ಆಗಷ್ಟೇ ಹುಟ್ಟಿದ ಮಗುವಿಗೆ ಹೃದಯ ಸಮಸ್ಯೆ ಇರುವುದನ್ನು ಗಮನಿಸಿ ತಕ್ಷಣ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂಬ ಕಾರಣಕ್ಕೆ ಜೀರೋ ಟ್ರಾಫಿಕ್ ನಲ್ಲಿ ಶಿವಮೊಗ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಟ್ಟಿರುವ ಘಟನೆ ನಡೆದಿದೆ.
ಅಶ್ವಿನಿ ಎಂಬವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರದಂದು ಮಗುವಿಗೆ ಜನ್ಮ ನೀಡಿದ್ದು, ಆದರೆ ಜನಿಸಿದ ಮಗುವಿನಲ್ಲಿ ಹೃದಯ ಸಮಸ್ಯೆ ಇರುವುದನ್ನು ವೈದ್ಯರು ಗಮನಿಸಿದ್ದರು.ಕೂಡಲೇ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ ತಜ್ಞ ವೈದ್ಯರನ್ನು ಸಂಪರ್ಕಿಸಿದ್ದು, ತಕ್ಷಣದ ಶಸ್ತ್ರಚಿಕಿತ್ಸೆ ಅಗತ್ಯವಿರುವ ಕಾರಣ ಬೆಂಗಳೂರಿಗೆ ಕರೆದುಕೊಂಡು ಬರುವಂತೆ ಸೂಚಿಸಿದ್ದರು.
ಮಗುವಿನ ಪೋಷಕರಿಗೆ ವಿಷಯ ತಿಳಿಸಿದ ನಂತರ ಅವರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಜೀರೋ ಟ್ರಾಫಿಕ್ ವ್ಯವಸ್ಥೆಗೆ ಮನವಿ ಮಾಡಿದ್ದರು. ಅದರಂತೆ ಜೀರೋ ಟ್ರಾಫಿಕ್ ನಲ್ಲಿ ಮಗುವನ್ನು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…