ಕರಾವಳಿ ಭಾಗದಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಬಿಸಿಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಮಂಗಳೂರಿನಲ್ಲಿ ಹೇಳಿದ್ದಾರೆ.………ಮುಂದೆ ಓದಿ……..
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗಿಂತಲೂ ಅಧಿಕ ತಾಪಮಾನ ದಾಖಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದಾಗಿ ಬಿಸಿಗಾಳಿಯ ವಾತಾವರಣ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದರು. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಗೆಯ ಅವಧಿಯಲ್ಲಿ ಮನೆ ಹಾಗೂ ಕಚೇರಿಯಿಂದ ಹೊರ ಹೋಗುವುದನ್ನು ತಪ್ಪಿಸಬೇಕು. ತಂಪು ಪಾನೀಯ, ನೀರಿನ ಸೇವೆನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ 39.4, ಕೊಕ್ಕಡದಲ್ಲಿ 40.4, ಬ್ರಹ್ವಾವರದಲ್ಲಿ 39.1, ಕೋಟಾದಲ್ಲಿ 39.5, ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…