MIRROR FOCUS

ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | 10 ದಿನದೊಳಗೆ ಅಧ್ಯಯನ ವರದಿ ಸಲ್ಲಿಸುವಂತೆ ಸಿಎಂ ಸೂಚನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಒಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯಲ್ಲಿ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ರಾಜ್ಯದಲ್ಲಿ ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ.  ಜನರ ಆರೋಗ್ಯ ರಕ್ಷಣೆಗಾಗಿ ಒಂದು ಸರ್ಕಾರವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಸಾರ್ವಜನಿಕರು ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರದೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2025 | ನಾಳೆಯಿಂದ ಮಳೆ ಕಡಿಮೆ ನಿರೀಕ್ಷೆ | ಹಲವು ದಿನಗಳ ಬಳಿಕ ರೈತರಿಗೆ ಆಶಾದಾಯಕ ಹವಾಮಾನ |

ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ…

3 minutes ago

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ …

6 hours ago

ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…

6 hours ago

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …

6 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ

ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…

6 hours ago

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…

14 hours ago