೀಯವನ್ನು ಕುಡಿಯುವುದರಿಂದ ಅಪಾರ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಇಮ್ಯುನಿಟಿ ಬೂಸ್ಟರ್: ಈ ಹಣ್ಣು ಆಂಟಿ-ಬ್ಯಾಕ್ಟೀರಿಯಲ್ ಮತ್ತು ಆಂಟಿ-ವೈರಲ್ ಗುಣಲಕ್ಷಣಗಳಿಂದ ಸಮೃದ್ಧವಾಗಿದೆ. ಈ ಹಣ್ಣು ಅನೇಕ ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳನ್ನು ನಿಭಾಯಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮತ್ತು ನಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ.  ಪುನರ್ಪುಳಿ ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ ಮತ್ತು ಫೈಬರ್​​​ನಿಂದ ಸಮೃದ್ಧವಾಗಿದೆ. ಅಲ್ಲದೆ ಇದು ಶೂನ್ಯ ಕೊಲೆಸ್ಟ್ರಾಲ್​​​​ನ್ನು ಹೊಂದಿರುತ್ತದೆ. ಆದ್ದರಿಂದ ಇದು ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದೆ. ಇದರಲ್ಲಿರುವ ಮೆಗ್ನೇಷಿಯಂ, ಪೊಟ್ಯಾಷಿಯಂ, ಮತ್ತು ಮ್ಯಾಂಗನೀಸ್ ನಂತಹ ಖನಿಜಗಳು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಪರಿಣಾಮವಾಗಿ ಇದು ಹೃದಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

23 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago