MIRROR FOCUS

Karnataka Weather | ದೇಶದಲ್ಲಿ ಉಷ್ಣ ಮಾರುತದ ಆತಂಕ | ರಾಜ್ಯದಲ್ಲಿ ಪರಿಣಾಮ ಏನು ? ಈಗ ಹೇಗಿದೆ ಉಷ್ಣ ಮಾರುತ ಪ್ರಭಾವ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ 2024 ಮಾರ್ಚ್ ನಿಂದ ಮೇ ತಿಂಗಳ ಕೊನೆಯ ತನಕ ಭಾರತದ ಹೆಚ್ಚಿನ ಭಾಗಗಳಲ್ಲಿ (ಮಧ್ಯ ಭಾರತ, ದಕ್ಷಿಣ ಭಾರತದ ಉತ್ತರ ಕರ್ನಾಟಕ, ಆಂಧ್ರಾ ತನಕ) ಉಷ್ಣ ಮಾರುತ ಬೀಸುವ ಆತಂಕ ಇದೆ. ಸದ್ಯ ಉಷ್ಣ ಮಾರುತದ ಪ್ರಭಾವ ತಗ್ಗಿದೆ. 

Advertisement

ಕರ್ನಾಟಕದಲ್ಲಿ ಉಷ್ಣ ಮಾರುತ ಪರಿಣಾಮ : ಉತ್ತರ ಕರ್ನಾಟಕ ಹೆಚ್ಚಿನ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಉಷ್ಣ ಮಾರುತ ಬೀಸುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಜೊತೆಗೆ ಎಲ್ನಿನೋ ಪ್ರಭಾವ ಕುಸಿತಗೊಳ್ಳುತ್ತಿದ್ದರೂ ಸಂಪೂರ್ಣ ಶಿಥಿಲಗೊಂಡಿಲ್ಲ. ಉತ್ತರದ ಕಡೆಯಿಂದ ಉಷ್ಣ ಮಾರುತಗಳು ಆರಂಭವಾದರೆ ಶುಷ್ಕ ಹವೆ ಮುಂದುವರಿಯಬಹುದು. ಮಾರ್ಚ್ ತಿಂಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುವ ಲಕ್ಷಣ ಇದೆ. ವರದಿಯಂತೆ ಪೆಸಿಫಿಕ್ ಸಾಗರ ಹಾಗೂ ಹಿಂದೂಮಹಾಸಾಗರದ ಮೇಲ್ಮೈ ಉಷ್ಣತೆ ಈಗಾಗಲೇ ಸಾಮಾನ್ಯಕ್ಕಿಂತ ಹೆಚ್ಚಿದೆ.ಹಾಗಾಗಿ ಉಷ್ಣ ಮಾರುತದ ಜೊತೆಗೆ ಅರಬ್ಬಿ ಸಮುದ್ರ ಅಥವಾ ಬಂಗಾಳಕೊಲ್ಲಿಯಲ್ಲಿಯ ಮೂಲಕ ಗಾಳಿ ಭೂಮಿಗೆ ಬೀಸಲು ಆರಂಭವಾದರೆ ಮಳೆಯ ಸಾಧ್ಯತೆ ಇರಬಹುದು.

ಹವಾಮಾನ ಇಲಾಖೆಯ ವಿಶ್ಲೇಷಣೆ
ಕಳೆದ ವರ್ಷ ಎಲ್ ನಿನೋ ಪ್ರಭಾವವು ಮುಂಗಾರು ಮೇಲೆ ಪರಿಣಾಮ ಬೀರಿ ರಾಜ್ಯದಲ್ಲಿ ಮಳೆ ಕೊರತೆಯಾಗಿತ್ತು. ಆದರೆ, ಜಾಗತಿಕ ನಿಯಂತ್ರಕ ಸೂಚ್ಯಂಕದ ಪ್ರಕಾರ ಕಳೆದ ಫೆಬ್ರವರಿಯಿಂದ ಎಲ್ ನಿನೋ ಮಧ್ಯಮ ಹಂತಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಉತ್ತಮ ಮಳೆ ಬೀಳುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ವಿಜ್ಞಾನಿ ಎ.ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಫೆಸಿಫಿಕ್ ಸಮುದ್ರದ ಪಶ್ಚಿಮ ಭಾಗದಲ್ಲಿ ನೀರಿನ ಉಷ್ಣಾಂಶ ವಾಡಿಕೆಗಿಂತ ಹೆಚ್ಚು ಇದ್ದರೆ ಲಾ-ನಿನಾ ಎಂದು ಕರೆಯಲಾಗುತ್ತಿದ ಎಲ್ ನಿನೋ ಮತ್ತು ಲಾ-ನಿನಾ ಪರಿಸ್ಥಿತಿ ಮಳೆ ಮೇಲೆ ಪರಿಣಾಮ ಬೀರಲಿದೆ. ಈ ವರ್ಷ ಇವೆರಡೂ ಸಾಧಾರಣ ಮಟ್ಟದಲ್ಲಿ ಇರುವುದರಿಂದ ಮುಂಗಾರು, ಹಿಂಗಾರಿನಲ್ಲಿ ಉತ್ತಮ ವರ್ಷಧಾರೆಯಾಗಲಿದೆ.ಏಪ್ರಿಲ್ ಮೊದಲ ವಾರದಿಂದ ಕೆಲವೆಡೆ ವರ್ಷಧಾರೆಯಾಗಲಿದೆ ಎಂದು ಮಾಹಿತಿ ನೀಡಿದರು.

From March to the end of May, there is an heat wave blowing in most parts of India. What can be the effect in the Karnataka state?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

19 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

19 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

1 day ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

1 day ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

2 days ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago