Advertisement
MIRROR FOCUS

HeatWave | ಏರುತ್ತಿರುವ ತಾಪಮಾನ | ದೂರವಾಗುತ್ತಿರುವ ಮಳೆ | ಬಿಸಿಯಾದ ತಾಪಮಾನದಿಂದ ರಕ್ಷಣೆ ಹೇಗೆ..?

Share

ಇದುವರೆಗೂ ಕೇಳದ ಶಬ್ದಗಳು ಈಗ ಕೇಳುತ್ತಿವೆ. ಹೀಟ್‌ ವೇವ್‌, ಎಲ್‌ನಿನೋ.. ಹೀಟ್‌ ಬರ್ನ್‌, ಹೀಟ್‌ ಸ್ಟ್ರೋಕ್…!‌. ಹಿಂದೆಲ್ಲಾ ಇಂತಹ ಶಬ್ದಗಳ ಬಳಕೆಗೆ ಅವಕಾಶ ಇರಲಿಲ್ಲ. ಹಸಿರಿ ಹಸಿರಾಗಿದ್ದ ಗ್ರಾಮೀಣ ಭಾಗದಲ್ಲೂ ಇಂದು ಬಿಸಿಬಿಸಿಯಾದ ಮಾತುಗಳು.. ನೀರಿಲ್ಲ, ಯಬೋ ಬಿಸಿಲು…!. ಈಗ ಬಿಸಿಯಾದ ತಾಪಮಾನದಿಂದ ರಕ್ಷಣೆಗೆ ಹೇಗೆ .. ? ಈ ಬಗ್ಗೆ ಇಲಾಖೆಗಳು ಮಾಹಿತಿ ನೀಡುತ್ತವೆ. ದೇಶದೆಲ್ಲೆಡೆ ಆಗಾಗ ಈ ಎಚ್ಚರಿಕೆ ನೀಡಲಾಗುತ್ತಿದೆ.

Advertisement
Advertisement

ತೀವ್ರತರವಾದ ಶಾಖದಿಂದ ನಮ್ಮನ್ನು ನಾವು ರಕ್ಷಿಸುಕೊಳ್ಳುವುದು ಹೇಗೆ..? ಅನುಸರಿಸಬೇಕಾದ ಸಲಹೆಗಳು ಏನು..? : ಈ ಬಾರಿ ದೇಶದಲ್ಲಿ ಬೇಸಿಗೆಯ ಆರಂಭದೊಂದಿಗೆ, ಅನೇಕ ಪ್ರದೇಶಗಳಿಗೆ ಹೀಟ್‌ವೇವ್ ಎಚ್ಚರಿಕೆಗಳನ್ನು ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ  ತಮಿಳುನಾಡು, ಕರ್ನಾಟಕ, ತೆಲಂಗಾಣ,  ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ಮತ್ತು ರಾಯಲಸೀಮೆಯ ಹಲವು ಕಡೆಗಳಲ್ಲಿ  ಹೀಟ್‌ವೇವ್ ಎಚ್ಚರಿಕೆಗಳನ್ನು ನೀಡಿದೆ. ಒಂದು ಸ್ಥಳದ ಗರಿಷ್ಠ ತಾಪಮಾನವು 40-ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ತಲುಪಿದಾಗ ಹೀಟ್‌ ವೇವ್‌ ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ಹವಾಮಾನವು ಮಾನವನ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ಪರಿಸರದ ಮೇಲೂ ಹೆಚ್ಚಿನ ಪರಿಣಾಮ ಉಂಟುಮಾಡುತ್ತದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಮಂಗಳೂರು, ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಹಲವು ಕಡೆ ತಾಪಮಾನ ಏರಿಕೆಯಾಗಿದೆ.

Advertisement

ವಿಪರೀತ ಶಾಖದಿಂದ ರಕ್ಷಿಸಿಕೊಳ್ಳುವುದು  ಹೇಗೆ ? :

