ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ 2024 ಮಾರ್ಚ್ ನಿಂದ ಮೇ ತಿಂಗಳ ಕೊನೆಯ ತನಕ ಭಾರತದ ಹೆಚ್ಚಿನ ಭಾಗಗಳಲ್ಲಿ (ಮಧ್ಯ ಭಾರತ, ದಕ್ಷಿಣ ಭಾರತದ ಉತ್ತರ ಕರ್ನಾಟಕ, ಆಂಧ್ರಾ ತನಕ) ಉಷ್ಣ ಮಾರುತ ಬೀಸುವ ಆತಂಕ ಇದೆ. ಸದ್ಯ ಉಷ್ಣ ಮಾರುತದ ಪ್ರಭಾವ ತಗ್ಗಿದೆ.
ಕರ್ನಾಟಕದಲ್ಲಿ ಉಷ್ಣ ಮಾರುತ ಪರಿಣಾಮ : ಉತ್ತರ ಕರ್ನಾಟಕ ಹೆಚ್ಚಿನ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಉಷ್ಣ ಮಾರುತ ಬೀಸುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಜೊತೆಗೆ ಎಲ್ನಿನೋ ಪ್ರಭಾವ ಕುಸಿತಗೊಳ್ಳುತ್ತಿದ್ದರೂ ಸಂಪೂರ್ಣ ಶಿಥಿಲಗೊಂಡಿಲ್ಲ. ಉತ್ತರದ ಕಡೆಯಿಂದ ಉಷ್ಣ ಮಾರುತಗಳು ಆರಂಭವಾದರೆ ಶುಷ್ಕ ಹವೆ ಮುಂದುವರಿಯಬಹುದು. ಮಾರ್ಚ್ ತಿಂಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುವ ಲಕ್ಷಣ ಇದೆ. ವರದಿಯಂತೆ ಪೆಸಿಫಿಕ್ ಸಾಗರ ಹಾಗೂ ಹಿಂದೂಮಹಾಸಾಗರದ ಮೇಲ್ಮೈ ಉಷ್ಣತೆ ಈಗಾಗಲೇ ಸಾಮಾನ್ಯಕ್ಕಿಂತ ಹೆಚ್ಚಿದೆ.ಹಾಗಾಗಿ ಉಷ್ಣ ಮಾರುತದ ಜೊತೆಗೆ ಅರಬ್ಬಿ ಸಮುದ್ರ ಅಥವಾ ಬಂಗಾಳಕೊಲ್ಲಿಯಲ್ಲಿಯ ಮೂಲಕ ಗಾಳಿ ಭೂಮಿಗೆ ಬೀಸಲು ಆರಂಭವಾದರೆ ಮಳೆಯ ಸಾಧ್ಯತೆ ಇರಬಹುದು.
ಫೆಸಿಫಿಕ್ ಸಮುದ್ರದ ಪಶ್ಚಿಮ ಭಾಗದಲ್ಲಿ ನೀರಿನ ಉಷ್ಣಾಂಶ ವಾಡಿಕೆಗಿಂತ ಹೆಚ್ಚು ಇದ್ದರೆ ಲಾ-ನಿನಾ ಎಂದು ಕರೆಯಲಾಗುತ್ತಿದ ಎಲ್ ನಿನೋ ಮತ್ತು ಲಾ-ನಿನಾ ಪರಿಸ್ಥಿತಿ ಮಳೆ ಮೇಲೆ ಪರಿಣಾಮ ಬೀರಲಿದೆ. ಈ ವರ್ಷ ಇವೆರಡೂ ಸಾಧಾರಣ ಮಟ್ಟದಲ್ಲಿ ಇರುವುದರಿಂದ ಮುಂಗಾರು, ಹಿಂಗಾರಿನಲ್ಲಿ ಉತ್ತಮ ವರ್ಷಧಾರೆಯಾಗಲಿದೆ.ಏಪ್ರಿಲ್ ಮೊದಲ ವಾರದಿಂದ ಕೆಲವೆಡೆ ವರ್ಷಧಾರೆಯಾಗಲಿದೆ ಎಂದು ಮಾಹಿತಿ ನೀಡಿದರು.
From March to the end of May, there is an heat wave blowing in most parts of India. What can be the effect in the Karnataka state?
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…