Advertisement
ರಾಷ್ಟ್ರೀಯ

ವೆದರ್‌ ಮಿರರ್‌ | ದೆಹಲಿಯಲ್ಲಿ ಗರಿಷ್ಟ ತಾಪಮಾನ | ಎಲ್ಲೋ ಎಲರ್ಟ್‌ ಘೋಷಣೆ | 46 ಡಿಗ್ರಿ ಸೆಲ್ಸಿಯಸ್‌ ತಲಪುವ ಸಾಧ್ಯತೆ |

Share

ದೆಹಲಿಯಲ್ಲಿ ಗರಿಷ್ಠ ತಾಪಮಾನ 44.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಭಾರತೀಯ ಹವಾಮಾನ ಇಲಾಖೆ ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಹೀಟ್‌ ವೇವ್‌ ಕಾರಣದಿಂದ ಎಲ್ಲೋ ಎಲರ್ಟ್‌ ಎಚ್ಚರಿಕೆಯನ್ನು ನೀಡಿದೆ. ಎ.28 ರಂದು ದೆಹಲಿಯ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 46 ಡಿಗ್ರಿ ಸೆಲ್ಸಿಯಸ್‌ಗೆ ಏರಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ನಡುವೆಯೇ ಏಪ್ರಿಲ್ 29 ರಂದು ಉತ್ತರ ಭಾರತದಲ್ಲಿ ಧೂಳಿನ ಚಂಡಮಾರುತ, ಗಾಳಿ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಆದರೆ, ರಾಷ್ಟ್ರ ರಾಜಧಾನಿಯಲ್ಲಿ ಮೇ 1-2 ರಿಂದ ತಾಪಮಾನ ಕಡಿಮೆಯಾಗಲಿದೆ. ದೆಹಲಿಯ ಪೂರ್ವ ಪ್ರದೇಶವು ಏಪ್ರಿಲ್ 30 ರಿಂದಲೇ ತಾಪಮಾನ ಕಡಿಮೆಯಾಗಬಹುದಾಗಿದೆ ಎಂದು ಇಲಾಖೆ ಹೇಳಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ ದೆಹಲಿಯ ಸಫ್ದರ್‌ಜಂಗ್ ವೀಕ್ಷಣಾಲಯವು ಮಂಗಳವಾರ ಗರಿಷ್ಠ ತಾಪಮಾನ 40.8 ಡಿಗ್ರಿ ಸೆಲ್ಸಿಯಸ್ ಎಂದು ವರದಿ ಮಾಡಿದೆ. ದೆಹಲಿಯಲ್ಲಿ ಏಪ್ರಿಲ್ ತಿಂಗಳ ಸಾರ್ವಕಾಲಿಕ ಗರಿಷ್ಠ ತಾಪಮಾನವು 1941 ರಲ್ಲಿ 45.6 ಡಿಗ್ರಿ ಸೆಲ್ಸಿಯಸ್ ಆಗಿತ್ತು.

ತೆಲಂಗಾಣ, ಆಂಧ್ರಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಬಿಹಾರ, ಛತ್ತೀಸ್‌ಗಢ ಮತ್ತು ದೆಹಲಿಯು ಹೀಟ್ ವೇವ್  ಪ್ರದೇಶವಾಗಿದೆ. ಭಾರತದಲ್ಲಿ ಅತಿ ಹೆಚ್ಚು ಶಾಖದ ಪೀಡಿತ ಪ್ರದೇಶವಾಗಿದೆ.

ಹೀಟ್‌ ವೇವ್‌ ಅಥವಾ ಅಧಿಕ ತಾಪಮಾನವು  ಜನರಿಗೆ  ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು ಎಂದು ಹವಾಮಾನ ಸಂಸ್ಥೆ ಸೂಚಿಸಿದೆ. ಆದ್ದರಿಂದ ಈ ಪ್ರದೇಶಗಳ ಜನರು ಶಾಖಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು, ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಬೇಕು ಮತ್ತು ಬಟ್ಟೆ, ಟೋಪಿ ಅಥವಾ ಛತ್ರಿ ಇತ್ಯಾದಿಗಳನ್ನು ಬಳಸಿ ತಲೆಯನ್ನು ಮುಚ್ಚಬೇಕು. ಈ ಕಾರಣದಿಂದಲೇ ಎಲ್ಲೋ ಎಲರ್ಟ್‌ ಘೋಷಣೆ ಮಾಡಲಾಗಿದೆ.

ಕಳೆದ 122 ವರ್ಷಗಳಲ್ಲಿ ಭಾರತವು ಅಧಿಕ ತಾಪಮಾನದ ಮಾರ್ಚ್ ಅನ್ನು ಈ ಬಾರಿ ದಾಖಲಿಸಿದೆ, ತೀವ್ರವಾದ ಶಾಖದ ಅಲೆಯು ತಿಂಗಳ ಅವಧಿಯಲ್ಲಿ ದೇಶದ ಕೆಲವು ಪ್ರದೇಶದಲ್ಲಿ ಪ್ರತೀ ವರ್ಷ ಸಮಸ್ಯೆ ತರುತ್ತದೆ. ಕೃಷಿ ಸೇರಿದಂತೆ ಕುಡಿಯುವ ನೀರಿಗೂ ತೊಂದರೆಯಾಗುತ್ತದೆ. ಅಕಾಲಿಕ ತಾಪಮಾನದಿಂದ ದೇಶದ ಕೆಲವು ಭಾಗಗಳಲ್ಲಿ ಗೋಧಿ ಇಳುವರಿಯು 35 ಪ್ರತಿಶತದಷ್ಟು ಕುಸಿಯುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

13 minutes ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

6 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

18 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

19 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago