ಗುಜ್ಜೆ ಕರಿಗೆ ಬೇಕಾಗುವ ಸಾಮಾಗ್ರಿಗಳು : ಗುಜ್ಜೆ – 1 ಕಪ್, ಆಲೂಗಡ್ಡೆ – 1 (ಚಿಕ್ಕದು, ಸಿಪ್ಪೆ ತೆಗೆದು ಸಣ್ಣಗೆ ಕತ್ತರಿಸಿದದ್ದು), ಟೊಮೆಟೊ – 1 (ಚಿಕ್ಕದು, ಕಟ್ ಮಾಡಿದದ್ದು), ಉಪ್ಪು – ರುಚಿಗೆ ತಕ್ಕಷ್ಟು
ರುಬ್ಬಿಕೊಳ್ಳಲು (ಜಾರ್ನಲ್ಲಿ): ಟೊಮೆಟೊ – 2, ಈರುಳ್ಳಿ – 1, ಬೆಳ್ಳುಳ್ಳಿ – 8 ಎಸಳು, ಶುಂಠಿ – 1 ಇಂಚು
ಮಸಾಲಾ ಪುಡಿಗಳು: ಗರಂ ಮಸಾಲ – ½ ಚಮಚ, ಮೆಣಸಿನ ಪುಡಿ – ½ ಚಮಚ, ಜೀರಿಗೆ ಪುಡಿ – 1 ಚಮಚ, ಕೊತ್ತಂಬರಿ ಪುಡಿ – 1 ಚಮಚ
ಮಾಡುವ ವಿಧಾನ: ಕುಕ್ಕರ್ನಲ್ಲಿ ಗುಜ್ಜೆ, ಆಲೂಗಡ್ಡೆ, 1 ಟೊಮೆಟೊ, ಉಪ್ಪು ಹಾಕಿ ಸ್ವಲ್ಪ ನೀರು ಸೇರಿಸಿ ಚೆನ್ನಾಗಿ ಬೇಯಿಸಿಕೊಳ್ಳಿ. ಜಾರ್ನಲ್ಲಿ 2 ಟೊಮೆಟೊ, ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಬಾಣಲೆಗೆ ಎಣ್ಣೆ ಹಾಕಿ, ಜೀರಿಗೆ ಹಾಕಿ ಸಿಡಿದ ಮೇಲೆ ಸಣ್ಣಗೆ ಕತ್ತರಿಸಿದ ಈರುಳ್ಳಿ ಹಾಕಿ ಫ್ರೈ ಮಾಡಿ. ಈಗ ರುಬ್ಬಿದ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕುದಿಸಿ. ಇದಕ್ಕೆ ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಮೆಣಸಿನ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಬೇಯಿಸಿದ ಗುಜ್ಜೆ–ಆಲೂಗಡ್ಡೆ ಮಿಶ್ರಣವನ್ನು ಸೇರಿಸಿ ಮತ್ತೆ ಕುದಿಸಿ. ಬಿಸಿ ಬಿಸಿಯಾದ ದೋಸೆ, ಚಪಾತಿ ಅಥವಾ ಅಕ್ಕಿ ಅನ್ನದ ಜೊತೆ ಸೂಪರ್!…… ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ…
ನಿಮ್ಮ ಅಭಿಪ್ರಾಯಗಳಿಗೆ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…