ಕಳೆದ ಒಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯಲ್ಲಿ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ. ಜನರ ಆರೋಗ್ಯ ರಕ್ಷಣೆಗಾಗಿ ಒಂದು ಸರ್ಕಾರವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಸಾರ್ವಜನಿಕರು ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರದೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…
ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…