  • ಬಿಸಿಲಿನ ಸಂದರ್ಭ ಹೆಚ್ಚಾಗಿ ಹತ್ತಿ, ಸಡಿಲವಾದ ಬಟ್ಟೆಗಳನ್ನು ಆಯ್ಕೆಮಾಡಿ. ಚರ್ಮವನ್ನು ತೇವವಾಗಿರಿಸಿಕೊಳ್ಳಬೇಕು ಅಥವಾ ಚರ್ಮವನ್ನು ತೇವಾಂಶದಿಂದ ಇಡಲು ಒದ್ದೆಯಾದ ಬಟ್ಟೆಯನ್ನು ಇಟ್ಟುಕೊಳ್ಳಬೇಕು. ಸಾಧ್ಯವಾದರೆ ಗಾಳಿಯ ಕಡೆ ಹೆಚ್ಚಾಗಿ ಇರುವುದು ಕ್ಷೇಮ. ಫ್ಯಾನ್‌ ಅಳವಡಿಕೆ ಇರಲಿ.
  • ಹೆಚ್ಚು ನೀರನ್ನು ಕುಡಿಯುತ್ತಲೇ ಇರಬೇಕು. ವಿಪರೀತ ಶಾಖದಲ್ಲಿ ಅಥವಾ ವ್ಯಾಯಾಮ ಮತ್ತು ದೈಹಿಕ ಚಟುವಟಿಕೆಯ ಸಮಯದಲ್ಲಿ ಹೊರಗೆ ಕೆಲಸ ಮಾಡುವಾಗ, ನಮಗೆ ಬಾಯಾರಿಕೆಯಾಗುವ ಮೊದಲೇ ನಾವು ನೀರನ್ನು ಕುಡಿಯಬೇಕು.
  • ದಿನದ ಅತ್ಯಂತ ಬಿಸಿಯಾದ ಸಮಯದಲ್ಲಿ ಮನೆಯೊಳಗೆ ಇರಲು ಯೋಜಿಸಿಕೊಳ್ಳಿ.
  • ಮನೆಯಲ್ಲಿ ತಯಾರಿಸಿದ  ಪಾನೀಯಗಳಾದ ತೆಂಗಿನ ನೀರು,  ಎಳನೀರು, ನಿಂಬೆ ನೀರು, ಬೆಣ್ಣೆ ಹಾಲು ಮತ್ತು ಇತರವುಗಳನ್ನು ಬಳಸಿ.
  • ಸಾಧ್ಯವಾದರೆ ಇಂದಿನ ವಾತಾವರಣ ಉಷ್ಣತೆಯನ್ನು ತಿಳಿದುಕೊಳ್ಳಿ. ಡೀಹೈಡ್ರೇಶನ್‌ ಆಗದಂತೆ ಎಚ್ಚರವಹಿಸಿ ಹಾಗೂ ಅಂತಹ ಸಂದರ್ಭದಲ್ಲಿ ಅಗತ್ಯ ಔಷಧಗಳನ್ನು ಇರಿಸಿಕೊಳ್ಳಿ.
  • ನಿಮ್ಮ ಚರ್ಮ ಮತ್ತು ಕಣ್ಣುಗಳನ್ನುರಕ್ಷಿಸಲು ಛತ್ರಿ, ಟೋಪಿ, ಸನ್‌ಗ್ಲಾಸ್ ಮತ್ತು ಬಟ್ಟೆಯನ್ನು ಬಳಸಿ.
  • ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲಿನಲ್ಲಿ ತಿರುಗಾಡುವುದನ್ನು ತಪ್ಪಿಸಿ.
  • ಶ್ರಮದಾಯಕ ಚಟುವಟಿಕೆಗಳನ್ನು ಸಾಧ್ಯವಾದರೆ ಬಿಸಿಲಿನ ವೇಳೆ ಮಾಡದಿರಿ.
  • ಉಪ್ಪು, ಮಸಾಲೆಯುಕ್ತ, ಎಣ್ಣೆಯುಕ್ತ ಮತ್ತು ಹೆಚ್ಚಿನ ಪ್ರೋಟೀನ್ ಆಹಾರಗಳಿಂದ ತಾತ್ಕಾಲಿಕವಾಗಿ ದೂರ ಇರಿ.
  • ನಿಮ್ಮ ಸಾಕುಪ್ರಾಣಿಗಳು ಮತ್ತು ಮಕ್ಕಳನ್ನು ನಿಲ್ಲಿಸಿದ ವಾಹನಗಳಲ್ಲಿ ಒಂಟಿಯಾಗಿ ಬಿಡಬೇಡಿ. ಕಾರಿನ ಗ್ಲಾಸ್‌ ಕ್ಲೋಸ್‌ ಮಾಡಬೇಡಿ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ : ಯುವ ಕೃಷಿಕರಿಗೆ ಕೃಷಿ ಬಗ್ಗೆ ಉಪಯುಕ್ತ ಮಾಹಿತಿ

ಜೆ ಎಸ್ ಬಿ ಪ್ರತಿಷ್ಠಾನ, ಕೊಳ್ಳೇಗಾಲ ಇವರ ವತಿಯಿಂದ, ಮೂರು ದಿನಗಳ 'ಸುಸ್ಥಿರ ಕೃಷಿ…

4 mins ago

ಕೆರೆಯಲ್ಲಿ ಸಾಕಿದ್ದ 1 ಲಕ್ಷ ಮೀನುಗಳ ಮಾರಣಹೋಮ : 5 ರಿಂದ 10 ಕೆಜಿಯ ಮೀನು ಸಾವಿನಿಂದ 10 ಲಕ್ಷ ನಷ್ಟ

ರೈತ(Farmer) ಎಷ್ಟೇ ಧೈರ್ಯ ಮಾಡಿ ಏನೇ ಮಾಡಿದರು ನಷ್ಟ ಅನ್ನೋದು ಒಂದು ಕಡೆಯಿಂದ…

20 mins ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ – ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮಳೆ

ಈ ಬಾರಿ ಮುಂಗಾರು(Mansoon) ಬೇಗ ಆರಂಭವಾಗುವ ನಿರೀಕ್ಷೆಯಿದೆ. ಬಿರು ಬಿಸಿಲಿನಿಂದ ತತ್ತರಿಸಿದ ಜನತೆಗೆ…

39 mins ago

ಭಾರತ ಚಂದ್ರನಂಗಳದಲ್ಲಿದೆ : ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ : ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ತಾನು ಸತ್ತರು ಪರವಾಗಿಲ್ಲ, ಇನ್ನೊಬ್ಬರು ಬದುಕಬಾರದು ಅನ್ನುವ ಜಾಯಮಾನದ ದೇಶ ಪಾಕಿಸ್ತಾನ(Pakistana). ತನ್ನ…

56 mins ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು – ಈ ಬಾರಿ ಆನೆಗಳ ಸಂಖ್ಯೆ ಏರಲಿದೆಯಾ..?

ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…

4 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

4 hours ago