ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ ಏಮ್ಸ್ ಅಧ್ಯಯನಗಳು ದೃಢಪಡಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ನಡೆಸಿದ ಅಧ್ಯಯನಗಳು ಭಾರತದಲ್ಲಿ ಕೋವಿಡ್-19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸಿದೆ. ಇದೇ ವೇಳೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಸಾವು ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕು ನಂದಿ ಗ್ರಾಮದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮಿತಿ ವರದಿ ನೀಡಿದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ ಏಮ್ಸ್ ಅಧ್ಯಯನಗಳು ದೃಢಪಡಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ.ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ 18 ರಿಂದ 45 ವರ್ಷ ವಯಸ್ಸಿನ ಯುವಕರ ಬಗ್ಗೆ ವಿಭಿನ್ನ ಸಂಶೋಧನಾ ವಿಧಾನಗಳನ್ನು ಬಳಸಿಕೊಂಡು ಎರಡು ಪೂರಕ ಅಧ್ಯಯನಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಪ್ರಾಮಾಣಿಕ ಸಾಕ್ಷ್ಯವಿಲ್ಲದೆ ಲಸಿಕೆಗಳ ಬಗ್ಗೆ ಹರಡುವ ಊಹಾಪೋಹಗಳು ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಇದು ಕೋವಿಡ್ ಸಂಕಟದ ಸಮಯದಲ್ಲಿ ಲಕ್ಷಾಂತರ ಜೀವಗಳನ್ನು ರಕ್ಷಿಸಿದ ಲಸಿಕೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿಯಾಗಿದೆ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…