Advertisement
MIRROR FOCUS

ಹಾಸನದಲ್ಲಿ ಹೃದಯಾಘಾತ ಪ್ರಕರಣ | ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ

Share

ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ ಏಮ್ಸ್ ಅಧ್ಯಯನಗಳು ದೃಢಪಡಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ನಡೆಸಿದ ಅಧ್ಯಯನಗಳು ಭಾರತದಲ್ಲಿ ಕೋವಿಡ್-19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸಿದೆ.  ಇದೇ ವೇಳೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಸಾವು ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ.  ಚಿಕ್ಕಬಳ್ಳಾಪುರ ತಾಲ್ಲೂಕು ನಂದಿ ಗ್ರಾಮದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮಿತಿ ವರದಿ ನೀಡಿದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದೇ ವೇಳೆ  ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ ಏಮ್ಸ್ ಅಧ್ಯಯನಗಳು ದೃಢಪಡಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ.ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ 18 ರಿಂದ 45 ವರ್ಷ ವಯಸ್ಸಿನ ಯುವಕರ ಬಗ್ಗೆ ವಿಭಿನ್ನ ಸಂಶೋಧನಾ ವಿಧಾನಗಳನ್ನು ಬಳಸಿಕೊಂಡು ಎರಡು ಪೂರಕ ಅಧ್ಯಯನಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಪ್ರಾಮಾಣಿಕ ಸಾಕ್ಷ್ಯವಿಲ್ಲದೆ ಲಸಿಕೆಗಳ ಬಗ್ಗೆ ಹರಡುವ ಊಹಾಪೋಹಗಳು ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಇದು ಕೋವಿಡ್ ಸಂಕಟದ ಸಮಯದಲ್ಲಿ ಲಕ್ಷಾಂತರ ಜೀವಗಳನ್ನು ರಕ್ಷಿಸಿದ ಲಸಿಕೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿಯಾಗಿದೆ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

7 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

15 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

19 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago