Advertisement
MIRROR FOCUS

Karnataka Weather | ದೇಶದಲ್ಲಿ ಉಷ್ಣ ಮಾರುತದ ಆತಂಕ | ರಾಜ್ಯದಲ್ಲಿ ಪರಿಣಾಮ ಏನು ? ಈಗ ಹೇಗಿದೆ ಉಷ್ಣ ಮಾರುತ ಪ್ರಭಾವ |

Share

ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ 2024 ಮಾರ್ಚ್ ನಿಂದ ಮೇ ತಿಂಗಳ ಕೊನೆಯ ತನಕ ಭಾರತದ ಹೆಚ್ಚಿನ ಭಾಗಗಳಲ್ಲಿ (ಮಧ್ಯ ಭಾರತ, ದಕ್ಷಿಣ ಭಾರತದ ಉತ್ತರ ಕರ್ನಾಟಕ, ಆಂಧ್ರಾ ತನಕ) ಉಷ್ಣ ಮಾರುತ ಬೀಸುವ ಆತಂಕ ಇದೆ. ಸದ್ಯ ಉಷ್ಣ ಮಾರುತದ ಪ್ರಭಾವ ತಗ್ಗಿದೆ. 

ಕರ್ನಾಟಕದಲ್ಲಿ ಉಷ್ಣ ಮಾರುತ ಪರಿಣಾಮ : ಉತ್ತರ ಕರ್ನಾಟಕ ಹೆಚ್ಚಿನ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಉಷ್ಣ ಮಾರುತ ಬೀಸುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಜೊತೆಗೆ ಎಲ್ನಿನೋ ಪ್ರಭಾವ ಕುಸಿತಗೊಳ್ಳುತ್ತಿದ್ದರೂ ಸಂಪೂರ್ಣ ಶಿಥಿಲಗೊಂಡಿಲ್ಲ. ಉತ್ತರದ ಕಡೆಯಿಂದ ಉಷ್ಣ ಮಾರುತಗಳು ಆರಂಭವಾದರೆ ಶುಷ್ಕ ಹವೆ ಮುಂದುವರಿಯಬಹುದು. ಮಾರ್ಚ್ ತಿಂಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುವ ಲಕ್ಷಣ ಇದೆ. ವರದಿಯಂತೆ ಪೆಸಿಫಿಕ್ ಸಾಗರ ಹಾಗೂ ಹಿಂದೂಮಹಾಸಾಗರದ ಮೇಲ್ಮೈ ಉಷ್ಣತೆ ಈಗಾಗಲೇ ಸಾಮಾನ್ಯಕ್ಕಿಂತ ಹೆಚ್ಚಿದೆ.ಹಾಗಾಗಿ ಉಷ್ಣ ಮಾರುತದ ಜೊತೆಗೆ ಅರಬ್ಬಿ ಸಮುದ್ರ ಅಥವಾ ಬಂಗಾಳಕೊಲ್ಲಿಯಲ್ಲಿಯ ಮೂಲಕ ಗಾಳಿ ಭೂಮಿಗೆ ಬೀಸಲು ಆರಂಭವಾದರೆ ಮಳೆಯ ಸಾಧ್ಯತೆ ಇರಬಹುದು.

ಹವಾಮಾನ ಇಲಾಖೆಯ ವಿಶ್ಲೇಷಣೆ
ಕಳೆದ ವರ್ಷ ಎಲ್ ನಿನೋ ಪ್ರಭಾವವು ಮುಂಗಾರು ಮೇಲೆ ಪರಿಣಾಮ ಬೀರಿ ರಾಜ್ಯದಲ್ಲಿ ಮಳೆ ಕೊರತೆಯಾಗಿತ್ತು. ಆದರೆ, ಜಾಗತಿಕ ನಿಯಂತ್ರಕ ಸೂಚ್ಯಂಕದ ಪ್ರಕಾರ ಕಳೆದ ಫೆಬ್ರವರಿಯಿಂದ ಎಲ್ ನಿನೋ ಮಧ್ಯಮ ಹಂತಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಉತ್ತಮ ಮಳೆ ಬೀಳುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ವಿಜ್ಞಾನಿ ಎ.ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಫೆಸಿಫಿಕ್ ಸಮುದ್ರದ ಪಶ್ಚಿಮ ಭಾಗದಲ್ಲಿ ನೀರಿನ ಉಷ್ಣಾಂಶ ವಾಡಿಕೆಗಿಂತ ಹೆಚ್ಚು ಇದ್ದರೆ ಲಾ-ನಿನಾ ಎಂದು ಕರೆಯಲಾಗುತ್ತಿದ ಎಲ್ ನಿನೋ ಮತ್ತು ಲಾ-ನಿನಾ ಪರಿಸ್ಥಿತಿ ಮಳೆ ಮೇಲೆ ಪರಿಣಾಮ ಬೀರಲಿದೆ. ಈ ವರ್ಷ ಇವೆರಡೂ ಸಾಧಾರಣ ಮಟ್ಟದಲ್ಲಿ ಇರುವುದರಿಂದ ಮುಂಗಾರು, ಹಿಂಗಾರಿನಲ್ಲಿ ಉತ್ತಮ ವರ್ಷಧಾರೆಯಾಗಲಿದೆ.ಏಪ್ರಿಲ್ ಮೊದಲ ವಾರದಿಂದ ಕೆಲವೆಡೆ ವರ್ಷಧಾರೆಯಾಗಲಿದೆ ಎಂದು ಮಾಹಿತಿ ನೀಡಿದರು.

From March to the end of May, there is an heat wave blowing in most parts of India. What can be the effect in the Karnataka state?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

22 minutes ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

1 hour ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

4 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

8 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

8 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

19 hours ago