Advertisement
MIRROR FOCUS

Karnataka Weather | ದೇಶದಲ್ಲಿ ಉಷ್ಣ ಮಾರುತದ ಆತಂಕ | ರಾಜ್ಯದಲ್ಲಿ ಪರಿಣಾಮ ಏನು ? ಈಗ ಹೇಗಿದೆ ಉಷ್ಣ ಮಾರುತ ಪ್ರಭಾವ |

Share

ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ 2024 ಮಾರ್ಚ್ ನಿಂದ ಮೇ ತಿಂಗಳ ಕೊನೆಯ ತನಕ ಭಾರತದ ಹೆಚ್ಚಿನ ಭಾಗಗಳಲ್ಲಿ (ಮಧ್ಯ ಭಾರತ, ದಕ್ಷಿಣ ಭಾರತದ ಉತ್ತರ ಕರ್ನಾಟಕ, ಆಂಧ್ರಾ ತನಕ) ಉಷ್ಣ ಮಾರುತ ಬೀಸುವ ಆತಂಕ ಇದೆ. ಸದ್ಯ ಉಷ್ಣ ಮಾರುತದ ಪ್ರಭಾವ ತಗ್ಗಿದೆ. 

ಕರ್ನಾಟಕದಲ್ಲಿ ಉಷ್ಣ ಮಾರುತ ಪರಿಣಾಮ : ಉತ್ತರ ಕರ್ನಾಟಕ ಹೆಚ್ಚಿನ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಉಷ್ಣ ಮಾರುತ ಬೀಸುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಜೊತೆಗೆ ಎಲ್ನಿನೋ ಪ್ರಭಾವ ಕುಸಿತಗೊಳ್ಳುತ್ತಿದ್ದರೂ ಸಂಪೂರ್ಣ ಶಿಥಿಲಗೊಂಡಿಲ್ಲ. ಉತ್ತರದ ಕಡೆಯಿಂದ ಉಷ್ಣ ಮಾರುತಗಳು ಆರಂಭವಾದರೆ ಶುಷ್ಕ ಹವೆ ಮುಂದುವರಿಯಬಹುದು. ಮಾರ್ಚ್ ತಿಂಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುವ ಲಕ್ಷಣ ಇದೆ. ವರದಿಯಂತೆ ಪೆಸಿಫಿಕ್ ಸಾಗರ ಹಾಗೂ ಹಿಂದೂಮಹಾಸಾಗರದ ಮೇಲ್ಮೈ ಉಷ್ಣತೆ ಈಗಾಗಲೇ ಸಾಮಾನ್ಯಕ್ಕಿಂತ ಹೆಚ್ಚಿದೆ.ಹಾಗಾಗಿ ಉಷ್ಣ ಮಾರುತದ ಜೊತೆಗೆ ಅರಬ್ಬಿ ಸಮುದ್ರ ಅಥವಾ ಬಂಗಾಳಕೊಲ್ಲಿಯಲ್ಲಿಯ ಮೂಲಕ ಗಾಳಿ ಭೂಮಿಗೆ ಬೀಸಲು ಆರಂಭವಾದರೆ ಮಳೆಯ ಸಾಧ್ಯತೆ ಇರಬಹುದು.

Advertisement
ಹವಾಮಾನ ಇಲಾಖೆಯ ವಿಶ್ಲೇಷಣೆ
ಕಳೆದ ವರ್ಷ ಎಲ್ ನಿನೋ ಪ್ರಭಾವವು ಮುಂಗಾರು ಮೇಲೆ ಪರಿಣಾಮ ಬೀರಿ ರಾಜ್ಯದಲ್ಲಿ ಮಳೆ ಕೊರತೆಯಾಗಿತ್ತು. ಆದರೆ, ಜಾಗತಿಕ ನಿಯಂತ್ರಕ ಸೂಚ್ಯಂಕದ ಪ್ರಕಾರ ಕಳೆದ ಫೆಬ್ರವರಿಯಿಂದ ಎಲ್ ನಿನೋ ಮಧ್ಯಮ ಹಂತಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಉತ್ತಮ ಮಳೆ ಬೀಳುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ವಿಜ್ಞಾನಿ ಎ.ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಫೆಸಿಫಿಕ್ ಸಮುದ್ರದ ಪಶ್ಚಿಮ ಭಾಗದಲ್ಲಿ ನೀರಿನ ಉಷ್ಣಾಂಶ ವಾಡಿಕೆಗಿಂತ ಹೆಚ್ಚು ಇದ್ದರೆ ಲಾ-ನಿನಾ ಎಂದು ಕರೆಯಲಾಗುತ್ತಿದ ಎಲ್ ನಿನೋ ಮತ್ತು ಲಾ-ನಿನಾ ಪರಿಸ್ಥಿತಿ ಮಳೆ ಮೇಲೆ ಪರಿಣಾಮ ಬೀರಲಿದೆ. ಈ ವರ್ಷ ಇವೆರಡೂ ಸಾಧಾರಣ ಮಟ್ಟದಲ್ಲಿ ಇರುವುದರಿಂದ ಮುಂಗಾರು, ಹಿಂಗಾರಿನಲ್ಲಿ ಉತ್ತಮ ವರ್ಷಧಾರೆಯಾಗಲಿದೆ.ಏಪ್ರಿಲ್ ಮೊದಲ ವಾರದಿಂದ ಕೆಲವೆಡೆ ವರ್ಷಧಾರೆಯಾಗಲಿದೆ ಎಂದು ಮಾಹಿತಿ ನೀಡಿದರು.

From March to the end of May, there is an heat wave blowing in most parts of India. What can be the effect in the Karnataka state?

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

8 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

11 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

12 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

19 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

21 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

22 hours ago