Advertisement
ಸುದ್ದಿಗಳು

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

Share

ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಆಹಾರವೇ ಪ್ರಮುಖ ಆಧಾರವಾಗಿದೆ. ದೇಹಕ್ಕೆ ಹಿತವಾದ ಆಹಾರ, ಮಿತ ಪ್ರಮಾಣದ ಊಟ ಹಾಗೂ ಸರಿಯಾದ ಸಮಯದಲ್ಲಿ ಆಹಾರ ಸೇವಿಸುವುದೇ ಆರೋಗ್ಯಕರ ಜೀವನದ ಮೂಲ ಸೂತ್ರವಾಗಿದೆ. ಇಷ್ಟವಾದದ್ದನ್ನು ತಿನ್ನುವುದಲ್ಲ, ದೇಹಕ್ಕೆ ಒಳ್ಳೆಯದಾಗಿರುವ ಆಹಾರವನ್ನು ಸೇವಿಸುವುದು ಮುಖ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದ ಆವರಣದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ ಧರ್ಮಸಭೆಯಲ್ಲಿ ಗುರುವಾರ  ನಡೆದ ‘ಅನ್ನಂ ಬ್ರಹ್ಮ’ ಪ್ರವಚನ ಸರಣಿಯಲ್ಲಿ ಆಶೀರ್ವಚನ ನೀಡಿದ ಅವರು, ಆಯುರ್ವೇದದ ಪ್ರಸಿದ್ಧ ವೈದ್ಯ ವಾಗ್ಭಟ ಹಾಗೂ ಆರೋಗ್ಯದ ಅಧಿದೇವತೆ ಧನ್ವಂತರಿ ಕುರಿತ ಪ್ರಸಂಗವನ್ನು ಉಲ್ಲೇಖಿಸಿದರು.

‘ಯಾರು ರೋಗರಹಿತರು?’ ಎಂಬ ಧನ್ವಂತರಿಯ ಪ್ರಶ್ನೆಗೆ ವಾಗ್ಭಟರು ‘ಹಿತಭುಕ್, ಮಿತಭುಕ್, ಅಶಾಕಭುಕ್’ ಎಂಬ ಮೂರು ಪದಗಳಲ್ಲೇ ಉತ್ತರ ನೀಡಿದ್ದಾರೆ ಎಂದು ವಿವರಿಸಿದ ಶ್ರೀಗಳು, ಹಿತಭುಕ್ ಎಂದರೆ ದೇಹಕ್ಕೆ ಹಿತವಾದ ಆಹಾರವನ್ನು ಸೇವಿಸುವವನು, ಮಿತಭುಕ್ ಎಂದರೆ ಅಗತ್ಯ ಪ್ರಮಾಣದಲ್ಲಿ ಮಾತ್ರ ಆಹಾರ ಸೇವಿಸುವವನು ಹಾಗೂ ಅಶಾಕಭುಕ್ ಎಂದರೆ ಸೊಪ್ಪು-ತರಕಾರಿಗಳನ್ನು ಅತಿಯಾಗಿ ಸೇವಿಸದವನು ಎಂದು ತಿಳಿಸಿದರು.

ಇತ್ತೀಚೆಗೆ ಮುಂಜಾನೆ ಪ್ರಯಾಣದ ವೇಳೆ ಬೆಳಗ್ಗೆ 4 ಗಂಟೆಯಲ್ಲೇ ಹೋಟೆಲ್‌ಗಳ ಮುಂದೆ ಜನರು ಆಹಾರಕ್ಕಾಗಿ ಸೇರುತ್ತಿರುವುದು ಗಮನಕ್ಕೆ ಬಂದಿದೆ. ಸೂರ್ಯೋದಯಕ್ಕೂ ಮುನ್ನ ಆಹಾರ ಸೇವಿಸುವ ಪ್ರವೃತ್ತಿ ವಿಶೇಷವಾಗಿ ನಗರ ಪ್ರದೇಶದ ಯುವಜನರಲ್ಲಿ ಹೆಚ್ಚಾಗುತ್ತಿದೆ. ಇದು ಆರೋಗ್ಯದ ದೃಷ್ಟಿಯಿಂದ ಸರಿಯಾದ ಪದ್ಧತಿಯಲ್ಲ. ಆ ಸಮಯದಲ್ಲಿ ಅಮೃತವನ್ನೇ ಸೇವಿಸಿದರೂ ಅದು ದೇಹಕ್ಕೆ ವಿಷದಂತೆ ಪರಿಣಾಮ ಬೀರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಇಂದು ಆಹಾರವನ್ನು ಕ್ಯಾಲೊರಿಗಳ ಆಧಾರದಲ್ಲಿ ಅಳೆಯುವ ಪದ್ಧತಿ ಹೆಚ್ಚಾಗಿದೆ. ಆದರೆ ಸರಿಯಾದ ಸಮಯ ಹಾಗೂ ಕ್ರಮದಲ್ಲಿ ಆಹಾರ ಸೇವಿಸುವ ಅಭ್ಯಾಸ ಬೆಳೆಸಿಕೊಂಡರೆ, ಎಷ್ಟು ಪ್ರಮಾಣದಲ್ಲಿ ತಿನ್ನಬೇಕು ಎಂಬುದನ್ನು ಹೊಟ್ಟೆಯೇ ತಿಳಿಸುತ್ತದೆ ಎಂದರು.

ಆಹಾರವು ಕೇವಲ ಹೊಟ್ಟೆ ತುಂಬಿಸುವ ಸಾಧನವಲ್ಲ. ಅದು ದೇಹ, ಮನಸ್ಸು ಹಾಗೂ ಆರೋಗ್ಯವನ್ನು ನಿರ್ಧರಿಸುವ ಪ್ರಮುಖ ಅಂಶವಾಗಿದೆ. ಜೀರ್ಣವಾಗದೇ ದೇಹದಲ್ಲಿ ಉಳಿಯುವ ಆಹಾರವನ್ನು ಆಯುರ್ವೇದದಲ್ಲಿ ‘ಆಮ’ ಎಂದು ಕರೆಯಲಾಗುತ್ತದೆ. ಇದೇ ಅನೇಕ ರೋಗಗಳಿಗೆ ಮೂಲ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಗಣ್ಯ ವ್ಯಕ್ತಿಗಳನ್ನು ಭೇಟಿಯಾಗುವ ಮೊದಲು ಮೆಟಲ್ ಡಿಟೆಕ್ಟರ್ ಮೂಲಕ ಪರಿಶೀಲನೆ ನಡೆಸಲಾಗುತ್ತದೆ. ಅದೇ ರೀತಿ ನಮ್ಮ ದೇಹ ಎಂಬ ಅಮೂಲ್ಯ ವ್ಯಕ್ತಿಗೆ ಆಹಾರ ನೀಡುವ ಮೊದಲು ಏನನ್ನು ತಿನ್ನುತ್ತಿದ್ದೇವೆ, ಹೇಗೆ ತಿನ್ನುತ್ತಿದ್ದೇವೆ ಹಾಗೂ ಯಾವಾಗ ತಿನ್ನುತ್ತಿದ್ದೇವೆ ಎಂಬುದನ್ನು ಪರಿಶೀಲಿಸಿ ನಂತರವೇ ಆಹಾರ ಸೇವಿಸಬೇಕು ಎಂದು ಶ್ರೀಗಳು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ರಾಮಚಂದ್ರ ಭಟ್ ದಂಪತಿ ಶ್ರೀಪರಿವಾರದ ಪರವಾಗಿ ಭಿಕ್ಷಾಸೇವೆ ಸಮರ್ಪಿಸಿದರು. ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವೇ.ಮೂ. ಸುಬ್ರಾಯ್ ಭಟ್ ಅಗ್ನಿಹೋತ್ರಿ, ವೇ.ಮೂ. ಮಂಜುನಾಥ ಶಾಸ್ತ್ರಿ, ಶ್ರೀಚರಣ ವಿಭಾಗದ ಸಂಯೋಜಕ ರಾಘವೇಂದ್ರ ಮಧ್ಯಸ್ಥ, ಶ್ರೀಗಳ ಆಪ್ತ ಕಾರ್ಯದರ್ಶಿಗಳಾದ ಸುರೇಶ್ ಆಡುಗೋಡಿ, ಮಧು ಜಿ.ಕೆ., ದಿನೇಶ್ ಹೆಗಡೆ, ಗಜಾನನ ಭಟ್, ರಮೇಶ್ ವಿಭೂತಿಮನೆ, ಪ್ರಕಾಶ್ ಹೆಗಡೆ ದಂಪತಿ, ಶಿಕ್ಷಣ ತಜ್ಞ ಡಾ. ಜಿ.ಜಿ. ಹೆಗಡೆ, ಉದ್ಯಮಿ ಶಶಾಂಕ್ ಹೆಗಡೆ ಕವಲಕ್ಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

‘ಅತಿಯಾದ ಸೊಪ್ಪು-ತರಕಾರಿಗಳೂ ಆರೋಗ್ಯಕ್ಕೆ ಹಾನಿಕರ’ : ಮಿತಿ ಮೀರಿದ ಪ್ರಮಾಣದಲ್ಲಿ ಸೊಪ್ಪು ಹಾಗೂ ತರಕಾರಿಗಳನ್ನು ಸೇವಿಸುವುದೂ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹೆಚ್ಚಿನ ಪ್ರಮಾಣದ ಸೊಪ್ಪು-ತರಕಾರಿಗಳ ಸೇವನೆಯು ಕಣ್ಣಿನ ಸಮಸ್ಯೆ, ಮೂಳೆಗಳ ದುರ್ಬಲತೆ ಹಾಗೂ ಮಂದಬುದ್ಧಿಗೆ ಕಾರಣವಾಗಬಹುದು ಎಂದು ಆಯುರ್ವೇದದಲ್ಲಿ ಉಲ್ಲೇಖಿಸಲಾಗಿದೆ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

Jagadguru Shankaracharya Sri Raghaveshwara Bharathi Mahaswamiji of Sri Ramachandrapura Math said that healthy living begins with proper food habits. Speaking at the “Annam Brahma” discourse during Annabrahma Chaturmasya in Gokarna, he emphasized the Ayurvedic principles of Hitabhuk (eat what is beneficial), Mitabhuk (eat in moderation) and Ashakabhuk (avoid excessive consumption of leafy vegetables). He also cautioned against eating before sunrise and announced that over 300 traditional sattvic dishes would be served during the 60-day Chaturmasya programme.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

6 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

14 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

14 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

2 days ago