Advertisement
MIRROR FOCUS

ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | 10 ದಿನದೊಳಗೆ ಅಧ್ಯಯನ ವರದಿ ಸಲ್ಲಿಸುವಂತೆ ಸಿಎಂ ಸೂಚನೆ

Share

ಕಳೆದ ಒಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯಲ್ಲಿ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ.  ಜನರ ಆರೋಗ್ಯ ರಕ್ಷಣೆಗಾಗಿ ಒಂದು ಸರ್ಕಾರವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಸಾರ್ವಜನಿಕರು ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರದೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

43 minutes ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

10 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

10 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

12 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

15 hours ago