Advertisement
MIRROR FOCUS

Karnataka Weather | ದೇಶದಲ್ಲಿ ಉಷ್ಣ ಮಾರುತದ ಆತಂಕ | ರಾಜ್ಯದಲ್ಲಿ ಪರಿಣಾಮ ಏನು ? ಈಗ ಹೇಗಿದೆ ಉಷ್ಣ ಮಾರುತ ಪ್ರಭಾವ |

Share

ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ 2024 ಮಾರ್ಚ್ ನಿಂದ ಮೇ ತಿಂಗಳ ಕೊನೆಯ ತನಕ ಭಾರತದ ಹೆಚ್ಚಿನ ಭಾಗಗಳಲ್ಲಿ (ಮಧ್ಯ ಭಾರತ, ದಕ್ಷಿಣ ಭಾರತದ ಉತ್ತರ ಕರ್ನಾಟಕ, ಆಂಧ್ರಾ ತನಕ) ಉಷ್ಣ ಮಾರುತ ಬೀಸುವ ಆತಂಕ ಇದೆ. ಸದ್ಯ ಉಷ್ಣ ಮಾರುತದ ಪ್ರಭಾವ ತಗ್ಗಿದೆ. 

ಕರ್ನಾಟಕದಲ್ಲಿ ಉಷ್ಣ ಮಾರುತ ಪರಿಣಾಮ : ಉತ್ತರ ಕರ್ನಾಟಕ ಹೆಚ್ಚಿನ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಉಷ್ಣ ಮಾರುತ ಬೀಸುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಜೊತೆಗೆ ಎಲ್ನಿನೋ ಪ್ರಭಾವ ಕುಸಿತಗೊಳ್ಳುತ್ತಿದ್ದರೂ ಸಂಪೂರ್ಣ ಶಿಥಿಲಗೊಂಡಿಲ್ಲ. ಉತ್ತರದ ಕಡೆಯಿಂದ ಉಷ್ಣ ಮಾರುತಗಳು ಆರಂಭವಾದರೆ ಶುಷ್ಕ ಹವೆ ಮುಂದುವರಿಯಬಹುದು. ಮಾರ್ಚ್ ತಿಂಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುವ ಲಕ್ಷಣ ಇದೆ. ವರದಿಯಂತೆ ಪೆಸಿಫಿಕ್ ಸಾಗರ ಹಾಗೂ ಹಿಂದೂಮಹಾಸಾಗರದ ಮೇಲ್ಮೈ ಉಷ್ಣತೆ ಈಗಾಗಲೇ ಸಾಮಾನ್ಯಕ್ಕಿಂತ ಹೆಚ್ಚಿದೆ.ಹಾಗಾಗಿ ಉಷ್ಣ ಮಾರುತದ ಜೊತೆಗೆ ಅರಬ್ಬಿ ಸಮುದ್ರ ಅಥವಾ ಬಂಗಾಳಕೊಲ್ಲಿಯಲ್ಲಿಯ ಮೂಲಕ ಗಾಳಿ ಭೂಮಿಗೆ ಬೀಸಲು ಆರಂಭವಾದರೆ ಮಳೆಯ ಸಾಧ್ಯತೆ ಇರಬಹುದು.

ಹವಾಮಾನ ಇಲಾಖೆಯ ವಿಶ್ಲೇಷಣೆ
ಕಳೆದ ವರ್ಷ ಎಲ್ ನಿನೋ ಪ್ರಭಾವವು ಮುಂಗಾರು ಮೇಲೆ ಪರಿಣಾಮ ಬೀರಿ ರಾಜ್ಯದಲ್ಲಿ ಮಳೆ ಕೊರತೆಯಾಗಿತ್ತು. ಆದರೆ, ಜಾಗತಿಕ ನಿಯಂತ್ರಕ ಸೂಚ್ಯಂಕದ ಪ್ರಕಾರ ಕಳೆದ ಫೆಬ್ರವರಿಯಿಂದ ಎಲ್ ನಿನೋ ಮಧ್ಯಮ ಹಂತಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಉತ್ತಮ ಮಳೆ ಬೀಳುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ವಿಜ್ಞಾನಿ ಎ.ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಫೆಸಿಫಿಕ್ ಸಮುದ್ರದ ಪಶ್ಚಿಮ ಭಾಗದಲ್ಲಿ ನೀರಿನ ಉಷ್ಣಾಂಶ ವಾಡಿಕೆಗಿಂತ ಹೆಚ್ಚು ಇದ್ದರೆ ಲಾ-ನಿನಾ ಎಂದು ಕರೆಯಲಾಗುತ್ತಿದ ಎಲ್ ನಿನೋ ಮತ್ತು ಲಾ-ನಿನಾ ಪರಿಸ್ಥಿತಿ ಮಳೆ ಮೇಲೆ ಪರಿಣಾಮ ಬೀರಲಿದೆ. ಈ ವರ್ಷ ಇವೆರಡೂ ಸಾಧಾರಣ ಮಟ್ಟದಲ್ಲಿ ಇರುವುದರಿಂದ ಮುಂಗಾರು, ಹಿಂಗಾರಿನಲ್ಲಿ ಉತ್ತಮ ವರ್ಷಧಾರೆಯಾಗಲಿದೆ.ಏಪ್ರಿಲ್ ಮೊದಲ ವಾರದಿಂದ ಕೆಲವೆಡೆ ವರ್ಷಧಾರೆಯಾಗಲಿದೆ ಎಂದು ಮಾಹಿತಿ ನೀಡಿದರು.

From March to the end of May, there is an heat wave blowing in most parts of India. What can be the effect in the Karnataka state?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

3 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

13 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

18 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

18 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

18 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

18 hours ago