Advertisement
MIRROR FOCUS

Karnataka Weather | ದೇಶದಲ್ಲಿ ಉಷ್ಣ ಮಾರುತದ ಆತಂಕ | ರಾಜ್ಯದಲ್ಲಿ ಪರಿಣಾಮ ಏನು ? ಈಗ ಹೇಗಿದೆ ಉಷ್ಣ ಮಾರುತ ಪ್ರಭಾವ |

Share

ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ 2024 ಮಾರ್ಚ್ ನಿಂದ ಮೇ ತಿಂಗಳ ಕೊನೆಯ ತನಕ ಭಾರತದ ಹೆಚ್ಚಿನ ಭಾಗಗಳಲ್ಲಿ (ಮಧ್ಯ ಭಾರತ, ದಕ್ಷಿಣ ಭಾರತದ ಉತ್ತರ ಕರ್ನಾಟಕ, ಆಂಧ್ರಾ ತನಕ) ಉಷ್ಣ ಮಾರುತ ಬೀಸುವ ಆತಂಕ ಇದೆ. ಸದ್ಯ ಉಷ್ಣ ಮಾರುತದ ಪ್ರಭಾವ ತಗ್ಗಿದೆ. 

ಕರ್ನಾಟಕದಲ್ಲಿ ಉಷ್ಣ ಮಾರುತ ಪರಿಣಾಮ : ಉತ್ತರ ಕರ್ನಾಟಕ ಹೆಚ್ಚಿನ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಉಷ್ಣ ಮಾರುತ ಬೀಸುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಜೊತೆಗೆ ಎಲ್ನಿನೋ ಪ್ರಭಾವ ಕುಸಿತಗೊಳ್ಳುತ್ತಿದ್ದರೂ ಸಂಪೂರ್ಣ ಶಿಥಿಲಗೊಂಡಿಲ್ಲ. ಉತ್ತರದ ಕಡೆಯಿಂದ ಉಷ್ಣ ಮಾರುತಗಳು ಆರಂಭವಾದರೆ ಶುಷ್ಕ ಹವೆ ಮುಂದುವರಿಯಬಹುದು. ಮಾರ್ಚ್ ತಿಂಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುವ ಲಕ್ಷಣ ಇದೆ. ವರದಿಯಂತೆ ಪೆಸಿಫಿಕ್ ಸಾಗರ ಹಾಗೂ ಹಿಂದೂಮಹಾಸಾಗರದ ಮೇಲ್ಮೈ ಉಷ್ಣತೆ ಈಗಾಗಲೇ ಸಾಮಾನ್ಯಕ್ಕಿಂತ ಹೆಚ್ಚಿದೆ.ಹಾಗಾಗಿ ಉಷ್ಣ ಮಾರುತದ ಜೊತೆಗೆ ಅರಬ್ಬಿ ಸಮುದ್ರ ಅಥವಾ ಬಂಗಾಳಕೊಲ್ಲಿಯಲ್ಲಿಯ ಮೂಲಕ ಗಾಳಿ ಭೂಮಿಗೆ ಬೀಸಲು ಆರಂಭವಾದರೆ ಮಳೆಯ ಸಾಧ್ಯತೆ ಇರಬಹುದು.

ಹವಾಮಾನ ಇಲಾಖೆಯ ವಿಶ್ಲೇಷಣೆ
ಕಳೆದ ವರ್ಷ ಎಲ್ ನಿನೋ ಪ್ರಭಾವವು ಮುಂಗಾರು ಮೇಲೆ ಪರಿಣಾಮ ಬೀರಿ ರಾಜ್ಯದಲ್ಲಿ ಮಳೆ ಕೊರತೆಯಾಗಿತ್ತು. ಆದರೆ, ಜಾಗತಿಕ ನಿಯಂತ್ರಕ ಸೂಚ್ಯಂಕದ ಪ್ರಕಾರ ಕಳೆದ ಫೆಬ್ರವರಿಯಿಂದ ಎಲ್ ನಿನೋ ಮಧ್ಯಮ ಹಂತಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಉತ್ತಮ ಮಳೆ ಬೀಳುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ವಿಜ್ಞಾನಿ ಎ.ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಫೆಸಿಫಿಕ್ ಸಮುದ್ರದ ಪಶ್ಚಿಮ ಭಾಗದಲ್ಲಿ ನೀರಿನ ಉಷ್ಣಾಂಶ ವಾಡಿಕೆಗಿಂತ ಹೆಚ್ಚು ಇದ್ದರೆ ಲಾ-ನಿನಾ ಎಂದು ಕರೆಯಲಾಗುತ್ತಿದ ಎಲ್ ನಿನೋ ಮತ್ತು ಲಾ-ನಿನಾ ಪರಿಸ್ಥಿತಿ ಮಳೆ ಮೇಲೆ ಪರಿಣಾಮ ಬೀರಲಿದೆ. ಈ ವರ್ಷ ಇವೆರಡೂ ಸಾಧಾರಣ ಮಟ್ಟದಲ್ಲಿ ಇರುವುದರಿಂದ ಮುಂಗಾರು, ಹಿಂಗಾರಿನಲ್ಲಿ ಉತ್ತಮ ವರ್ಷಧಾರೆಯಾಗಲಿದೆ.ಏಪ್ರಿಲ್ ಮೊದಲ ವಾರದಿಂದ ಕೆಲವೆಡೆ ವರ್ಷಧಾರೆಯಾಗಲಿದೆ ಎಂದು ಮಾಹಿತಿ ನೀಡಿದರು.

From March to the end of May, there is an heat wave blowing in most parts of India. What can be the effect in the Karnataka state?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

9 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

10 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

17 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

21 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

4 days ago