Advertisement
MIRROR FOCUS

ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | 10 ದಿನದೊಳಗೆ ಅಧ್ಯಯನ ವರದಿ ಸಲ್ಲಿಸುವಂತೆ ಸಿಎಂ ಸೂಚನೆ

Share

ಕಳೆದ ಒಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯಲ್ಲಿ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ.  ಜನರ ಆರೋಗ್ಯ ರಕ್ಷಣೆಗಾಗಿ ಒಂದು ಸರ್ಕಾರವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಸಾರ್ವಜನಿಕರು ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರದೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

20 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

20 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

22 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

22 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago