Advertisement
MIRROR FOCUS

ಹಾಸನದಲ್ಲಿ ಹೃದಯಾಘಾತ ಪ್ರಕರಣ | ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ

Share

ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ ಏಮ್ಸ್ ಅಧ್ಯಯನಗಳು ದೃಢಪಡಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ನಡೆಸಿದ ಅಧ್ಯಯನಗಳು ಭಾರತದಲ್ಲಿ ಕೋವಿಡ್-19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸಿದೆ.  ಇದೇ ವೇಳೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಸಾವು ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ.  ಚಿಕ್ಕಬಳ್ಳಾಪುರ ತಾಲ್ಲೂಕು ನಂದಿ ಗ್ರಾಮದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮಿತಿ ವರದಿ ನೀಡಿದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದೇ ವೇಳೆ  ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ ಏಮ್ಸ್ ಅಧ್ಯಯನಗಳು ದೃಢಪಡಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ.ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ 18 ರಿಂದ 45 ವರ್ಷ ವಯಸ್ಸಿನ ಯುವಕರ ಬಗ್ಗೆ ವಿಭಿನ್ನ ಸಂಶೋಧನಾ ವಿಧಾನಗಳನ್ನು ಬಳಸಿಕೊಂಡು ಎರಡು ಪೂರಕ ಅಧ್ಯಯನಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಪ್ರಾಮಾಣಿಕ ಸಾಕ್ಷ್ಯವಿಲ್ಲದೆ ಲಸಿಕೆಗಳ ಬಗ್ಗೆ ಹರಡುವ ಊಹಾಪೋಹಗಳು ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಇದು ಕೋವಿಡ್ ಸಂಕಟದ ಸಮಯದಲ್ಲಿ ಲಕ್ಷಾಂತರ ಜೀವಗಳನ್ನು ರಕ್ಷಿಸಿದ ಲಸಿಕೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿಯಾಗಿದೆ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 hour ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 hour ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago