Advertisement
MIRROR FOCUS

HeatWave | ಏರುತ್ತಿರುವ ತಾಪಮಾನ | ದೂರವಾಗುತ್ತಿರುವ ಮಳೆ | ಬಿಸಿಯಾದ ತಾಪಮಾನದಿಂದ ರಕ್ಷಣೆ ಹೇಗೆ..?

Share

ಇದುವರೆಗೂ ಕೇಳದ ಶಬ್ದಗಳು ಈಗ ಕೇಳುತ್ತಿವೆ. ಹೀಟ್‌ ವೇವ್‌, ಎಲ್‌ನಿನೋ.. ಹೀಟ್‌ ಬರ್ನ್‌, ಹೀಟ್‌ ಸ್ಟ್ರೋಕ್…!‌. ಹಿಂದೆಲ್ಲಾ ಇಂತಹ ಶಬ್ದಗಳ ಬಳಕೆಗೆ ಅವಕಾಶ ಇರಲಿಲ್ಲ. ಹಸಿರಿ ಹಸಿರಾಗಿದ್ದ ಗ್ರಾಮೀಣ ಭಾಗದಲ್ಲೂ ಇಂದು ಬಿಸಿಬಿಸಿಯಾದ ಮಾತುಗಳು.. ನೀರಿಲ್ಲ, ಯಬೋ ಬಿಸಿಲು…!. ಈಗ ಬಿಸಿಯಾದ ತಾಪಮಾನದಿಂದ ರಕ್ಷಣೆಗೆ ಹೇಗೆ .. ? ಈ ಬಗ್ಗೆ ಇಲಾಖೆಗಳು ಮಾಹಿತಿ ನೀಡುತ್ತವೆ. ದೇಶದೆಲ್ಲೆಡೆ ಆಗಾಗ ಈ ಎಚ್ಚರಿಕೆ ನೀಡಲಾಗುತ್ತಿದೆ.

ತೀವ್ರತರವಾದ ಶಾಖದಿಂದ ನಮ್ಮನ್ನು ನಾವು ರಕ್ಷಿಸುಕೊಳ್ಳುವುದು ಹೇಗೆ..? ಅನುಸರಿಸಬೇಕಾದ ಸಲಹೆಗಳು ಏನು..? : ಈ ಬಾರಿ ದೇಶದಲ್ಲಿ ಬೇಸಿಗೆಯ ಆರಂಭದೊಂದಿಗೆ, ಅನೇಕ ಪ್ರದೇಶಗಳಿಗೆ ಹೀಟ್‌ವೇವ್ ಎಚ್ಚರಿಕೆಗಳನ್ನು ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ  ತಮಿಳುನಾಡು, ಕರ್ನಾಟಕ, ತೆಲಂಗಾಣ,  ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ಮತ್ತು ರಾಯಲಸೀಮೆಯ ಹಲವು ಕಡೆಗಳಲ್ಲಿ  ಹೀಟ್‌ವೇವ್ ಎಚ್ಚರಿಕೆಗಳನ್ನು ನೀಡಿದೆ. ಒಂದು ಸ್ಥಳದ ಗರಿಷ್ಠ ತಾಪಮಾನವು 40-ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ತಲುಪಿದಾಗ ಹೀಟ್‌ ವೇವ್‌ ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ಹವಾಮಾನವು ಮಾನವನ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ಪರಿಸರದ ಮೇಲೂ ಹೆಚ್ಚಿನ ಪರಿಣಾಮ ಉಂಟುಮಾಡುತ್ತದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಮಂಗಳೂರು, ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಹಲವು ಕಡೆ ತಾಪಮಾನ ಏರಿಕೆಯಾಗಿದೆ.

ವಿಪರೀತ ಶಾಖದಿಂದ ರಕ್ಷಿಸಿಕೊಳ್ಳುವುದು  ಹೇಗೆ ? :

