Advertisement
Opinion

ಹೃದಯಘಾತ ದಿಢೀರ್ ಎಂದು ಬರುವುದಿಲ್ಲ….!! : ಮುನ್ನೆಚ್ಚರಿಕೆ ಬಹಳ ಮುಖ್ಯ |

Share

ವ್ಯಕ್ತಿಗೆ 12 ಗಂಟೆ ಅಥವಾ 24 ಗಂಟೆ ಮುಂಚಿತವಾಗಿ ಮುನ್ಸೂಚನೆ ಕೊಡುತ್ತೆ. ಹೃದಯಾಘಾತದ (Heart Attack) ಲಕ್ಷಣಗಳನ್ನು ನಿರ್ಲಕ್ಷಿಸಬಾರದು. ಗ್ಯಾಸ್ಟ್ರಿಕ್‌ನಿಂದ(Gastric) ಎದೆನೋವು(Heart pain) ಎಂದು ಭಾವಿಸಿ ಮುಂದೂಡಬಾರದು. ಎಷ್ಟೋ ಜನಕ್ಕೆ ಇದು ಹೃದಯಾಘಾತದ ಲಕ್ಷಣ, ಮುನ್ಸೂಚನೆ ಎಂದು ಅರಿವಾಗುವುದಿಲ್ಲ. ಬೇರೆಯವರಿಗೂ ಮನೆಯವರಿಗೂ ಹೇಳುವುದಿಲ್ಲ. ವಿಪರೀತ ಬೆವರುವುದು(Excessive sweating), ಸುಸ್ತಾಗುವುದು(fatigue), ಯಾವುದಾದರು ರಟ್ಟೆ ವಿಪರೀತ ನೋಯುವುದು, ಎದೆ ಕಿವುಚಿದಂತೆ(severe chest pain) ಆಗುವುದು ನಿರ್ಲಕ್ಷಿಸಬಾರದು. ಇಂತಹ ಲಕ್ಷಣಗಳು ಹೆಚ್ಚಾಗಿ ನಡಿಗೆ ಮಾಡುವಾಗಲೂ, ಮೆಟ್ಟಿಲು ಹತ್ತುವಾಗಲೂ ಕಾಣಿಸುತ್ತವೆ, ತಕ್ಷಣ ಆಸ್ಪತ್ರೆಯನ್ನು ಸೇರಬೇಕು.

ಗೊಲ್ಡನ್ ಅವರ್ :  ಹೃದಯಾಘಾತವಾದ ಮೊದಲ ಅರ್ಧ ಗಂಟೆಯ ಸಮಯ ವ್ಯರ್ಥ ಮಾಡಬಾರದು. 40 ವರ್ಷದ ನಂತರ ಪ್ರತಿಯೊಬ್ಬರು ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.. ವಯಸ್ಸಾದವರು, ಈಗಾಗಲೇ ನಿತ್ಯ ಚಿಕಿತ್ಸೆಯಲ್ಲಿ ಇರುವವರು ಹೊರಗೆ ಹೋಗುವಾಗ ಯಾವಾಗಲು ಸಾಕಷ್ಟು ಹಣ, ಜಾರ್ಜ್ ಮಾಡಿದ ಮೊಬೈಲ್(ಯಾವುದಾದರು), ಎಟಿಎಂ ಕಾರ್ಡ್, ಐಡಿ ಕಾರ್ಡ್ ಮತ್ತು ನೀರಿನ ಬಾಟಲಿ (200 ಎಂ.ಎಲ್. ಆದರೂ ಪರವಾಗಿಲ್ಲ) ಜೊತೆಯಲ್ಲಿ ತೆಗೆದುಕೊಂಡು ಹೋಗವುದು ಶ್ರೇಯಕರ ಸಾವಿಗೆ ಹೆದರಬಾರದು, ಸಾವು ಹತ್ತಿರ ಸುಳಿಯದಂತೆ ನೋಡಿಕೊಳ್ಳಬೇಕು.

ಯೋಗ ಮಾಡುವುದರಿಂದ, ನಿತ್ಯ ನಡಿಗೆ ಮಾಡುವುದರಿಂದ, ಮಾಂಸಾಹಾರ, ಮೊಟ್ಟೆ ತಿನ್ನದೆ ಶುದ್ಧ ಶಾಖಾಹಾರಿ ಯಾಗಿರುವುದರಿಂದ, ಬೊಜ್ಜು ದಪ್ಪ ಇಲ್ಲದೆ ಇರುವುದರಿಂದ, ತೆಳ್ಳಗೆ ಇರುವುದರಿಂದ, ಚಿಕ್ಕ ವಯಸ್ಸು ಇರುವುದರಿಂದ ಹೃದಯಾಘಾತ ಆಗುವುದಿಲ್ಲ ಎಂಬುದು ತಪ್ಪು ತಿಳುವಳಿಕೆ. ಅನುವಂಶಿಕ ಕಾರಣಗಳು ಜೊತೆಗೆ ಇತರೆ ಕಾರಣಗಳು ಇರುತ್ತವೆ. ಪ್ರತಿಯೊಬ್ಬರಿಗೂ ಹೃದಯದಲ್ಲಿ ರಕ್ತದ ಹೆಪ್ಪು(ಕ್ಲಾಟ್) ಸ್ವಲ್ಪವಾದರೂ ಇದ್ದೇ ಇರುತ್ತದೆ, ನಿಧಾನವಾಗಿ ಹೆಚ್ಚಾಗುತ್ತಿರುತ್ತದೆ. ನಡಿಗೆ, ವ್ಯಾಯಾಮ, ಸದಾ ಚಟುವಟಿಕೆ, ಸರಿಯಾದ ಆಹಾರ ಕ್ರಮ, ಸರಳ ಜೀವನ ಇಲ್ಲವಾದಲ್ಲಿ ಬೇಗ ಹೆಪ್ಪುಗಟ್ಟುವುದು (ಕ್ಲಾಕ್) ಹೆಚ್ಚಾಗುತ್ತಿರುತ್ತದೆ, ಆದರೆ ಮೇಲಿನ ಕಾರ್ಯ ಚಟುವಟಿಕೆಗಳನ್ನು ಪಾಲಿಸಿದರೆ ನಿಯಂತ್ರಣದಲ್ಲಿರುತ್ತದೆ.

ಈ ಹೃದಯದ ಖಾಯಿಲೆ ಇ.ಸಿ.ಜಿ ಮಾಡಿದಾಗ ಗೊತ್ತಾಗುತ್ತದೆ. ಆಶ್ಚರ್ಯವೆಂದರೆ ಎಷ್ಟೋ ಜನಕ್ಕೆ ಇ.ಸಿ.ಜಿ ಮತ್ತು ಎಕೋಗ್ರಾಮ್ ಮಾಡಿದಾಗ ಹೃದಯದ ಖಾಯಿಲೆ ತಿಳಿಯುವುದಿಲ್ಲ. ಆದರೆ ಟಿ.ಎಂ.ಟಿ ಪರೀಕ್ಷೆ ಮಾಡಿದಾಗ ಖಂಡಿತ ಸ್ವಲ್ಲ ಪ್ರಮಾಣವಾದರು ಪತ್ತೆ ಹಚ್ಚುತ್ತಾರೆ, ಆಗ ಅಂಜಿಯೋಗ್ರಾಮ್ ಮಾಡಿಸಬೇಕಾಗುತ್ತದೆ. ಅಂಜಿಯೋಗ್ರಾಮ್ ಪರೀಕ್ಷೆಯಲ್ಲಿ ಅತ್ಯಂತ ನಿಖರವಾಗಿ ಸ್ಪಷ್ಟವಾಗಿ ಕ್ಲಾಟ್ ಪ್ರಮಾಣ ಗೊತ್ತಾಗುತ್ತದೆ. ಕ್ಲಾಟ್‌ಗಳು ಒಂದಕ್ಕಿಂತ ಹೆಚ್ಚು ಕೂಡ ಮೇಲ್ಪಟ್ಟು ಕೂಡ ಪತ್ತೆಯಾಗಿರುವುದು. ನಂತರ ಸೂಕ್ತ ಚಿಕೆತ್ಸೆ ಪಡೆದುಕೊಂಡು ಆರಾಮವಾಗಿ ಆರೋಗ್ಯವಾಗಿರಬಹುದು. ಏನು ಹೆದರುವ ಅವಶ್ಯಕತೆ ಇಲ್ಲ. ಸದಾ ಚಟುವಟಿಕೆಯಿಂದ ಇದ್ದರೆ ತಾನು ಹೃದ್ರೋಗಿ ಎಂದು ಅನಿಸುವುದೇ ಇಲ್ಲ, ಎಲ್ಲರಂತೆ ಸುಖ ಜೀವನ ನಡೆಸಬಹುದು.

ಬೇರೆ ಎಲ್ಲ ಖಾಯಿಲೆಗಳಿಗೆ ಚಿಕಿತ್ಸೆ ಹೊಂದಲು ಸಮಯವಿರುತ್ತದೆ. ಆದರೆ, ಹೃದಯ ಖಾಯಿಲೆ ಹಾಗಲ್ಲ, ಕೆಲವೊಮ್ಮೆ ಒಂದು ನಿಮಿಷ ಕೂಡ ಸಮಯವನ್ನೇ ನೀಡುವುದಿಲ್ಲ, ತಕ್ಷಣ ಸಾವಿಗೆ ನೂಕಿ ಬಿಡುತ್ತದೆ. ಬದುಕಲು ಅದೃಷ್ಟ ಬೇಕು. ವೈದ್ಯರು ಹೇಳುವುದು ಒಂದೇ, ಉತ್ತಮ ಆಹಾರ ಕ್ರಮ ಅನುಸರಿಸಿ.. ಸದಾ ಚಟುವಟಿಕೆಯಿಂದ ಇರಿ. ಸರಳ ಜೀವನ ನಡೆಸಿ.. ನಿಮ್ಮ ಕುಟುಂಬದ ಹಾಗು ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ, ಹೆಂಡತಿ ಮಕ್ಕಳನ್ನು, ನಿಮ್ಮ ಕುಟುಂಬವನ್ನು ನಡು ನೀರಿನಲ್ಲಿ ಕೈ ಬಿಡಬೇಡಿ, ಅವರಿಗಾಗಿ ಬಾಳಿ ಬದುಕಬೇಕು.

Advertisement

Source : Digital Media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

9 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

10 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

20 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

20 hours ago