ಗುಜ್ಜೆ ಕರಿಗೆ ಬೇಕಾಗುವ ಸಾಮಾಗ್ರಿಗಳು : ಗುಜ್ಜೆ – 1 ಕಪ್, ಆಲೂಗಡ್ಡೆ – 1 (ಚಿಕ್ಕದು, ಸಿಪ್ಪೆ ತೆಗೆದು ಸಣ್ಣಗೆ ಕತ್ತರಿಸಿದದ್ದು), ಟೊಮೆಟೊ – 1 (ಚಿಕ್ಕದು, ಕಟ್ ಮಾಡಿದದ್ದು), ಉಪ್ಪು – ರುಚಿಗೆ ತಕ್ಕಷ್ಟು
ರುಬ್ಬಿಕೊಳ್ಳಲು (ಜಾರ್ನಲ್ಲಿ): ಟೊಮೆಟೊ – 2, ಈರುಳ್ಳಿ – 1, ಬೆಳ್ಳುಳ್ಳಿ – 8 ಎಸಳು, ಶುಂಠಿ – 1 ಇಂಚು
ಮಸಾಲಾ ಪುಡಿಗಳು: ಗರಂ ಮಸಾಲ – ½ ಚಮಚ, ಮೆಣಸಿನ ಪುಡಿ – ½ ಚಮಚ, ಜೀರಿಗೆ ಪುಡಿ – 1 ಚಮಚ, ಕೊತ್ತಂಬರಿ ಪುಡಿ – 1 ಚಮಚ
ಮಾಡುವ ವಿಧಾನ: ಕುಕ್ಕರ್ನಲ್ಲಿ ಗುಜ್ಜೆ, ಆಲೂಗಡ್ಡೆ, 1 ಟೊಮೆಟೊ, ಉಪ್ಪು ಹಾಕಿ ಸ್ವಲ್ಪ ನೀರು ಸೇರಿಸಿ ಚೆನ್ನಾಗಿ ಬೇಯಿಸಿಕೊಳ್ಳಿ. ಜಾರ್ನಲ್ಲಿ 2 ಟೊಮೆಟೊ, ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಬಾಣಲೆಗೆ ಎಣ್ಣೆ ಹಾಕಿ, ಜೀರಿಗೆ ಹಾಕಿ ಸಿಡಿದ ಮೇಲೆ ಸಣ್ಣಗೆ ಕತ್ತರಿಸಿದ ಈರುಳ್ಳಿ ಹಾಕಿ ಫ್ರೈ ಮಾಡಿ. ಈಗ ರುಬ್ಬಿದ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕುದಿಸಿ. ಇದಕ್ಕೆ ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಮೆಣಸಿನ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಬೇಯಿಸಿದ ಗುಜ್ಜೆ–ಆಲೂಗಡ್ಡೆ ಮಿಶ್ರಣವನ್ನು ಸೇರಿಸಿ ಮತ್ತೆ ಕುದಿಸಿ. ಬಿಸಿ ಬಿಸಿಯಾದ ದೋಸೆ, ಚಪಾತಿ ಅಥವಾ ಅಕ್ಕಿ ಅನ್ನದ ಜೊತೆ ಸೂಪರ್!…… ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ…
ಹೊಸರುಚಿ | ಮನೆಯಲ್ಲೇ ಮಾಡಿ ‘ಪೇಪರ್ ಅವಲಕ್ಕಿ ಚೂಡಾ’
Advertisement
ನಿಮ್ಮ ಅಭಿಪ್ರಾಯಗಳಿಗೆ…
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…