ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ ಅಲೆಯ ಪರಿಸ್ಥಿತಿಗಳಿಗೆ ಸಾರ್ವಜನಿಕರು ಆರೋಗ್ಯ ಮತ್ತು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ತೆಲಂಗಾಣ ಸರ್ಕಾರ ಎಲ್ಲಾ ಸಂಬಂಧಿತ ಇಲಾಖೆಗಳಿಗೆ ಸೂಚಿಸಿದೆ.
ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಅವರು 12 ಪ್ರಮುಖ ಇಲಾಖೆಗಳ ಅಧಿಕಾರಿಗಳೊಂದಿಗೆ ನೆಡೆಸಿದ ಸಭೆಯಲ್ಲಿ ಈ ನಿರ್ದೇಶನಗಳನ್ನು ನೀಡಿದರು. ಜೂನ್ ವರೆಗೆ ತೆಲಂಗಾಣದಲ್ಲಿ ಅತಿಯಾದ ಶಾಖ ಮತ್ತು ದೀರ್ಘಕಾಲದ ಅಧಿಕ ತಾಪಮಾನವನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದ ಹಿನ್ನೆಲೆಯಲ್ಲಿ ಸಭೆಯನ್ನು ಕರೆಯಲಾಯಿತು. ತೆಲಂಗಾಣ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ, ಹವಾಮಾನ ಇಲಾಖೆಯ ಸಹಯೋಗದೊಂದಿಗೆ, ತೆಲಂಗಾಣ ರಾಜ್ಯದ ಉಷ್ಣ ಅಲೆಯ ಸಂದರ್ಭ ಸುರಕ್ಷತಾ ಕ್ರಮಗಳ ಬಗ್ಗೆ ಕ್ರಿಯಾ ಯೋಜನೆ – 2025 ಅನ್ನು ಸಿದ್ಧಪಡಿಸಿದೆ. ರಾಜ್ಯದ 612 ಮಂಡಲಗಳಲ್ಲಿ 588 ಮಂಡಲಗಳನ್ನು ಅಧಿಕೃತವಾಗಿ ಶಾಖದ ಅಲೆ ಪೀಡಿತ ಮಂಡಲಗಳೆಂದು ವರ್ಗೀಕರಿಸಲಾಗಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…