Advertisement
MIRROR FOCUS

HeatWave | ಏರುತ್ತಿರುವ ತಾಪಮಾನ | ದೂರವಾಗುತ್ತಿರುವ ಮಳೆ | ಬಿಸಿಯಾದ ತಾಪಮಾನದಿಂದ ರಕ್ಷಣೆ ಹೇಗೆ..?

Share

ಇದುವರೆಗೂ ಕೇಳದ ಶಬ್ದಗಳು ಈಗ ಕೇಳುತ್ತಿವೆ. ಹೀಟ್‌ ವೇವ್‌, ಎಲ್‌ನಿನೋ.. ಹೀಟ್‌ ಬರ್ನ್‌, ಹೀಟ್‌ ಸ್ಟ್ರೋಕ್…!‌. ಹಿಂದೆಲ್ಲಾ ಇಂತಹ ಶಬ್ದಗಳ ಬಳಕೆಗೆ ಅವಕಾಶ ಇರಲಿಲ್ಲ. ಹಸಿರಿ ಹಸಿರಾಗಿದ್ದ ಗ್ರಾಮೀಣ ಭಾಗದಲ್ಲೂ ಇಂದು ಬಿಸಿಬಿಸಿಯಾದ ಮಾತುಗಳು.. ನೀರಿಲ್ಲ, ಯಬೋ ಬಿಸಿಲು…!. ಈಗ ಬಿಸಿಯಾದ ತಾಪಮಾನದಿಂದ ರಕ್ಷಣೆಗೆ ಹೇಗೆ .. ? ಈ ಬಗ್ಗೆ ಇಲಾಖೆಗಳು ಮಾಹಿತಿ ನೀಡುತ್ತವೆ. ದೇಶದೆಲ್ಲೆಡೆ ಆಗಾಗ ಈ ಎಚ್ಚರಿಕೆ ನೀಡಲಾಗುತ್ತಿದೆ.

Advertisement
Advertisement

ತೀವ್ರತರವಾದ ಶಾಖದಿಂದ ನಮ್ಮನ್ನು ನಾವು ರಕ್ಷಿಸುಕೊಳ್ಳುವುದು ಹೇಗೆ..? ಅನುಸರಿಸಬೇಕಾದ ಸಲಹೆಗಳು ಏನು..? : ಈ ಬಾರಿ ದೇಶದಲ್ಲಿ ಬೇಸಿಗೆಯ ಆರಂಭದೊಂದಿಗೆ, ಅನೇಕ ಪ್ರದೇಶಗಳಿಗೆ ಹೀಟ್‌ವೇವ್ ಎಚ್ಚರಿಕೆಗಳನ್ನು ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ  ತಮಿಳುನಾಡು, ಕರ್ನಾಟಕ, ತೆಲಂಗಾಣ,  ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ಮತ್ತು ರಾಯಲಸೀಮೆಯ ಹಲವು ಕಡೆಗಳಲ್ಲಿ  ಹೀಟ್‌ವೇವ್ ಎಚ್ಚರಿಕೆಗಳನ್ನು ನೀಡಿದೆ. ಒಂದು ಸ್ಥಳದ ಗರಿಷ್ಠ ತಾಪಮಾನವು 40-ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ತಲುಪಿದಾಗ ಹೀಟ್‌ ವೇವ್‌ ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ಹವಾಮಾನವು ಮಾನವನ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ಪರಿಸರದ ಮೇಲೂ ಹೆಚ್ಚಿನ ಪರಿಣಾಮ ಉಂಟುಮಾಡುತ್ತದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಮಂಗಳೂರು, ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಹಲವು ಕಡೆ ತಾಪಮಾನ ಏರಿಕೆಯಾಗಿದೆ.