  • ಬಿಸಿಲಿನ ಸಂದರ್ಭ ಹೆಚ್ಚಾಗಿ ಹತ್ತಿ, ಸಡಿಲವಾದ ಬಟ್ಟೆಗಳನ್ನು ಆಯ್ಕೆಮಾಡಿ. ಚರ್ಮವನ್ನು ತೇವವಾಗಿರಿಸಿಕೊಳ್ಳಬೇಕು ಅಥವಾ ಚರ್ಮವನ್ನು ತೇವಾಂಶದಿಂದ ಇಡಲು ಒದ್ದೆಯಾದ ಬಟ್ಟೆಯನ್ನು ಇಟ್ಟುಕೊಳ್ಳಬೇಕು. ಸಾಧ್ಯವಾದರೆ ಗಾಳಿಯ ಕಡೆ ಹೆಚ್ಚಾಗಿ ಇರುವುದು ಕ್ಷೇಮ. ಫ್ಯಾನ್‌ ಅಳವಡಿಕೆ ಇರಲಿ.
  • ಹೆಚ್ಚು ನೀರನ್ನು ಕುಡಿಯುತ್ತಲೇ ಇರಬೇಕು. ವಿಪರೀತ ಶಾಖದಲ್ಲಿ ಅಥವಾ ವ್ಯಾಯಾಮ ಮತ್ತು ದೈಹಿಕ ಚಟುವಟಿಕೆಯ ಸಮಯದಲ್ಲಿ ಹೊರಗೆ ಕೆಲಸ ಮಾಡುವಾಗ, ನಮಗೆ ಬಾಯಾರಿಕೆಯಾಗುವ ಮೊದಲೇ ನಾವು ನೀರನ್ನು ಕುಡಿಯಬೇಕು.
  • ದಿನದ ಅತ್ಯಂತ ಬಿಸಿಯಾದ ಸಮಯದಲ್ಲಿ ಮನೆಯೊಳಗೆ ಇರಲು ಯೋಜಿಸಿಕೊಳ್ಳಿ.
  • ಮನೆಯಲ್ಲಿ ತಯಾರಿಸಿದ  ಪಾನೀಯಗಳಾದ ತೆಂಗಿನ ನೀರು,  ಎಳನೀರು, ನಿಂಬೆ ನೀರು, ಬೆಣ್ಣೆ ಹಾಲು ಮತ್ತು ಇತರವುಗಳನ್ನು ಬಳಸಿ.
  • ಸಾಧ್ಯವಾದರೆ ಇಂದಿನ ವಾತಾವರಣ ಉಷ್ಣತೆಯನ್ನು ತಿಳಿದುಕೊಳ್ಳಿ. ಡೀಹೈಡ್ರೇಶನ್‌ ಆಗದಂತೆ ಎಚ್ಚರವಹಿಸಿ ಹಾಗೂ ಅಂತಹ ಸಂದರ್ಭದಲ್ಲಿ ಅಗತ್ಯ ಔಷಧಗಳನ್ನು ಇರಿಸಿಕೊಳ್ಳಿ.
  • ನಿಮ್ಮ ಚರ್ಮ ಮತ್ತು ಕಣ್ಣುಗಳನ್ನುರಕ್ಷಿಸಲು ಛತ್ರಿ, ಟೋಪಿ, ಸನ್‌ಗ್ಲಾಸ್ ಮತ್ತು ಬಟ್ಟೆಯನ್ನು ಬಳಸಿ.
  • ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲಿನಲ್ಲಿ ತಿರುಗಾಡುವುದನ್ನು ತಪ್ಪಿಸಿ.
  • ಶ್ರಮದಾಯಕ ಚಟುವಟಿಕೆಗಳನ್ನು ಸಾಧ್ಯವಾದರೆ ಬಿಸಿಲಿನ ವೇಳೆ ಮಾಡದಿರಿ.
  • ಉಪ್ಪು, ಮಸಾಲೆಯುಕ್ತ, ಎಣ್ಣೆಯುಕ್ತ ಮತ್ತು ಹೆಚ್ಚಿನ ಪ್ರೋಟೀನ್ ಆಹಾರಗಳಿಂದ ತಾತ್ಕಾಲಿಕವಾಗಿ ದೂರ ಇರಿ.
  • ನಿಮ್ಮ ಸಾಕುಪ್ರಾಣಿಗಳು ಮತ್ತು ಮಕ್ಕಳನ್ನು ನಿಲ್ಲಿಸಿದ ವಾಹನಗಳಲ್ಲಿ ಒಂಟಿಯಾಗಿ ಬಿಡಬೇಡಿ. ಕಾರಿನ ಗ್ಲಾಸ್‌ ಕ್ಲೋಸ್‌ ಮಾಡಬೇಡಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

2 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

3 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

5 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

10 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

10 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

21 hours ago