Advertisement
ಸುದ್ದಿಗಳು

ಅಜೀರ್ಣ ಸಮಸ್ಯೆಗಳಿಗೆ ಕೆಲವು ಮನೆಮದ್ದು

Share

ಕಾರ್ಯಕ್ರಮಗಳ ಮೇಲೆ ಕಾರ್ಯಕ್ರಮವಾದರೆ ಹೊಟ್ಟೆಯ ಸಂಕಷ್ಟ ಹೇಳತೀರದು. ಆಹಾರದ ವ್ಯತ್ಯಾಸವಾದರೆ ಅಜೀರ್ಣವೂ ಗ್ಯಾರಂಟಿ. ಮನೆಯಲ್ಲೂ  ಊಟದ ಸಮಯ ತಪ್ಪಿ ತಿಂದರೆ ಸಾಕು ಅಜೀರ್ಣ. ಈ ಅಜೀರ್ಣಕ್ಕೆ ಏನು ಮದ್ದು.. ಮನೆಯಲ್ಲೇ ಏನು ಮಾಡಬಹುದು..?

  1. ಜೀರಿಗೆ ನೀರು ಕುಡಿಯುವುದು: ಒಂದು ಲೋಟ ನೀರಿನಲ್ಲಿ ಒಂದು ಚಮಚ ಜೀರಿಗೆ ಹಾಕಿ ಕುದಿಸಿ. ತಣ್ಣಗಾದ ನಂತರ ನಿಧಾನವಾಗಿ ಕುಡಿಯಿರಿ.ಜೀರಿಗೆಯಲ್ಲಿರುವ ಥೈಮೋಲ್ ಕಿಣ್ವಗಳನ್ನು ಉತ್ತೇಜಿಸಿ ಗ್ಯಾಸ್ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಇದನ್ನು ವಾರದಲ್ಲಿ ಎರಡು ಸಲ ಕುಡಿಯುವುದು ಉತ್ತಮ.
  2. ಶುಂಠಿ ಮತ್ತು ಜೇನು : ಸಣ್ಣ ಶುಂಠಿ ತುಂಡನ್ನು ಜಜ್ಜಿ ಅದಕ್ಕೆ ಒಂದು ಚಮಚ ಜೇನುತುಪ್ಪ ಬೆರೆಸಿ ಸೇವಿಸಿ. ಶುಂಠಿಯು ಜಠರದ ಚಲನೆಯನ್ನು ಸುಧಾರಿಸಿ, ಜೀರ್ಣಕ್ರಿಯೆಯನ್ನು ವೇಗಗೊಳಿಸುತ್ತದೆ. ಇದರಿಂದ ಅಜೀರ್ಣವನ್ನು ತಡೆಯಲು ಸಾಧ್ಯ.
  3. ಓಮದ ಕಾಳು: ಓಮದ ಕಾಳು ಹೊಟ್ಟೆ ಸಂಬಂಧಿತ ಕಾಯಿಲೆಗಳಿಗೆ ಹೇಳಿ ಮಾಡಿಸಿದ ಮದ್ದು, ಅರ್ಧ ಚಮಚ ಓಮದ ಕಾಳುಗಳನ್ನು ಬಾಯಿಗೆ ಹಾಕಿ ಚೆನ್ನಾಗಿ ಅಗಿಯಿರಿ. ಅಥವಾ ಸ್ವಲ್ಪ ಉಪ್ಪಿನೊಂದಿಗೆ ಬೆರೆಸಿ ಬಿಸಿ ನೀರು ಕುಡಿಯಿರಿ. ಇದು ಥೈಮೋಲ್‍ನ ಹೆಚ್ಚಿ ಸಾಂದ್ರತೆಯಿಂದಾಗಿ ಗ್ಯಾಸ್‍ಗೆ ತ್ವರಿತ ಪರಿಹಾರ ನೀಡುತ್ತದೆ.
  4. ಮಜ್ಜಿಗೆ ಮತ್ತು ಕರಿಮೆಣಸು: ಸೆಕೆ ಇರುವ ಬಿಸಿಲಿನಿಂದ ಮನೆಗೆ ಬಂದಾಗ ಒಂದು ಲೋಟ ಮಜ್ಜಿಗೆ ಕುಡಿದರೆ ಸಾಖು ದೇಹ ತಂಪಾಗುತ್ತದೆ. ಇದು ಅಜೀರ್ಣಗೂ ಹೇಳಿ ಮಾಡಿದೆ ಮದ್ದು. ಒಂದು ಲೋಟ ಮಜ್ಜಿಗೆಗೆ ಚಿಟಿಕೆಯಷ್ಟು ಕರಿಮೆಣಸಿನ ಪುಡಿ ಸೇರಿಸಿದರೆ ಸಾಕು ಜೀರ್ಣಕ್ರಿಯೆ ಸುಧಾರಿಸುತ್ತದೆ.
  5. ಫೆನ್ನೆಲ್ ಬೀಜಗಳು: ಎಲ್ಲ ಹೋಟೆಲ್ ಗಳಲ್ಲಿ ಊಟ ಆದ ನಂತರ ಬಿಲ್ ನೊಂದಿಗೆ ಸೋಂಪನ್ನು ಕೊಡುತ್ತಾರೆ. ಏಕೆಂದರೆ ಇದು ಬಾಯಿಯ ದುರ್ಗಂಧವನ್ನು ಹೊಗಲಾಡಿಸುತ್ತದೆ ಮತ್ತು ಜೀರ್ಣಾಕ್ರಿಯೆಯನ್ನು ಸರಿಪಡಿಸುತ್ತದೆ. ಆದುದರಿಂದ ದಿನಲೂ ಮನೆಯಲ್ಲಿ ಊಟದ ನಂತರ ಸೋಪು ಸೇವನೆ ಉತ್ತಮ.
  6. ಬೆಲ್ಲ: ಊಟದ ನಂತರ ಸಣ್ಣ ತುಂಡು ಬೆಲ್ಲ ತಿನ್ನುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಯಾವಾಗಲೂ ಊಟ ಆದ ತಕ್ಷಣ ಮಲಗಬಾರದು. ಇದರಿಂದ ಆರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡುತ್ತದೆ. ಆದುದರಿಂದ ಸ್ವಲ್ಪ ವಾಕಿಂಗ್ ಮಾಡುವುದು ಉತ್ತಮ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

15 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

15 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

15 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

15 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

15 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

23 hours ago