ಇದುವರೆಗೂ ಕೇಳದ ಶಬ್ದಗಳು ಈಗ ಕೇಳುತ್ತಿವೆ. ಹೀಟ್ ವೇವ್, ಎಲ್ನಿನೋ.. ಹೀಟ್ ಬರ್ನ್, ಹೀಟ್ ಸ್ಟ್ರೋಕ್…!. ಹಿಂದೆಲ್ಲಾ ಇಂತಹ ಶಬ್ದಗಳ ಬಳಕೆಗೆ ಅವಕಾಶ ಇರಲಿಲ್ಲ. ಹಸಿರಿ ಹಸಿರಾಗಿದ್ದ ಗ್ರಾಮೀಣ ಭಾಗದಲ್ಲೂ ಇಂದು ಬಿಸಿಬಿಸಿಯಾದ ಮಾತುಗಳು.. ನೀರಿಲ್ಲ, ಯಬೋ ಬಿಸಿಲು…!. ಈಗ ಬಿಸಿಯಾದ ತಾಪಮಾನದಿಂದ ರಕ್ಷಣೆಗೆ ಹೇಗೆ .. ? ಈ ಬಗ್ಗೆ ಇಲಾಖೆಗಳು ಮಾಹಿತಿ ನೀಡುತ್ತವೆ. ದೇಶದೆಲ್ಲೆಡೆ ಆಗಾಗ ಈ ಎಚ್ಚರಿಕೆ ನೀಡಲಾಗುತ್ತಿದೆ.
ತೀವ್ರತರವಾದ ಶಾಖದಿಂದ ನಮ್ಮನ್ನು ನಾವು ರಕ್ಷಿಸುಕೊಳ್ಳುವುದು ಹೇಗೆ..? ಅನುಸರಿಸಬೇಕಾದ ಸಲಹೆಗಳು ಏನು..? : ಈ ಬಾರಿ ದೇಶದಲ್ಲಿ ಬೇಸಿಗೆಯ ಆರಂಭದೊಂದಿಗೆ, ಅನೇಕ ಪ್ರದೇಶಗಳಿಗೆ ಹೀಟ್ವೇವ್ ಎಚ್ಚರಿಕೆಗಳನ್ನು ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ತಮಿಳುನಾಡು, ಕರ್ನಾಟಕ, ತೆಲಂಗಾಣ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ಮತ್ತು ರಾಯಲಸೀಮೆಯ ಹಲವು ಕಡೆಗಳಲ್ಲಿ ಹೀಟ್ವೇವ್ ಎಚ್ಚರಿಕೆಗಳನ್ನು ನೀಡಿದೆ. ಒಂದು ಸ್ಥಳದ ಗರಿಷ್ಠ ತಾಪಮಾನವು 40-ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ತಲುಪಿದಾಗ ಹೀಟ್ ವೇವ್ ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ಹವಾಮಾನವು ಮಾನವನ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ಪರಿಸರದ ಮೇಲೂ ಹೆಚ್ಚಿನ ಪರಿಣಾಮ ಉಂಟುಮಾಡುತ್ತದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಮಂಗಳೂರು, ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಹಲವು ಕಡೆ ತಾಪಮಾನ ಏರಿಕೆಯಾಗಿದೆ.
ವಿಪರೀತ ಶಾಖದಿಂದ ರಕ್ಷಿಸಿಕೊಳ್ಳುವುದು ಹೇಗೆ ? :
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…