ವಿಪರೀತ ಶಾಖದಿಂದ ರಕ್ಷಿಸಿಕೊಳ್ಳುವುದು  ಹೇಗೆ ? :

  • ಬಿಸಿಲಿನ ಸಂದರ್ಭ ಹೆಚ್ಚಾಗಿ ಹತ್ತಿ, ಸಡಿಲವಾದ ಬಟ್ಟೆಗಳನ್ನು ಆಯ್ಕೆಮಾಡಿ. ಚರ್ಮವನ್ನು ತೇವವಾಗಿರಿಸಿಕೊಳ್ಳಬೇಕು ಅಥವಾ ಚರ್ಮವನ್ನು ತೇವಾಂಶದಿಂದ ಇಡಲು ಒದ್ದೆಯಾದ ಬಟ್ಟೆಯನ್ನು ಇಟ್ಟುಕೊಳ್ಳಬೇಕು. ಸಾಧ್ಯವಾದರೆ ಗಾಳಿಯ ಕಡೆ ಹೆಚ್ಚಾಗಿ ಇರುವುದು ಕ್ಷೇಮ. ಫ್ಯಾನ್‌ ಅಳವಡಿಕೆ ಇರಲಿ.
  • ಹೆಚ್ಚು ನೀರನ್ನು ಕುಡಿಯುತ್ತಲೇ ಇರಬೇಕು. ವಿಪರೀತ ಶಾಖದಲ್ಲಿ ಅಥವಾ ವ್ಯಾಯಾಮ ಮತ್ತು ದೈಹಿಕ ಚಟುವಟಿಕೆಯ ಸಮಯದಲ್ಲಿ ಹೊರಗೆ ಕೆಲಸ ಮಾಡುವಾಗ, ನಮಗೆ ಬಾಯಾರಿಕೆಯಾಗುವ ಮೊದಲೇ ನಾವು ನೀರನ್ನು ಕುಡಿಯಬೇಕು.
  • ದಿನದ ಅತ್ಯಂತ ಬಿಸಿಯಾದ ಸಮಯದಲ್ಲಿ ಮನೆಯೊಳಗೆ ಇರಲು ಯೋಜಿಸಿಕೊಳ್ಳಿ.
  • ಮನೆಯಲ್ಲಿ ತಯಾರಿಸಿದ  ಪಾನೀಯಗಳಾದ ತೆಂಗಿನ ನೀರು,  ಎಳನೀರು, ನಿಂಬೆ ನೀರು, ಬೆಣ್ಣೆ ಹಾಲು ಮತ್ತು ಇತರವುಗಳನ್ನು ಬಳಸಿ.
  • ಸಾಧ್ಯವಾದರೆ ಇಂದಿನ ವಾತಾವರಣ ಉಷ್ಣತೆಯನ್ನು ತಿಳಿದುಕೊಳ್ಳಿ. ಡೀಹೈಡ್ರೇಶನ್‌ ಆಗದಂತೆ ಎಚ್ಚರವಹಿಸಿ ಹಾಗೂ ಅಂತಹ ಸಂದರ್ಭದಲ್ಲಿ ಅಗತ್ಯ ಔಷಧಗಳನ್ನು ಇರಿಸಿಕೊಳ್ಳಿ.
  • ನಿಮ್ಮ ಚರ್ಮ ಮತ್ತು ಕಣ್ಣುಗಳನ್ನುರಕ್ಷಿಸಲು ಛತ್ರಿ, ಟೋಪಿ, ಸನ್‌ಗ್ಲಾಸ್ ಮತ್ತು ಬಟ್ಟೆಯನ್ನು ಬಳಸಿ.
  • ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲಿನಲ್ಲಿ ತಿರುಗಾಡುವುದನ್ನು ತಪ್ಪಿಸಿ.
  • ಶ್ರಮದಾಯಕ ಚಟುವಟಿಕೆಗಳನ್ನು ಸಾಧ್ಯವಾದರೆ ಬಿಸಿಲಿನ ವೇಳೆ ಮಾಡದಿರಿ.
  • ಉಪ್ಪು, ಮಸಾಲೆಯುಕ್ತ, ಎಣ್ಣೆಯುಕ್ತ ಮತ್ತು ಹೆಚ್ಚಿನ ಪ್ರೋಟೀನ್ ಆಹಾರಗಳಿಂದ ತಾತ್ಕಾಲಿಕವಾಗಿ ದೂರ ಇರಿ.
  • ನಿಮ್ಮ ಸಾಕುಪ್ರಾಣಿಗಳು ಮತ್ತು ಮಕ್ಕಳನ್ನು ನಿಲ್ಲಿಸಿದ ವಾಹನಗಳಲ್ಲಿ ಒಂಟಿಯಾಗಿ ಬಿಡಬೇಡಿ. ಕಾರಿನ ಗ್ಲಾಸ್‌ ಕ್ಲೋಸ್‌ ಮಾಡಬೇಡಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

16 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

16 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago