ಏನನ್ನು ತಿನ್ನಬೇಕು, ಎಷ್ಟು ತಿನ್ನಬೇಕು ಮತ್ತು ಯಾವಾಗ ತಿನ್ನಬೇಕು ಎಂಬ ಮೂರು ಪ್ರಶ್ನೆಗಳಿಗೆ ಸರಿಯಾದ ಉತ್ತರ ತಿಳಿದರೆ ಆರೋಗ್ಯಕರ ಜೀವನ ನಡೆಸುವುದು ಸುಲಭವಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.
ಶ್ರೀಕ್ಷೇತ್ರ ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ ಧರ್ಮಸಭೆಯಲ್ಲಿ ಶುಕ್ರವಾರ ಆಶೀರ್ವಚನ ನೀಡಿದ ಅವರು, ಆಯುರ್ವೇದದ ಮಹರ್ಷಿ ವಾಗ್ಭಟರು ಪ್ರತಿಪಾದಿಸಿರುವ “ಹಿತವಾದ ಆಹಾರವನ್ನು ಸೇವಿಸಿ, ಮಿತ ಪ್ರಮಾಣದಲ್ಲಿ ತಿನ್ನಿ ಮತ್ತು ಸಕಾಲದಲ್ಲಿ ಊಟ ಮಾಡಿ” ಎಂಬ ಸರಳ ಸೂತ್ರವೇ ಆರೋಗ್ಯಕರ ಬದುಕಿನ ಆಧಾರ ಎಂದು ತಿಳಿಸಿದರು.
ಮಾನವ ದೇಹ ಅಮೂಲ್ಯವಾದ ಸಂಪತ್ತು. ದೇಹಕ್ಕೆ ಹಾನಿಯಾಗುವ ಆಹಾರವನ್ನು ಸೇವಿಸಬಾರದು. ರುಚಿಯಿದೆ ಎಂಬ ಕಾರಣಕ್ಕೆ ಅತಿಯಾಗಿ ತಿನ್ನುವುದು ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು. ಮಿತಿ ಮೀರಿದ ಆಹಾರ ಸೇವನೆಯಿಂದ ಅಜೀರ್ಣ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ ಎಂದು ಅವರು ಎಚ್ಚರಿಸಿದರು.
ಪ್ರತಿಯೊಬ್ಬರೂ ಊಟ ಮಾಡುವ ಮುನ್ನ “ಇದು ನನಗೆ ಹಿತವೇ? ಎಷ್ಟು ಪ್ರಮಾಣದಲ್ಲಿ ತಿನ್ನಬೇಕು? ಈಗ ಇದನ್ನು ತಿನ್ನಲು ಸರಿಯಾದ ಸಮಯವೇ?” ಎಂಬ ಮೂರು ಪ್ರಶ್ನೆಗಳನ್ನು ತಮ್ಮನ್ನು ತಾವು ಕೇಳಿಕೊಳ್ಳಬೇಕು. ಸಿಕ್ಕಿದ್ದನ್ನೆಲ್ಲ ಸೇವಿಸುವ ಬದಲು, ದೇಹಕ್ಕೆ ಹಿತವಾದ ಆಹಾರವನ್ನು ಆಯ್ಕೆ ಮಾಡಿಕೊಳ್ಳುವ ವಿವೇಕ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಅತ್ಯುತ್ತಮ ಆಹಾರವೂ ಅಸಮಯದಲ್ಲಿ ಸೇವಿಸಿದರೆ ದೇಹಕ್ಕೆ ವಿರುದ್ಧ ಪರಿಣಾಮ ಬೀರುತ್ತದೆ. ಸರಿಯಾದ ಸಮಯದಲ್ಲಿ ಸೇವಿಸಿದ ಆಹಾರ ಮಾತ್ರ ದೇಹಕ್ಕೆ ಪೋಷಣೆ ನೀಡುತ್ತದೆ. ಸಮಯ ಮೀರಿ ಅಥವಾ ಅಕಾಲದಲ್ಲಿ ಸೇವಿಸಿದ ಆಹಾರ ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಅವರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ಹಣ ಕೊಟ್ಟರೂ ದೇಹದ ಯಾವುದೇ ಅಂಗವನ್ನು ಮರಳಿ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ದೇಹವನ್ನು ದೇವರ ಕೊಡುಗೆಯೆಂದು ಭಾವಿಸಿ, ಅದನ್ನು ಕಾಪಾಡುವ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. “ಹಿತವನ್ನು ತಿನ್ನಿ, ಮಿತವಾಗಿ ತಿನ್ನಿ ಮತ್ತು ಸಕಾಲದಲ್ಲಿ ತಿನ್ನಿ” ಎಂಬ ಒಂದೇ ಸೂತ್ರವನ್ನು ಪಾಲಿಸಿದರೆ ಆರೋಗ್ಯಕರ ಹಾಗೂ ಸಂತೋಷದ ಜೀವನ ನಡೆಸಬಹುದು ಎಂದು ಶ್ರೀಗಳು ಹೇಳಿದರು.
Jagadguru Shankaracharya Sri Raghaveshwara Bharathi Swamiji said that good health depends on choosing the right food, eating in moderation, and having meals at the proper time. Speaking at the Annabrahma Chaturmasya programme in Gokarna, he stressed that mindful eating is the foundation of a healthy and happy life.
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…