ಕೇಂದ್ರ ಸರ್ಕಾರಿ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳು ಮತ್ತು ಖಾಸಗಿ ಸಂಸ್ಥೆಗಳು ಜಂಟಿ ಸಹಯೋಗದಲ್ಲಿ ದೇಶಾದ್ಯಂತ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಆಯೋಜಿಸಲಾಗಿದೆ. ಈ ಅಭಿಯಾನದಲ್ಲಿ ಒಟ್ಟಾರೆ 3,410 ತಪಾಸಣೆ ಮತ್ತು ವಿಶೇಷ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಲಕ್ಷಾಂತರ ಮಹಿಳೆಯರು, ಮಕ್ಕಳು ಮತ್ತು ಕುಟುಂಬಗಳು ಸಮಗ್ರ ಆರೋಗ್ಯ ಸೇವೆಗಳ ಪ್ರಯೋಜನ ಪಡೆದುಕೊಳ್ಳಲಿದ್ದಾರೆ.
ಸೆಪ್ಟೆಂಬರ್ 17ರಂದು ಆರಂಭವಾದ ಅಭಿಯಾನದಲ್ಲಿ ಸೆಪ್ಟೆಂಬರ್ 20ರ ವೇಳೆಗೆ 2.83 ಲಕ್ಷಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ನಡೆಸಲಾಗಿದ್ದು, ದೇಶಾದ್ಯಂತ 76 ಲಕ್ಷಕ್ಕೂ ಹೆಚ್ಚು ನಾಗರಿಕರು ಭಾಗಿಯಾದ್ದಾರೆ. ಅಭಿಯಾನದಲ್ಲಿ ಫಲಾನುಭವಿಗಳಿಗೆ ಸುಧಾರಿತ ತಪಾಸಣೆ, ರೋಗನಿರ್ಣಯ, ಸಮಾಲೋಚನೆ ಮತ್ತು ಚಿಕಿತ್ಸಾ ಸೇವೆಗಳನ್ನು ಒದಗಿಸಲಾಗುತ್ತಿದ್ದು, ಆ ಮೂಲಕ ರಾಜ್ಯ ಸರ್ಕಾರಗಳು ಮತ್ತು ಸಮುದಾಯ ಮಟ್ಟದ ಆರೋಗ್ಯ ಕಾರ್ಯಕರ್ತರ ಪ್ರಯತ್ನಗಳಿಗೆ ಪೂರಕವಾಗಿವೆ. ಆಯುಷ್ಮಾನ್ ಆರೋಗ್ಯ ಮಂದಿರಗಳು, ಏಮ್ಸ್, ಇತರ ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಗಳು (ಐ.ಎನ್.ಐಗಳು), ತೃತೀಯ ಆರೈಕೆ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಮತ್ತು ಖಾಸಗಿ ಸಂಸ್ಥೆಗಳು ಸೇರಿದಂತೆ ಎನ್ಎಚ್ಎಂ ಆರೋಗ್ಯ ಶಿಬಿರಗಳ ವ್ಯಾಪಕ ಜಾಲದ ಜೊತೆಗೆ ಈ ರಾಷ್ಟ್ರೀಯ ಅಭಿಯಾನವು ಮುಂಚೂಣಿಯಲ್ಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…